ರಾಹುಲ್ ಗಾಂಧಿ 
ರಾಜಕೀಯ

ಆಗಸ್ಟ್ 4ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ; ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚುನಾವಣಾ ಆಯೋಗದ ವಿರುದ್ಧ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದೆ.

ನವದೆಹಲಿ: ಮಹಾರಾಷ್ಟ್ರದಂತೆ ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲೂ ಚುನಾವಣಾ ಆಯೋಗವು ಮತ ವಂಚನೆಗೆ ಅವಕಾಶ ನೀಡಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಚುನಾವಣಾ ಆಯೋಗ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದೆ.

ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ನಗರದಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಈ ಪಾದಯಾತ್ರೆ ನಡೆಯಲಿದೆ.

ರಾಹುಲ್ ಗಾಂಧಿ ಅವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಹಿರಿಯ ನಾಯಕರು, ಸಚಿವರು ಮತ್ತು ಶಾಸಕರು ಭಾಗವಹಿಸಲಿದ್ದಾರೆ.

ಕರ್ನಾಟಕದ ಒಂದು ಸ್ಥಾನದಲ್ಲಿ ಚುನಾವಣಾ ಆಯೋಗವು ವಂಚನೆಗೆ ಅವಕಾಶ ನೀಡಿದೆ ಎಂಬುದಕ್ಕೆ ನಮ್ಮ ಬಳಿ "ಶೇಕಡಾ 100 ರಷ್ಟು ದೃಢವಾದ ಪುರಾವೆ" ಇದೆ ಎಂದು ರಾಹುಲ್ ಗಾಂಧಿ ಇತ್ತೀಚಿಗೆ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್