ಶಾಸಕ ಬಸವರಾಜು ವಿ.ಶಿವಗಂಗಾ  
ರಾಜಕೀಯ

'ಬರೆದಿಟ್ಟುಕೊಳ್ಳಿ' ಡಿಸೆಂಬರ್ ವೇಳೆಗೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಕಾಂಗ್ರೆಸ್ ಶಾಸಕ ಬಸವರಾಜು ವಿ ಶಿವಗಂಗಾ

ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಜಯಭೇರಿ ಬಾರಿಸುವ ನಿರೀಕ್ಷೆ ಇದ್ದು, ಡಿಸೆಂಬರ್‌ನಿಂದ ಮುಂದಿನ ಏಳೂವರೆ ವರ್ಷಗಳ ಕಾಲ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ

ದಾವಣಗೆರೆ: ಈ ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳ ನಡುವೆ ಡಿಸೆಂಬರ್ ವೇಳೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಸವರಾಜು ವಿ.ಶಿವಗಂಗಾ ಅವರು ಭಾನುವಾರ ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಜಯಭೇರಿ ಬಾರಿಸುವ ನಿರೀಕ್ಷೆ ಇದ್ದು, ಡಿಸೆಂಬರ್‌ನಿಂದ ಮುಂದಿನ ಏಳೂವರೆ ವರ್ಷಗಳ ಕಾಲ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಡಿಸೆಂಬರ್ ನೊಳಗೆ ಇದು ನಡೆಯುತ್ತಿದೆ. ಬರೆದಿಟ್ಟುಕೊಳ್ಳಿ. ಬೇಕಾದರೆ ಇದನ್ನು ರಕ್ತದಲ್ಲಿ ಬರೆದು ಕೊಡುತ್ತೇನೆ, ಡಿಸೆಂಬರ್ ವೇಳೆಗೆ ಅವರು ಸಿಎಂ ಆಗುತ್ತಾರೆ. ಅವರು ಡಿಸೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡರೆ, ಮುಂದಿನ ಐದು ವರ್ಷಗಳ ಅವಧಿಯನ್ನು ಒಳಗೊಂಡಂತೆ ಆಡಳಿತವನ್ನು ನಡೆಸುತ್ತಾರೆ, ಆದ್ದರಿಂದ ಅವರು 7.5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದರು.

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆಯೇ ಎಂಬುದನ್ನು ಸ್ಪಷ್ಟವಾಗಿ ಖಚಿತಪಡಿಸದ ಚನ್ನಗಿರಿ ಶಾಸಕ, ಶಿವಕುಮಾರ್ ಅವರು ಪಕ್ಷಕ್ಕೆ ನೀಡಿರುವ ಕೊಡುಗೆಗಳನ್ನು ಒತ್ತಿಹೇಳಿದರು.ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಎರಡರಲ್ಲೂ ಪಕ್ಷದ ಸ್ಥಾನವನ್ನು ಹೆಚ್ಚಿಸಿದ ಕೀರ್ತಿ ಶಿವಕುಮಾರ್ ಅವರಿಗೆ ಸಲ್ಲುತ್ತದೆ ಎಂದರು.

ಡಿಕೆ ಶಿವಕುಮಾರ್ ಇತಿಹಾಸನಿರ್ಮಿಸಿದ್ದಾರೆ. ಪಕ್ಷವನ್ನು ಸಂಘಟಿಸಿದ್ದಾರೆ, ತಮ್ಮ ಸಂಪನ್ಮೂಲ ಹೂಡಿಕೆ ಮಾಡಿದ್ದಾರೆ. ಅದಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಅವರ ಮೌನ ಅಥವಾ ಶಾಂತತೆಯನ್ನು ದೌರ್ಬಲ್ಯ ಎಂದು ತಪ್ಪಾಗಿ ಭಾವಿಸಬಾರದು. ಹೈಕಮಾಂಡ್‌ಗೆ ಎಲ್ಲದರ ಬಗ್ಗೆ ತಿಳಿದಿದೆ ಮತ್ತು ನನಗೆ ನೂರಕ್ಕೆ ನೂರು ಖಚಿತವಾಗಿದೆ, ಅವರು ಡಿಸೆಂಬರ್‌ನಲ್ಲಿ ಸಿಎಂ ಆಗುತ್ತಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT