ಸಿಎಂ ಸಿದ್ದರಾಮಯ್ಯ, ಗೋವಿಂದರಾಜು 
ರಾಜಕೀಯ

ಬೆಂಗಳೂರು ಕಾಲ್ತುಳಿತ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ತಲೆದಂಡ

ವಿಧಾನಸೌಧದ ಮುಂದೆ ತರಾತುರಿಯ ಸಂಭ್ರಮಾಚರಣೆಯ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಪಾತ್ರವಿತ್ತು ಎನ್ನುವ ಆರೋಪ ಕೇಳಿಬಂದಿತ್ತು.

ಬೆಂಗಳೂರು: ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.

ದುರಂತಕ್ಕೆ ಸಂಬಂಧಿಸಿದಂತೆ ನಿನ್ನೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾತುಗೊಳಿಸಿದ್ದ ರಾಜ್ಯ ಸರ್ಕಾರ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಕೆ ಗೋವಿಂದರಾಜ್‌ ಅವರಿಗೂ ಗೇಟ್‌ಪಾಸ್‌ ನೀಡಲಾಗಿದೆ.

ವಿಧಾನಸೌಧದ ಮುಂದೆ ತರಾತುರಿಯ ಸಂಭ್ರಮಾಚರಣೆಯ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಪಾತ್ರವಿತ್ತು ಎನ್ನುವ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗೋವಿಂದರಾಜು ಅವರು ತರಾತುರಿಯಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಕೆಲ ಸಚಿವರು ಗರಂ ಆಗಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಗೋವಿಂದರಾಜು ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಸರ್ಕಾರಿ ಆದೇಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್