ಕಾಂಗ್ರೆಸ್ ಕಾರ್ಯಕರ್ತರು 
ರಾಜಕೀಯ

ಬೆಂಗಳೂರು: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

ಕನಿಷ್ಠ 20 ಕಾಂಗ್ರೆಸ್ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ತುರ್ತು ಪರಿಸ್ಥಿತಿಯನ್ನು ಖಂಡಿಸುವ ನೆಪದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಅವಮಾನಿಸುತ್ತಿರುವುದನ್ನು ವಿರೋಧಿಸಿ ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ ತಕ್ಷಣ, ಅವರನ್ನು ಸ್ಥಳದಿಂದ ಚದುರಿಸಲಾಯಿತು ಮತ್ತು ಪೊಲೀಸ್ ವ್ಯಾನ್‌ಗಳಲ್ಲಿ ಕರೆದೊಯ್ಯಲಾಯಿತು.

ಕನಿಷ್ಠ 20 ಕಾಂಗ್ರೆಸ್ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದಿರಾ ಗಾಂಧಿಯನ್ನು ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಕರ್ನಾಟಕ ಬಿಜೆಪಿಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ದಿನಗಳಲ್ಲಿ ಈ ಪ್ರತಿಭಟನೆ ನಡೆದಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಅವರು ಜೂನ್ 25 ರಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

'2ನೇ ಟೆಸ್ಟ್ ಪಂದ್ಯ ಕೂಡ ಶ್ರೀಲಂಕಾ ಕೈ ಜಾರಿ ಹೋಗಿದೆ': Harsha Bhogle ಹೇಳಿದ್ದೇನು?

MCAಗೆ FDA ಶಾಕ್: ಕ್ರಿಕೆಟ್ ಮಂಡಳಿಯ 5 ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು