ಮಲ್ಲಿಕಾರ್ಜುನ ಖರ್ಗೆ-ಸತೀಶ್ ಜಾರಕಿಹೊಳಿ ಭೇಟಿ 
ರಾಜಕೀಯ

ಖರ್ಗೆ ರಾಜ್ಯ ರಾಜಕಾರಣ ವಾಪಸ್ ಕುರಿತು ಸೋನಿಯಾ-ರಾಹುಲ್ ನಿರ್ಧಾರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿನ ಕೆಲ ಮನಸ್ತಾಪಗಳನ್ನು ತಪ್ಪಿಸಲು ಕೆಲ ನಾಯಕರನ್ನು ರಾಷ್ಟ್ರೀಯಮಟ್ಟಕ್ಕೆ ಸ್ಥಳಾಂತರಿಸುವ ಅಗತ್ಯವಿದ್ದು, ಇದಕ್ಕಾಗಿ ನಾವು ಸ್ವಲ್ಪ ಕಾಯಬೇಕಿದೆ.

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ವಾಪಸ್ಸಾಗುವ ಕುರಿತು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ನಿರ್ಧರಿಸುತ್ತಾರೆಂದು ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಹೇಳಿದ್ದಾರೆ.

1999 ರಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನಿರಾಕರಿಸಲಾಗಿತ್ತು ಎಂದ ಖರ್ಗೆಯವರ ಹೇಳಿಕೆ ಕುರಿತು ಸತೀಶ್ ಜಾರಕಿಹೊಳಿಯವರು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರಾಗಿದ್ದು, ಮುಖ್ಯಮಂತ್ರಿಯಾಗಬಾರದು ಎಂದಲ್ಲ... ಎಲ್ಲರಿಗೂ ಉನ್ನತ ಹುದ್ದೆಯನ್ನು ಅಲಂಕರಿಸುವ ಆಸೆ ಇರುತ್ತದೆ. ಕರ್ನಾಟಕದಲ್ಲಿ ಎರಡು ಅಥವಾ ಮೂರು ಶಕ್ತಿ ಕೇಂದ್ರಗಳನ್ನು ತಪ್ಪಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಲ್ಲಿಕಾರ್ಜುುನ ಖರ್ಗೆ ಅವರನ್ನು ರಾಷ್ಟ್ರೀಯ ರಾಜಕೀಯಕ್ಕೆ ಕರೆದುಕೊಂಡರು. ಇದೀಗ ಖರ್ಗೆ ಅವರನ್ನು ರಾಜ್ಯ ರಾಜಕಾರಣಕ್ಕೆ ಮರಳಿ ಕಳುಹಿಸುವ ಬಗ್ಗೆಯೂ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಹೇಳಿದರು.

ರಾಜ್ಯದಲ್ಲಿನ ಕೆಲ ಮನಸ್ತಾಪಗಳನ್ನು ತಪ್ಪಿಸಲು ಕೆಲ ನಾಯಕರನ್ನು ರಾಷ್ಟ್ರೀಮಟ್ಟಕ್ಕೆ ಸ್ಥಳಾಂತರಿಸುವ ಅಗತ್ಯವಿದ್ದು, ಇದಕ್ಕಾಗಿ ನಾವು ಸ್ವಲ್ಪ ಕಾಯಬೇಕಿದೆ. ಹೈಕಮಾಂಡ್ ಕಾರ್ಯತಂತ್ರ ರೂಪಿಸಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ಶಾಸಕರು ಮತ್ತು ಸಚಿವರನ್ನು ಭೇಟಿ ಮಾಡಿದ್ದನ್ನು ಸಮರ್ಥಿಸಿಕೊಂಡ ಅವರು, ಸಭೆ ಕರೆಯುವ ಅಧಿಕಾರ ಅವರಿಗಿದೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮೊದಲು ಪಕ್ಷದ ಶಾಸಕರನ್ನು ಭೇಟಿ ಮಾಡಿದ್ದರು, ಈಗ ಸಿಎಂ ಜಿಲ್ಲಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ಅವರೂ ಕಾಂಗ್ರೆಸ್ ಶಾಸಕರ ಸಭೆಯನ್ನು ಕರೆಯಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್