ಮಲ್ಲಿಕಾರ್ಜುನ ಖರ್ಗೆ-ಸತೀಶ್ ಜಾರಕಿಹೊಳಿ ಭೇಟಿ 
ರಾಜಕೀಯ

ಖರ್ಗೆ ರಾಜ್ಯ ರಾಜಕಾರಣ ವಾಪಸ್ ಕುರಿತು ಸೋನಿಯಾ-ರಾಹುಲ್ ನಿರ್ಧಾರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿನ ಕೆಲ ಮನಸ್ತಾಪಗಳನ್ನು ತಪ್ಪಿಸಲು ಕೆಲ ನಾಯಕರನ್ನು ರಾಷ್ಟ್ರೀಯಮಟ್ಟಕ್ಕೆ ಸ್ಥಳಾಂತರಿಸುವ ಅಗತ್ಯವಿದ್ದು, ಇದಕ್ಕಾಗಿ ನಾವು ಸ್ವಲ್ಪ ಕಾಯಬೇಕಿದೆ.

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ವಾಪಸ್ಸಾಗುವ ಕುರಿತು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ನಿರ್ಧರಿಸುತ್ತಾರೆಂದು ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಹೇಳಿದ್ದಾರೆ.

1999 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನಿರಾಕರಿಸಲಾಗಿತ್ತು ಎಂದ ಖರ್ಗೆಯವರ ಹೇಳಿಕೆ ಕುರಿತು ಸತೀಶ್ ಜಾರಕಿಹೊಳಿಯವರು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರಾಗಿದ್ದು, ಮುಖ್ಯಮಂತ್ರಿಯಾಗಬಾರದು ಎಂದಲ್ಲ... ಎಲ್ಲರಿಗೂ ಉನ್ನತ ಹುದ್ದೆಯನ್ನು ಅಲಂಕರಿಸುವ ಆಸೆ ಇರುತ್ತದೆ. ಕರ್ನಾಟಕದಲ್ಲಿ ಎರಡು ಅಥವಾ ಮೂರು ಶಕ್ತಿ ಕೇಂದ್ರಗಳನ್ನು ತಪ್ಪಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಲ್ಲಿಕಾರ್ಜುುನ ಖರ್ಗೆ ಅವರನ್ನು ರಾಷ್ಟ್ರೀಯ ರಾಜಕೀಯಕ್ಕೆ ಕರೆದುಕೊಂಡರು. ಇದೀಗ ಖರ್ಗೆ ಅವರನ್ನು ರಾಜ್ಯ ರಾಜಕಾರಣಕ್ಕೆ ಮರಳಿ ಕಳುಹಿಸುವ ಬಗ್ಗೆಯೂ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಹೇಳಿದರು.

ರಾಜ್ಯದಲ್ಲಿನ ಕೆಲ ಮನಸ್ತಾಪಗಳನ್ನು ತಪ್ಪಿಸಲು ಕೆಲ ನಾಯಕರನ್ನು ರಾಷ್ಟ್ರೀಮಟ್ಟಕ್ಕೆ ಸ್ಥಳಾಂತರಿಸುವ ಅಗತ್ಯವಿದ್ದು, ಇದಕ್ಕಾಗಿ ನಾವು ಸ್ವಲ್ಪ ಕಾಯಬೇಕಿದೆ. ಹೈಕಮಾಂಡ್ ಕಾರ್ಯತಂತ್ರ ರೂಪಿಸಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ಶಾಸಕರು ಮತ್ತು ಸಚಿವರನ್ನು ಭೇಟಿ ಮಾಡಿದ್ದನ್ನು ಸಮರ್ಥಿಸಿಕೊಂಡ ಅವರು, ಸಭೆ ಕರೆಯುವ ಅಧಿಕಾರ ಅವರಿಗಿದೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮೊದಲು ಪಕ್ಷದ ಶಾಸಕರನ್ನು ಭೇಟಿ ಮಾಡಿದ್ದರು, ಈಗ ಸಿಎಂ ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ಅವರೂ ಕಾಂಗ್ರೆಸ್ ಶಾಸಕರ ಸಭೆಯನ್ನು ಕರೆಯಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಬಳ್ಳಾರಿಯಲ್ಲಿ 36 ಜೀನ್ಸ್ ಘಟಕಗಳು ಸ್ಥಗಿತ: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ, 22 ಕೋಟಿ ರೂ. ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಿಎಂ ಅನುಮೋದನೆ

KPCC ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಬೇಕು: ಸಚಿವ ಸತೀಶ್ ಜಾರಕಿಹೊಳಿ

ಎರಡೂವರೆ ವರ್ಷಗಳ ಕಾಂಗ್ರೆಸ್ ಆಡಳಿತ ಕನ್ನಡಿಗರಿಗೆ ಕೊಟ್ಟಿದ್ದು ಕೇವಲ ದೌರ್ಭಾಗ್ಯಗಳನ್ನ: ಆರ್.ಅಶೋಕ್

ಡಿ. 8ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆಗೆ BJP ಆಗ್ರಹ

SCROLL FOR NEXT