ಪ್ರಧಾನಿ ಮೋದಿ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜಕೀಯ

ಪ್ರಚಾರದಿಂದ ಪ್ರಧಾನಿ ಮೋದಿ ಬದುಕಿದ್ದಾರೆ, 11 ವರ್ಷ ಪೂರೈಸಿದ ಕೇಂದ್ರ ಸರ್ಕಾರಕ್ಕೆ ಶೂನ್ಯ ಅಂಕ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರು ಪ್ರಚಾರದಿಂದಷ್ಟೇ ಬದುಕಿದ್ದಾರೆ. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ ಎಂದರು, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬದುಕಿರುವುದು ಪ್ರಚಾರದಿಂದ. 11 ವರ್ಷ ಪೂರೈಸಿದ ಅವರ ಸರ್ಕಾರಕ್ಕೆ ಶೂನ್ಯ ಅಂಕ ಕೊಡುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಪ್ರಚಾರದಿಂದಷ್ಟೇ ಬದುಕಿದ್ದಾರೆ. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ ಎಂದರು, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು, ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು, ಇವೆಲ್ಲಾ ಆಗಿದೆಯಾ? ಕೊನೆಗೆ ಕೇಂದ್ರ ಸರ್ಕಾರದ ವಿರುದ್ಧ ರೈತರೇ ಒಂದು ವರ್ಷ ಕಾಲ ಚಳುವಳಿಯನ್ನು ಮಾಡಿದರು ಎಂದು ಹೇಳಿದರು.

ಮೋದಿಯವರು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನೇ ಮಾಡಿಲ್ಲ. ತಮ್ಮ ಸರ್ಕಾರಕ್ಕೆ ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಅವರು ಪ್ರಚಾರ ನೀಡುತ್ತಿದ್ದಾರೆಂದು ತಿಳಿಸಿದರು.

ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ, ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿ ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಜಾರಿ ಮಾಡಿದರು.

ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಅವರೇ ಪ್ರಧಾನಿಗಳಾದಾಗ ಏನು ಮಾಡಿದರು? ನಿರ್ಮಲಾ ಸೀತಾರಾಮನ್ ಅವರು ರೂ.5,300 ಕೋಟಿಗಳನ್ನು ರಾಜ್ಯಕ್ಕೆ ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15ನೇ ಹಣಕಾಸು ಆಯೋಗದವರು ಕರ್ನಾಟಕಕ್ಕೆ ರೂ.11,495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ರಾಜ್ಯ ಬಿಜೆಪಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಪ್ರಶ್ನೆ ಮಾಡುವುದನ್ನು ಬಿಟ್ಟು, ಅಪಪ್ರಚಾರ ಮಾಡುತ್ತಿದೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT