ಮಲ್ಲಿಕಾರ್ಜುನ ಖರ್ಗೆ ಮತ್ತು ಎಸ್.ಎಸ್ ಕೃಷ್ಣ 
ರಾಜಕೀಯ

'ಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, ಕೃಷ್ಣ CM ಆದ್ರು; ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಮ ಮಾಡಿದಂತಾಯ್ತು!'

ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಪ್ರಯತ್ನಿಸಿದೆ, ಆದ್ರೆ ಸಿಎಂ ಆಗಿದ್ದು ಎಸ್.ಎಂ ಕೃಷ್ಣಾ ಅವರು‌. ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಯಿತು.

ವಿಜಯಪುರ: ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪರೋಕ್ಷವಾಗಿ ನೋವು ತೋಡಿಕೊಂಡಿದ್ದಾರೆ.

ಬಿಎಲ್​​ಡಿ ಸಂಸ್ಥೆಯ ಸಂಸ್ಥಾಪಕ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ ಅದು ಕೈ ತಪ್ಪಿತು. 1999ರಲ್ಲಿ ಸಿಎಂ ಆಗೋದು ಕೈತಪ್ಪಿತು. ನಾನು ವಿಧಾನಸಭಾದ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ. 4 ತಿಂಗಳ ಹಿಂದೆ ಪಕ್ಷ ಸೇರಿದ್ದ ಎಸ್.ಎಂ ಕೃಷ್ಣ ಮುಖ್ಯಮಂತ್ರಿ ಆದರು ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಪ್ರಯತ್ನಿಸಿದೆ, ಆದ್ರೆ ಸಿಎಂ ಆಗಿದ್ದು ಎಸ್.ಎಂ ಕೃಷ್ಣಾ ಅವರು‌. ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಯಿತು. ಸ್ವಾಮೀಜಿಗಳೇ ನಾನು ಸೇವೆ ಸಲ್ಲಿಸಿದ್ದು ನೀರಲ್ಲಿ ಹೋಯಿತು ಎಂದು ಮತ್ತೊಮ್ಮೆ ಹೇಳಿದರು. ಬ್ಲಾಕ್ ಅಧ್ಯಕ್ಷನಿಂದ ಈಗ ಎಐಸಿಸಿ ಅಧ್ಯಕ್ಷನಾಗಿದ್ದೇನೆ. ಅಧಿಕಾರದ ಬೆನ್ನು ಹತ್ತಿ ನಾನು ಎಂದಿಗೂ ಹೋಗಲಿಲ್ಲ. ಅದಾಗೇ ನನ್ನ ಬಳಿಗೆ ಬಂದಿದೆ. ಪ್ರಯತ್ನದ ಫಲದಿಂದ ಸಿಕ್ಕಿದೆ ಎಂದು ಹೇಳಿದ್ದಾರೆ. ಬ್ಲಾಕ್ ಅಧ್ಯಕ್ಷನಿಂದ ಈಗ ಎಐಸಿಸಿ ಅಧ್ಯಕ್ಷನಾಗಿದ್ದೇನೆ. ಅಧಿಕಾರದ ಬೆನ್ನು ಹತ್ತಿ ಹೋಗಲಿಲ್ಲ. ಅದಾಗೇ ಸಿಕ್ಕಿದೆ ಎಂದಿದ್ದಾರೆ.

ರಜಾಕರ ಹಾವಳಿಯಲ್ಲಿ ನಮ್ಮ ಕುಟುಂಬ ಕಳೆದುಕೊಂಡೆ. ತಾಯಿ, ತಂಗಿ, ದೊಡ್ಡಪ್ಪ ಉಸಿರು ಚೆಲ್ಲಿದರು. ರಜಾಕರ ಹಾವಳಿ ಸಮಯದಲ್ಲಿ ಒಬ್ಬರನ್ನ ಒಬ್ಬರ ಮನೆಗೆ ಸೇರಿಸುತ್ತಿರಲಿಲ್ಲ. ನಮ್ಮ ತಂದೆ ನನ್ನನ್ನು ಬದುಕಿಸಲೆಂದು ಮಹಾರ್ ರೆಜಿಮೆಂಟ್​​ನಲ್ಲಿದ್ದ ಪುಣೆಯ ಚಿಕ್ಕಪ್ಪನ ಮನೆಗೆ ಕರೆತಂದರು. ಆದ್ರೆ ಅಲ್ಲಿ ಸ್ವಾತಂತ್ರ್ಯ ಸಿಕ್ಕ ಬಳಿಕ ಅವರು ಅಲ್ಲಿಂದ ತೆರಳಿದರು. ಆಗ ನಾವು ಅನಿವಾರ್ಯವಾಗಿ ಗುಲ್ಬರ್ಗಾಕ್ಕೆ ಬಂದು ನೆಲೆಸಬೇಕಾಯಿತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜೈಪುರ: ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಎಂಟು ರೋಗಿಗಳು ಸಜೀವ ದಹನ, ಮೂವರ ಸ್ಥಿತಿ ಗಂಭೀರ

'ಶಾಂತಿ ಇದೆ, ಕ್ರಾಂತಿ ಎಲ್ಲಿದೆ? ನಾವೆಲ್ಲರೂ ಶಾಂತಿ ಪ್ರಿಯರು'; ಸಿಎಂ ಬದಲಾವಣೆ ವಿಚಾರ 'ಅಪ್ರಸ್ತುತ': ಬಸವರಾಜ ರಾಯರೆಡ್ಡಿ

ಯಾರು ಎಷ್ಟೇ ವಿರೋಧಿಸಿದರೂ ಸಮೀಕ್ಷೆ ನಡೆಯುತ್ತದೆ, ಎಲ್ಲರೂ ಸಹಕರಿಸಿ: DCM ಡಿಕೆ ಶಿವಕುಮಾರ್ ಮನವಿ

ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರ ಮತ್ತೆ ಮುನ್ನಲೆಗೆ; ಸಿದ್ದರಾಮಯ್ಯ ಸಮ್ಮುಖದಲ್ಲೇ ಒತ್ತಾಯ

Women's World cup 2025: ಪಾಕಿಸ್ತಾನ ವಿರುದ್ಧ ಭಾರತ 88 ರನ್ ಗೆಲುವು

SCROLL FOR NEXT