ಬಾಲಕೃಷ್ಣ 
ರಾಜಕೀಯ

ಡಿ.ಕೆ ಬ್ರದರ್ಸ್ ಕೃಪಾಶಿರ್ವಾದದಿಂದ ನನ್ನ ಕ್ಷೇತ್ರಕ್ಕೆ ಅನುದಾನ ಸಿಕ್ಕಿದೆ: ಉರಿಯೋ ಬೆಂಕಿಗೆ ತುಪ್ಪ ಸುರಿದ ಶಾಸಕ ಬಾಲಕೃಷ್ಣ

ತಮಗೆ ಅನುದಾನ ಸಿಗುತ್ತಿಲ್ಲ ಎಂಬ ಹಲವು ಶಾಸಕರ ದೂರಿನ ನಡುವೆ ಬಾಲಕೃಷ್ಣ ಹೇಳಿಕೆ ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಬ್ರದರ್ಸ್ ಆಶೀರ್ವಾದ ಇದ್ದರೆ ಮಾತ್ರ ಅನುದಾನ ಸಿಗುತ್ತದಾ ಎಂಬ ಪ್ರಶ್ನೆ ಮೂಡಿದೆ.

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ ಸುರೇಶ್ ಅವರ ಕೃಪಾಶೀರ್ವಾದದಿಂದ ನನ್ನ ಕ್ಷೇತ್ರಕ್ಕೆ ಅಗತ್ಯ ಅನುದಾನ ಸಿಗುತ್ತಿದೆ ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆ ಉರಿವ ಬೆಂಕಿಗೆ ತುಪ್ಪ ಸುರಿವಂತೆ ಮಾಡಿದೆ.

ತಮಗೆ ಅನುದಾನ ಸಿಗುತ್ತಿಲ್ಲ ಎಂಬ ಹಲವು ಶಾಸಕರ ದೂರಿನ ನಡುವೆ ಬಾಲಕೃಷ್ಣ ಹೇಳಿಕೆ ಶಾಸಕರ ಕೆಂಗಣ್ಣಿಗೆ ಗುರಿಯಾಗಿದೆ. ಡಿಕೆ ಬ್ರದರ್ಸ್ ಆಶೀರ್ವಾದ ಇದ್ದರೆ ಮಾತ್ರ ಅನುದಾನ ಸಿಗುತ್ತಾ ಎಂದು ಹಲವರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ರಾಜೀನಾಮೆ ನೀಡುತ್ತೇವೆ ಎಂಬುದು ಕೆಲವರ ವೈಯಕ್ತಿಕ ನಿರ್ಧಾರ. ಅದನ್ನು ಸೂಕ್ತ ವೇದಿಕೆಯಲ್ಲಿ ವ್ಯಕ್ತಪಡಿಸಬೇಕು ಎಂದು ಅಭಿಪ್ರಾಯಪಟ್ಟರು. ಸಂಬಂಧಪಟ್ಟ ಸಚಿವರು ಅಥವಾ ಜಿಲ್ಲಾ ಸಚಿವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಣಕ್ಕಾಗಿ ಮನವಿ ಮಾಡಬೇಕು. "ವಾಸ್ತವವಾಗಿ, ಅಭಿವೃದ್ಧಿ ಕಾರ್ಯಗಳಿಗಾಗಿ ಸಿಎಂ ಪ್ರತಿ ಕ್ಷೇತ್ರಕ್ಕೆ 50 ಕೋಟಿ ರೂ.ಗಳನ್ನು ನಿಗದಿಪಡಿಸಿದ್ದಾರೆ. ಇದನ್ನು ಬಿಡುಗಡೆ ಮಾಡಿದ ನಂತರ ಶಾಸಕರು ಕೆಲಸಗಳನ್ನು ಎಂದು ಅವರು ಹೇಳಿದರು.

ಇನ್ನೂ ಸಿಎಂ ಬಳಿ ಈಗ ಹಣ ಇಲ್ಲ, ಕೇಂದ್ರದ ಬಳಿ ಕೇಳಬೇಕು ಎಂಬ ಪರಮೇಶ್ವರ್ ಹೇಳಿಕೆ ವಿಚಾರ ಕುರಿತು ಮಾತನಾಡಿ, ಕೇಂದ್ರದಿಂದ ನಮಗೆ ಬರಬೇಕಾದ ಹಣ ಬಂದಿಲ್ಲ. ಕೇಂದ್ರದವರು ನಮಗೆ ಹಣ ಕೊಡಬೇಕು. ನಮ್ಮ ಹತ್ತಿರವೂ ಹಣ ಇದೆ, ಅದರ ಜೊತೆ ಅವರೂ ಕೊಟ್ಟರೆ ಹೆಚ್ಚು ಅಭಿವೃದ್ಧಿ ಮಾಡಬಹುದು. ಇದು ಪರಮೇಶ್ವರ್ ಅವರ ಮಾತಿನ ಅರ್ಥ. ಕೇಂದ್ರದ ಹಣಕ್ಕೆ ಹಿಂದೆಯಿಂದಲೂ ಒತ್ತಾಯ ಮಾಡಿದ್ದೇವೆ. ದೆಹಲಿಗೂ ಹೋಗಿ ಹಣ ಕೇಳಿದ್ದೇವೆ, ಅವರು ಹಣ ಕೊಟ್ಟರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಬಹುದು ಎಂದು ಪರಮೇಶ್ವರ್ ಹೇಳಿಕೆಯನ್ನ ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT