ಡಿ.ಕೆ ಸುರೇಶ್ ಮತ್ತು ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿ ಒತ್ತಡದಲ್ಲಿದ್ದಾರೆ, ಆರೋಗ್ಯ ಸರಿಯಿಲ್ಲ; ಜೆಡಿಎಸ್ Tweet ಗಳನ್ನು ಜನರಿಗೆ ತೋರಿಸಬೇಕು: ಡಿ.ಕೆ ಸುರೇಶ್

ಕುಮಾರಸ್ವಾಮಿ ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಬೆಳಗ್ಗೆಯೊಂದು, ರಾತ್ರಿಯೊಂದು ಮಾತನಾಡುತ್ತಾರೆ.

ಬೆಂಗಳೂರು: ಆರ್‌ ಸಿಬಿ ತಂಡ ಗೆದ್ದ ನಂತರ ಕುಮಾರಸ್ವಾಮಿ ಅವರು ಹಾಗೂ ಅವರ‌ ಪಕ್ಷ ಏನೇನು ಎಕ್ಸ್ (ಟ್ವೀಟ್) ಮಾಡಿತ್ತು ಎಂಬುದನ್ನು ತಾವು (ಮಾಧ್ಯಮ) ರಾಜ್ಯದ ಜನತೆಗೆ ತೋರಿಸಬೇಕು‌. ಏಕೆಂದರೆ ಅವರು ಸುಳ್ಳು ಹೇಳುವುದರಲ್ಲಿ, ಮಾತುಗಳನ್ನು ತಿರುಗಿಸುವುದರಲ್ಲಿ ನಿಸ್ಸೀಮರು" ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಸುರೇಶ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೆ. ಅವರು ಒತ್ತಡದಲ್ಲಿ ಇದ್ದಾರೆ, ಆರೋಗ್ಯ ಸರಿಯಿಲ್ಲ ಎನಿಸುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ ಈ ರಾಷ್ಟ್ರದ ಸೇವೆ ಮಾಡಲಿ ಎಂದರು‌.

ರಾಜಕುಮಾರ್ ಅವರ ನಿಧನದ ವೇಳೆಯ ಘಟನೆಗಳನ್ನು ಶಿವಕುಮಾರ್ ಬಿಚ್ಚಿಡುವುದು ಏನಿಲ್ಲ. ನಾನೇ ಒಪ್ಪಿಕೊಳ್ಳುವೆ ಎನ್ನುವ ಕುಮಾರಸ್ವಾಮಿ ಅವರ ಉತ್ತರದ ಬಗ್ಗೆ ಹೇಳಿದಾಗ, "ಕುಮಾರಸ್ವಾಮಿ ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಬೆಳಗ್ಗೆಯೊಂದು, ರಾತ್ರಿಯೊಂದು ಮಾತನಾಡುತ್ತಾರೆ" ಎಂದು ತಿಳಿಸಿದರು.

ಕಾಲ್ತುಳಿತ ದುರಂತದಿಂದ ಸರ್ಕಾರ ಪಲಾಯನ ಮಾಡುತ್ತಿಲ್ಲ. ಇತ್ತೀಚೆಗೆ ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತದಿಂದ 3 ಸಾವಿರ ಜನ ಸತ್ತು ಹೋದರು.‌ ಇದನ್ನು ಅಲ್ಲಿನ ಸರ್ಕಾರ ಮುಚ್ಚಿ ಹಾಕಲು ಪ್ರಯತ್ನ ಮಾಡಿತು. ಅದು ಯಾರ ಪ್ರಾಯೋಜಿತ ಕಾರ್ಯಕ್ರಮ? ಬಿಜೆಪಿ, ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳ? ಎಂದು ತಿರುಗೇಟು ನೀಡಿದರು

ಇದು ಸಾಂತ್ವನ ಹೇಳುವ ಸಮಯ. ಕುಟುಂಬದ ಸದಸ್ಯರನ್ನು ಕಳೆದುಕೊಂಡಿರುವವರಿಗೆ ನಾವು ಸಾಂತ್ವನ ಹೇಳಬೇಕೆ ಹೊರತು ರಾಜಕೀಯ ಮಾಡಬಾರದು. ದಿನಕ್ಕೊಂದು ಹೇಳಿಕೆ ನೀಡುವುದು ಎಷ್ಟು ಸರಿಯೆಂದು ಮಾಧ್ಯಮಗಳು ಹೇಳಬೇಕು ಎಂದರು.

ಈ ಚರ್ಚೆಗೆ ಎಲ್ಲರೂ ವಿರಾಮ ಹಾಕಬೇಕು. ಏಕೆಂದರೆ ರಾಜ್ಯದ ಪ್ರಗತಿಯ ಬಗ್ಗೆ, ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಚಿಂತನೆ, ಸಲಹೆ ಸೂಚನೆಗಳನ್ನು ನೀಡಬೇಕಾಗುತ್ತದೆ. ರಾಜಕೀಯ ಚಿಂತನೆಯ ಅವಶ್ಯಕತೆಯಿದೆ. ಅದನ್ನು ಬಿಟ್ಟು ಅವರು ರಾಜಿನಾಮೆ ನೀಡಲಿ. ಇವರು ನೀಡಲಿ ಎಂದರೆ? ನಾವು ಸಹ ಪ್ರಧಾನಿ, ಕುಮಾರಸ್ವಾಮಿ ಸೇರಿದಂತೆ ಅವರಿವರ ರಾಜಿನಾಮೆ ನೀಡಲಿ ಎಂದು ಕೇಳಬಹುದು. ನೈತಿಕತೆಯ ಪ್ರಶ್ನೆ ಬಂದಾಗ ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಬಹುದು" ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರ ಆಯ್ಕೆ ವಿಚಾರವಾಗಿ ಕಾರ್ಯಕರ್ತರ ಅಸಮಾಧಾನದ ಬಗ್ಗೆ ಕೇಳಿದಾಗ, "ನನಗೆ ಇದರ ಬಗ್ಗೆ ಮಾಹಿಯಿಲ್ಲ. ಇದನ್ನು ಪಕ್ಷದ ವರಿಷ್ಠರ ತೀರ್ಮಾನ. ಮುಖ್ಯಮಂತ್ರಿಗಳ ಆಯ್ಕೆ. ಅವರ ತೀರ್ಮಾನವನ್ನ ಪಕ್ಷ ಸ್ವಾಗತ ಮಾಡುತ್ತದೆ ಎಂದು ತಿಳಿಸಿದರು‌.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT