ಇಂದಿರಾ ಗಾಂಧಿ 
ರಾಜಕೀಯ

ಇಂದಿರಾ ಗಾಂಧಿ 'ಹಿಟ್ಲರ್': ಸೋಶಿಯಲ್ ಮೀಡಿಯಾ ಪೋಸ್ಟ್; ರಾಜ್ಯ ಬಿಜೆಪಿ ವಿರುದ್ಧ ಕೇಸ್ ದಾಖಲು!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಈ ದೂರನ್ನು ದಾಖಲಿಸಿದ್ದಾರೆ.

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಕ್ಕಾಗಿ ರಾಜ್ಯ ಬಿಜೆಪಿ ಘಟಕದ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಈ ದೂರನ್ನು ದಾಖಲಿಸಿದ್ದಾರೆ. ಜೂನ್ 25 ರಂದು ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಿಂದ ಮಾಡಲಾದ ಫೋಸ್ಟ್ ನಲ್ಲಿ INDIRA NOT EQUALS INDIA, INDIRA = HITLER" ಎಂದು ಫೋಸ್ಟ್ ಮಾಡಲಾಗಿತ್ತು.

ಜೊತೆಗೆ ಅದರೊಂದಿಗೆ 38 ಸೆಕೆಂಡ್ ಗಳ ವಿಡಿಯೋ ಕೂಡಾ ಇತ್ತು. ಆದರೆ, ಬಳಿಕ ಅದನ್ನು ಡಿಲೀಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಡಿಯೋದಲ್ಲಿ ಭಾರತದಲ್ಲಿನ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಉಲ್ಲೇಖಿಸಲಾಗಿತ್ತು. ಇಂದಿರಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಎಂದು ವಿವರಿಸಿದ ಗ್ರಾಫಿಕ್ಸ್ ಅನ್ನು ಒಳಗೊಂಡಿತ್ತು. ಅದು ಅಗೌರವ ಮಾತ್ರವಲ್ಲದೆ ವಿವಿಧ ಧಾರ್ಮಿಕ ಮತ್ತು ಕೋಮು ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡುವ ಗುರಿಯನ್ನು ಹೊಂದಿತ್ತು ಎಂದು ದೂರುದಾರರು ಆರೋಪಿಸಿದ್ದಾರೆ.

ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾ ಹ್ಯಾಂಡಲ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕಾಂಗ್ರೆಸ್ ಮುಖಂಡ ಆಗ್ರಹಿಸಿದ್ದಾರೆ. ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮತ್ತೊಂದು ಫೋಸ್ಟ್ ನಲ್ಲಿ #SamvidhanHatyaDiwas ಹ್ಯಾಶ್‌ಟ್ಯಾಗ್‌ನೊಂದಿಗೆ ಇಂದಿರಾ ಗಾಂಧಿಯವರ ಈ ಕ್ರೌರ್ಯವನ್ನು ದೇಶವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಲಾಗಿತ್ತು. 50 ವರ್ಷಗಳ ಹಿಂದೆ ಇಂದಿರಾಗಾಂಧಿ ಅವರು ಕಾನೂನು, ನ್ಯಾಯಾಂಗ ಮತ್ತು ಪ್ರಜಾಪ್ರಭುತ್ವವನ್ನು ಕತ್ತಲೆಯ ಕೋಣೆಗೆ ತಳ್ಳಿ ಬೀಗ ಹಾಕಿದ ಕರಾಳ ನೆನಪು ಅವರ ನಿರಂಕುಶ ಆಡಳಿತವನ್ನು ಗುರುತಿಸುತ್ತದೆ" ಎಂದು ಮತ್ತೊಂದು ಪೋಸ್ಟ್ ನಲ್ಲಿ ಟೀಕಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್