ಲಖನ್ ಜಾರಕಿಹೊಳಿ 
ರಾಜಕೀಯ

ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶನ: ಲಖನ್ ಜಾರಕಿಹೊಳಿ ಮತದತ್ತ ಎಲ್ಲರ 'ಕಣ್ಣು'!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು; ಎನ್‌ಆರ್‌ಐ ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಮತ್ತು ದಲಿತ ಮುಖಂಡ ಸಾಗರ್ ಅವರ ಹೆಸರು ಫೈನಲ್

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿಗೆ ಪಕ್ಷದ ನಾಲ್ವರು ನಾಮನಿರ್ದೇಶಿತರನ್ನು ಕಾಂಗ್ರೆಸ್ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು; ಎನ್‌ಆರ್‌ಐ ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಮತ್ತು ದಲಿತ ಮುಖಂಡ ಸಾಗರ್ ಅವರ ಹೆಸರುಗಳನ್ನು ಪಕ್ಷದ ಹೈಕಮಾಂಡ್ ನಿಂದ ಫೈನಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯಪಾಲರ ಒಪ್ಪಿಗೆ ಪಡೆದ ನಂತರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಪ್ರಮಾಣ ವಚನದೊಂದಿಗೆ 75 ಸದಸ್ಯ ಬಲದ ಸದನದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಂತೆಯೇ ಕಾಂಗ್ರೆಸ್ 37 ಸದಸ್ಯರನ್ನು ಹೊಂದಲಿದೆ.

ಲಖನ್ ಜಾರಕಿಹೊಳಿ ಮತದತ್ತ ಕಣ್ಣು:

ಸಚಿವ ಸತೀಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರ ಮತದತ್ತ ಈಗ ಎಲ್ಲರ ಕಣ್ಣು ನೆಟ್ಟಿದೆ. ಲಖನ್ ಅವರಿಗೆ ದೊರೆಯುವ ಮತವು ಸದನದಲ್ಲಿ ಅಧಿಕಾರದ ಸಮತೋಲನವನ್ನು ಛಿದ್ರಗೊಳಿಸಬಹುದು ಅಥವಾ ಗಟ್ಟಿಗೊಳಿಸಬಹುದು. ಕಾಂಗ್ರೆಸ್ ಅವರನ್ನು ಗೆಲ್ಲಿಸಿದರೆ, ಪ್ರಸ್ತುತ ಬಿಜೆಪಿ ಹೊಂದಿರುವ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಪಕ್ಷ ವಶಪಡಿಸಿಕೊಳ್ಳಲಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಅವರನ್ನು ರಮೇಶ್ ಜಾರಕಿಹೊಳಿ ಮನವೊಲಿಸುವ ಸಾಧ್ಯತೆಯಿದೆ.

ಮೇಲ್ಮನೆಗೆ ಬೇರೆ ಪಕ್ಷದವರು ಅಧ್ಯಕ್ಷರಾಗಿರುವ ನಿದರ್ಶನವಿದೆ. ರಾಮಕೃಷ್ಣ ಹೆಗಡೆ ಸಿಎಂ ಆಗಿದ್ದಾಗ ಕಾಂಗ್ರೆಸ್ ಸದಸ್ಯ ರೆಹಮಾನ್ ಖಾನ್ ಸುಮಾರು ಎರಡು ವರ್ಷಗಳ ಕಾಲ ಸಭಾಪತಿಯಾಗಿದ್ದರು. ಒಂದು ವೇಳೆ ಕಾಂಗ್ರೆಸ್‌ಗೆ ಲಖನ್‌ ಮತ ಬಿದ್ದರೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ. ಅನುಭವಿ ಬಿ.ಕೆ.ಹರಿಪ್ರಸಾದ್ ಒಂದು ಕಾಲದಲ್ಲಿ ಸಭಾಪತಿ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದವರು. ಈಗ ಅವರನ್ನು ಹರಿಯಾಣದ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಏರಿಸಲಾಗಿದೆ. ಅವರ ಮುಂದಿನ ಪಾತ್ರ ಯಾವುದು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಸಚಿವ ಬೋಸ ರಾಜು, ಮುಖ್ಯ ಸಚೇತಕ ಸಲೀಂ ಅಹಮದ್ ಮತ್ತು ಮಾಜಿ ಸಚಿವ ನಾಸಿರ್ ಅಹಮದ್ ಅವರು ಸಭಾಪತಿ ಸ್ಥಾನಕ್ಕೆ ಆಯ್ಕೆಯಾಗಬಹುದು. ಆದರೆ, ಕಾಂಗ್ರೆಸ್ ತನ್ನ ಆದ್ಯತೆಗ್ಗೆ ತಕ್ಕಂತೆ ಅವರಿಗೆ ಹೊಣೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?