ಬಿಜೆಪಿ-ಜೆಡಿಎಸ್ ನಾಯಕರು  
ರಾಜಕೀಯ

ಜಿಲ್ಲಾ-ತಾಲ್ಲೂಕು ಪಂಚಾಯಿತಿ ಚುನಾವಣೆ: BJP-JDS ಪ್ರತ್ಯೇಕ ಸ್ಪರ್ಧೆ ಸಾಧ್ಯತೆ

ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ವಿಧಾನಸಭಾ ಉಪಚುನಾವಣೆ ಸೇರಿದಂತೆ ನಂತರದ ಎಲ್ಲಾ ಚುನಾವಣೆಗಳಲ್ಲಿ ಎರಡೂ ಮೈತ್ರಿ ಪಕ್ಷಗಳಾಗಿಯೇ ಸ್ಪರ್ಧೆಗಿಳಿದಿತ್ತು.

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗಲಿದ್ದು, ಚುನುವಾಣೆಯಲ್ಲಿ ಮೈತ್ರಿ ಪಕ್ಷಗಳಾ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ.

ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ವಿಧಾನಸಭಾ ಉಪಚುನಾವಣೆ ಸೇರಿದಂತೆ ನಂತರದ ಎಲ್ಲಾ ಚುನಾವಣೆಗಳಲ್ಲಿ ಎರಡೂ ಮೈತ್ರಿ ಪಕ್ಷಗಳಾಗಿಯೇ ಸ್ಪರ್ಧೆಗಿಳಿದಿತ್ತು.

ಆದರೆ, ಜಿಲ್ಲಾ-ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧೆಗಿಳಿಯಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್ ಹಿರಿಯ ನಾಯಕರೊಬ್ಬರು ಮಾತನಾಡಿ, ಪಕ್ಷದ ಆಂತರಿಕ ಚರ್ಚೆಯ ಸಮಯದಲ್ಲಿ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧೆಗಿಳಿಯುವಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ. ನಾವು ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಬಹುದು, ಆದರೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಸಮಯದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಪಕ್ಷವಾಗಿ ಮುಂದೆ ಬರುತ್ತೇವೆ. ಎರಡೂ ಪಕ್ಷಗಳು ಸ್ಫರ್ಧೆಗಿಳಿಯಲಿದ್ದು, ಇದು 'ಸ್ನೇಹಪರ ಹೋರಾಟ'ವಾಗಿರುತ್ತದೆ" ಎಂದು ಹೇಳಿದ್ದಾರೆ.

ಹಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಇಲ್ಲ. ಆದರೆ ಕರ್ನಾಟಕದಲ್ಲಿ, ಚುನಾವಣೆಗಳಲ್ಲಿ ಸೋಲು ಕಂಡರೂ ಹಳೆಯ ಮೈಸೂರು ಪ್ರದೇಶದ ಮೇಲೆ ಇನ್ನೂ ನಮ್ಮ ಹಿಡಿತವಿದೆ. ಎನ್‌ಡಿಎ ಪಾಲುದಾರರಾಗಿ, ನಾವು ವಿಧಾನಸಭೆ ಮತ್ತು ಇತರ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸುತ್ತೇವೆ. ಆದರೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳಲ್ಲಿ ಪ್ರಾದೇಶಿಕ ಪಕ್ಷವಾಗಿ ಪ್ರತ್ಯೇಕವಾಗಿ ಸ್ಪರ್ಧೆಗಿಳಿಯಬೇಕಾಗುತ್ತವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರ ಭೇಟಿಯ ನಂತರ ಬಿಜೆಪಿ ಕೂಡ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ.

ಪಕ್ಷದ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ನಮ್ಮದು ರಾಷ್ಟ್ರೀಯ ಪಕ್ಷ. ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತ್-ತಾಲ್ಲೂಕು ಚುನಾವಣೆಗಳನ್ನು ಘೋಷಿಸಿದಾಗ, ನಮ್ಮ ರಾಷ್ಟ್ರೀಯ ನಾಯಕರು ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ನಾವು ಅವರ ಸೂಚನೆಗಳನ್ನು ಪಾಲಿಸುತ್ತೇವೆಂದು ಹೇಳಿದ್ದಾರೆ.

ಮುಂದಿನ ಒಂದು ವಾರದಲ್ಲಿ, ಬಾಕಿ ಇರುವ ಒಂಬತ್ತು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಿಸುವ ಪ್ರಕ್ರಿಯೆಯನ್ನೂ ಪೂರ್ಣಗೊಳಿಸುತ್ತೇವೆ. ಇದು ಪೂರ್ಣಗೊಂಡ ಬಳಿಕ ಚುನಾವಣೆಗಾಗಿ ಪಕ್ಷವನ್ನು ಬಲಪಡಿಸಲು ಯೋಜನೆಗಳನ್ನು ರೂಪಿಸುತ್ತೇವೆಂದು ತಿಳಿಸಿದ್ದಾರೆ.

ರಾಜ್ಯದಲ್ಲಿ1,130 ಜಿಲ್ಲಾ ಪಂಚಾಯತ್ ಮತ್ತು 3,671 ತಾಲ್ಲೂಕು ಪಂಚಾಯತ್ ಕ್ಷೇತ್ರಗಳಿವೆ. ಪಂಚಾಯತ್ ಚುನಾವಣೆ ಕೊನೆಯದಾಗಿ 2016 ರಲ್ಲಿ ನಡೆದಿತ್ತು. ನಂತರ 2021 ರಲ್ಲಿ ನಡೆಯಬೇಕಿತ್ತು. ಆದರೆ, ನ್ಯಾಯಾಲಯದಲ್ಲಿನ ಪ್ರಕರಣಗಳು, ಕೋವಿಡ್ ಮತ್ತು ಕ್ಷೇತ್ರ ಪುನರ್ವಿಂಗಡಣೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಚುನಾವಣೆಗಳು ವಿಳಂಬವಾಗಿದ್ದವು.

ಕೆಲವು ತಿಂಗಳ ಹಿಂದೆ, ಚುನಾವಣೆ ನಡೆಸುವಂತೆ, ಸಿದ್ಧತೆಗಳ ಆರಂಭಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ನ್ಯಾಯಾಲಯ ಸೂಚನೆ ಬೆನ್ನಲ್ಲೇ ಸರ್ಕಾರ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT