ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಇಂದಿರಾ ಗಾಂಧಿ ನಿಧನರಾಗಿದ್ದರೂ ತುರ್ತುಪರಿಸ್ಥಿತಿ ಹೇರುವ ಮನಸ್ಥಿತಿ ಕಾಂಗ್ರೆಸ್ ನಾಯಕರಲ್ಲಿ ಇನ್ನೂ ಜೀವಂತ: BSY

ಡಾ. ಬಿ.ಆರ್‌. ಅಂಬೇಡ್ಕರ್‌ ಕೊಟ್ಟಂತಹ ಪವಿತ್ರವಾದ ಸಂವಿಧಾನಕ್ಕೆ ಅಪಚಾರ ಮಾಡಿ, ತಿದ್ದುಪಡಿ ಮಾಡಿ, ತುರ್ತು ಪರಿಸ್ಥಿತಿ ಹೇರಿದಂತಹ ಮನಸ್ಸುಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು.

ಬೆಂಗಳೂರು: ಸರ್ವಾಧಿಕಾರಕ್ಕಾಗಿ ತುರ್ತು ಪರಿಸ್ಥಿತಿ ಹೇರಿದ ಇಂದಿರಾ ಗಾಂಧಿ ನಿಧನರಾಗಿರಬಹುದು, ಆದರೆ ಪಕ್ಷದಲ್ಲಿರುವವೇ ಮನಸ್ಥಿತಿ ಇಂದಿಗೂ ಬದಲಾಗಿಲ್ಲ... ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನಾವು ಮರೆಯಬಾರದು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟೀಸ್ ಆಯೋಜಿಸಿದ್ದ '1975 ರ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್- ಕರಾಳ ಇತಿಹಾಸಕ್ಕೆ 50 ವರ್ಷ' ಎಂಬ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಮಾತನಾಡುತ್ತಿದ್ದರು.

ಇತಿಹಾಸದಿಂದ ಪಾಠ ಕಲಿಯದಿದ್ದರೆ ಅವರು ಮಾಡಿದ ತಪ್ಪನ್ನು ಉತ್ತೇಜಿಸಿದಂತಾಗುತ್ತದೆ. ಡಾ. ಬಿ.ಆರ್‌. ಅಂಬೇಡ್ಕರ್‌ ಕೊಟ್ಟಂತಹ ಪವಿತ್ರವಾದ ಸಂವಿಧಾನಕ್ಕೆ ಅಪಚಾರ ಮಾಡಿ, ತಿದ್ದುಪಡಿ ಮಾಡಿ, ತುರ್ತು ಪರಿಸ್ಥಿತಿ ಹೇರಿದಂತಹ ಮನಸ್ಸುಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು. ಅಂದಿನ ಕತ್ತಲ ದಿನಗಳನ್ನು ಪ್ರತಿಯೊಬ್ಬರೂ ಅರಿಯಬೇಕು. ಅಂತಹ ದಿನಗಳಿಗೆ ಮತ್ತೆ ಅವಕಾಶ ನೀಡದೆ, ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಬೇಕು ಎಂದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಲೇಜು ಮುಂದೆ ನಿಂತಿದ್ದಾಗ ನನ್ನನ್ನು ಅಕ್ರಮವಾಗಿ ಬಂಧಿಸಲಾಗಿತ್ತು. ಶಿವಮೊಗ್ಗ, ಬಳ್ಳಾರಿ ಕಾರಾಗೃಹದಲ್ಲಿರಿಸಲಾಗಿತ್ತು. ಅಧಿಕಾರವನ್ನು ತನ್ನ ಕಪಿಮುಷ್ಠಿಯಲ್ಲಿಟ್ಟುಕೊಳ್ಳಬೇಕೆಂಬ ಉದ್ದೇಶದಿಂದ ಇಂದಿರಾ ಗಾಂಧಿ, ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗಕ್ಕೆ ಅಂಕುಶ ಹಾಕಿದರು. ವಾಕ್‌ ಸ್ವಾತಂತ್ರ್ಯದ ಕತ್ತು ಹಿಸುಕಿದರು ಎಂದು ಹೇಳಿದರು.

ರಾಹುಲ್‌ ಗಾಂಧಿ ಅವರು ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಸಂವಿಧಾನದ ಪ್ರತಿ ಹಿಡಿದು, ರಕ್ಷಿಸುತ್ತೇವೆ ಎಂದು ಹೇಳಿದ್ದಾರೆ. ಅವರ ಅಜ್ಜಿ ಇಂದಿರಾಗಾಂಧಿ ಅದೇ ಸಂವಿಧಾನವನ್ನು ನಾಶ ಮಾಡಿದ್ದರು. ಜನತಾ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿ.ಆರ್‌. ಅಂಬೇಡ್ಕರ್‌ ರಚನೆಯ ಸಂವಿಧಾನ ಮತ್ತೆ ಜಾರಿಯಾಯಿತು. ಅದನ್ನು ರಾಹುಲ್‌ ಈಗ ಹಿಡಿದಿದ್ದಾರೆ ಎಂದು ಆರ್ಥಿಕ ಚಿಂತಕ ಎಸ್‌. ಗುರುಮೂರ್ತಿ ತಿಳಿಸಿದರು.

ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿ ಸಂವಿಧಾನವನ್ನು ತಿದ್ದುಪಡಿ ಮಾಡಿದರು. ಭಾರತದಲ್ಲಿ ಒಂದೇ ಪಕ್ಷ ಇರಬೇಕೆಂದು ನಿರಂಕುಶ ಪ್ರಭುತ್ವ ಸಾಧಿಸಲು ಹೊರಟರು. ಅವರು ಸೇರಿದಂತೆ ಕಾಂಗ್ರೆಸ್‌ನ ಯಾವ ನಾಯಕರೂ ಕರಾಳ ಅಧ್ಯಾಯವಾದ ತುರ್ತು ಪರಿಸ್ಥಿತಿ ಬಗ್ಗೆ ಇನ್ನೂ ಕ್ಷಮೆಯಾಚಿಸಿಲ್ಲ. ಸಂವಿಧಾನವನ್ನು ಹತ್ಯೆ ಮಾಡಿದವರು ಕಾಂಗ್ರೆಸ್‌ನವರು ಎಂದು ದೂರಿದರು.

‘ವಿದ್ಯಾರ್ಥಿ ಸಂಘಟನೆಯಲ್ಲಿದ್ದಾಗ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಂಧನವಾದಾಗ, ಕದ್ದುಮುಚ್ಚಿ ಕ್ಯಾಮೆರಾವನ್ನು ಜೈಲಿಗೆ ತೆಗೆದುಕೊಂಡು ಹೋಗಿ, ಹಲವು ನಾಯಕರ ಚಿತ್ರಗಳನ್ನು ಸೆರೆಹಿಡಿದಿದ್ದೇನೆ’ ಎಂದು ಕಲಾವಿದ ಚಿ.ಸು. ಕೃಷ್ಣಸೆಟ್ಟಿ ಸ್ಮರಿಸಿಕೊಂಡರು.

ತುರ್ತುಪರಿಸ್ಥಿತಿ ಸಂದರ್ಭದಲ್ಲಿನ ಘಟನೆಗಳನ್ನು ವಿವರಿಸುವ ಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಪುರಭವನದ ಮೆಟ್ಟಿಲುಗಳ ಮೇಲೆ ‘ಬೆಂಗಳೂರು ಕೇಂದ್ರ ಕಾರಾಗೃಹ’ದ ಪ್ರತಿಕೃತಿ ನಿರ್ಮಿಸಲಾಗಿತ್ತು. ವಿಶ್ರಾಂತ ಕುಲಪತಿ ವಿಷ್ಣುಕಾಂತ್‌ ಚಟಪಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT