ರಮೇಶ್ ಬಾಬು, ದಿನೇಶ್ ಅಮಿನ್ ಮಟ್ಟು, ಆರತಿ ಕೃಷ್ಣ ಮತ್ತು ಡಿ.ಜಿ ಸಾಗರ್ 
ರಾಜಕೀಯ

ವಿಧಾನ ಪರಿಷತ್‌ ನಾಮನಿರ್ದೇಶನ: ಕಾಂಗ್ರೆಸ್ ನಲ್ಲಿ ಅಸಮಾಧಾನ; ಪಟ್ಟಿ ಇನ್ನೂ ತಲುಪಿಲ್ಲ ರಾಜಭವನ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯ ಹೊರತಾಗಿಯೂ, ಪತ್ರವು ಮುಖ್ಯಮಂತ್ರಿ ಕಚೇರಿಯಲ್ಲಿ (CMO) ಸಿಲುಕಿಕೊಂಡಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜ್ಯ ಸರ್ಕಾರವು ಮೇಲ್ಮನೆಗೆ ನಾಲ್ಕು ಹೆಸರುಗಳ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ, ಔಪಚಾರಿಕ ಕಾರ್ಯಗಳನ್ನು ಪೂರ್ಣಗೊಳಿಸಲು ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ರಾಜಭವನಕ್ಕೆ ಕಳುಹಿಸಲು ತಡಕಾಡುತ್ತಿರುವಂತೆ ತೋರುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯ ಹೊರತಾಗಿಯೂ, ಪತ್ರವು ಮುಖ್ಯಮಂತ್ರಿ ಕಚೇರಿಯಲ್ಲಿ (CMO) ಸಿಲುಕಿಕೊಂಡಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮೂಲಗಳು ತಿಳಿಸಿವೆ.

ಜನತಾದಳ (ಜಾತ್ಯತೀತ) ಹಿನ್ನೆಲೆ ಹೊಂದಿರುವ ರಮೇಶ್ ಬಾಬು ಅವರನ್ನು ನಾಮನಿರ್ದೇಶನ ಮಾಡಲು ಪಕ್ಷದೊಳಗೆ ಆಕ್ಷೇಪಣೆ ಇದೆ ಎಂದು ಮೂಲಗಳು ತಿಳಿಸಿವೆ. ಬಾಬು ಈ ಹಿಂದೆ ಜೆಡಿಎಸ್ ನಾಮನಿರ್ದೇಶನದ ಮೇಲೆ ಎಂಎಲ್‌ಸಿಯಾಗಿ ಸೇವೆ ಸಲ್ಲಿಸಿದ್ದರು. ಅವರು 2020 ರಲ್ಲಿ ಕಾಂಗ್ರೆಸ್ ಸೇರಿದರು. ಬಾಬು ಅವರ ಹೆಸರನ್ನು ಬದಲಾಯಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ನಾಲ್ಕು ಸ್ಥಾನಗಳಲ್ಲಿ, ಮೂರು ಎಂಎಲ್‌ಸಿಗಳ ಅವಧಿ ಆರು ವರ್ಷಗಳವರೆಗೆ ಮತ್ತು ಉಳಿದ ಒಂದು ಸ್ಥಾನ (ಸಿಪಿ ಯೋಗೇಶ್ವರ ರಾಜೀನಾಮೆ ನೀಡಿದ ನಂತರ ಖಾಲಿಯಾಗಿದೆ) ಖಾಲಿ ಉಳಿದಿದೆ.

ಯಾರಿಗೆ ಯಾವುದನ್ನು ನೀಡಬೇಕೆಂಬ ಗೊಂದಲವಿದೆ ಹೀಗಾಗಿ ಸಮಯ ತೆಗೆದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ. ಒಂದು ವರ್ಷದ ಅವಧಿಯ ಎಂಎಲ್‌ಸಿ ನಾಮನಿರ್ದೇಶನವನ್ನು ತೆಗೆದುಕೊಳ್ಳಲು ಅಭ್ಯರ್ಥಿಗಳು ಸಿದ್ಧರಿಲ್ಲ"ಎಂದು ಅವರು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಇರುವುದರಿಂದ, ಹೆಸರುಗಳನ್ನು ಬದಲಾಯಿಸುವ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ. ನಾಲ್ಕು ಹೆಸರುಗಳನ್ನು ಅಂತಿಮಗೊಳಿಸಿದ್ದರೂ ಕೆಲವು ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ಪರಿಗಣಿಸುವಂತೆ ಸಿಎಂ ಮತ್ತು ಉಪ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ಕು ಸ್ಥಾನಗಳೊಂದಿಗೆ, ಕಾಂಗ್ರೆಸ್ ಪರಿಷತ್ತಿನಲ್ಲಿ ಸರಳ ಬಹುಮತ ಪಡೆಯುವ ನಿರೀಕ್ಷೆಯಿದೆ. ಪಕ್ಷವು ಇತ್ತೀಚೆಗೆ ರಮೇಶ್ ಬಾಬು, ದಿನೇಶ್ ಅಮೀನ್, ಆರತಿ ಕೃಷ್ಣ ಮತ್ತು ದಲಿತ ಕಾರ್ಯಕರ್ತ ಡಿ.ಜಿ. ಸಾಗರ್ ಅವರ ಹೆಸರುಗಳನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶಿತರನ್ನಾಗಿ ಅನುಮೋದಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT