ಶಾಸಕ ಬಸವರಾಜು ವಿ.ಶಿವಗಂಗಾ  
ರಾಜಕೀಯ

'ಬರೆದಿಟ್ಟುಕೊಳ್ಳಿ' ಡಿಸೆಂಬರ್ ವೇಳೆಗೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಕಾಂಗ್ರೆಸ್ ಶಾಸಕ ಬಸವರಾಜು ವಿ ಶಿವಗಂಗಾ

ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಜಯಭೇರಿ ಬಾರಿಸುವ ನಿರೀಕ್ಷೆ ಇದ್ದು, ಡಿಸೆಂಬರ್‌ನಿಂದ ಮುಂದಿನ ಏಳೂವರೆ ವರ್ಷಗಳ ಕಾಲ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ

ದಾವಣಗೆರೆ: ಈ ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳ ನಡುವೆ ಡಿಸೆಂಬರ್ ವೇಳೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಸವರಾಜು ವಿ.ಶಿವಗಂಗಾ ಅವರು ಭಾನುವಾರ ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಜಯಭೇರಿ ಬಾರಿಸುವ ನಿರೀಕ್ಷೆ ಇದ್ದು, ಡಿಸೆಂಬರ್‌ನಿಂದ ಮುಂದಿನ ಏಳೂವರೆ ವರ್ಷಗಳ ಕಾಲ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಡಿಸೆಂಬರ್ ನೊಳಗೆ ಇದು ನಡೆಯುತ್ತಿದೆ. ಬರೆದಿಟ್ಟುಕೊಳ್ಳಿ. ಬೇಕಾದರೆ ಇದನ್ನು ರಕ್ತದಲ್ಲಿ ಬರೆದು ಕೊಡುತ್ತೇನೆ, ಡಿಸೆಂಬರ್ ವೇಳೆಗೆ ಅವರು ಸಿಎಂ ಆಗುತ್ತಾರೆ. ಅವರು ಡಿಸೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡರೆ, ಮುಂದಿನ ಐದು ವರ್ಷಗಳ ಅವಧಿಯನ್ನು ಒಳಗೊಂಡಂತೆ ಆಡಳಿತವನ್ನು ನಡೆಸುತ್ತಾರೆ, ಆದ್ದರಿಂದ ಅವರು 7.5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದರು.

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆಯೇ ಎಂಬುದನ್ನು ಸ್ಪಷ್ಟವಾಗಿ ಖಚಿತಪಡಿಸದ ಚನ್ನಗಿರಿ ಶಾಸಕ, ಶಿವಕುಮಾರ್ ಅವರು ಪಕ್ಷಕ್ಕೆ ನೀಡಿರುವ ಕೊಡುಗೆಗಳನ್ನು ಒತ್ತಿಹೇಳಿದರು.ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಎರಡರಲ್ಲೂ ಪಕ್ಷದ ಸ್ಥಾನವನ್ನು ಹೆಚ್ಚಿಸಿದ ಕೀರ್ತಿ ಶಿವಕುಮಾರ್ ಅವರಿಗೆ ಸಲ್ಲುತ್ತದೆ ಎಂದರು.

ಡಿಕೆ ಶಿವಕುಮಾರ್ ಇತಿಹಾಸನಿರ್ಮಿಸಿದ್ದಾರೆ. ಪಕ್ಷವನ್ನು ಸಂಘಟಿಸಿದ್ದಾರೆ, ತಮ್ಮ ಸಂಪನ್ಮೂಲ ಹೂಡಿಕೆ ಮಾಡಿದ್ದಾರೆ. ಅದಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಅವರ ಮೌನ ಅಥವಾ ಶಾಂತತೆಯನ್ನು ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು. ಹೈಕಮಾಂಡ್‌ಗೆ ಎಲ್ಲದರ ಬಗ್ಗೆ ತಿಳಿದಿದೆ ಮತ್ತು ನನಗೆ ನೂರಕ್ಕೆ ನೂರು ಖಚಿತವಾಗಿದೆ, ಅವರು ಡಿಸೆಂಬರ್‌ನಲ್ಲಿ ಸಿಎಂ ಆಗುತ್ತಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT