ವಿಧಾನಸಭೆ ಸಾಂದರ್ಭಿಕ ಚಿತ್ರ 
ರಾಜಕೀಯ

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಮೊದಲ ದಿನವೇ ಪ್ರತಿಭಟನೆಗೆ ಬಿಜೆಪಿ ಮುಂದು!

ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗುವ ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ.

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ. ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಶಾಸಕರ ಭವನದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗುವ ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ತಮ್ಮ 16 ನೇ ಬಜೆಟ್ ಮಂಡಿಸಲಿದ್ದಾರೆ. ಅದೇ ದಿನ, ಕೇಸರಿ ಪಕ್ಷವು ರಾಜ್ಯ ಸರ್ಕಾರದ "ಅಧಿಕ ಸಾಲಗಳ" ವಿರುದ್ಧ ಮತ್ತೊಂದು ಪ್ರತಿಭಟನಾ ಮೆರಣಿಗೆ ನಡೆಸಲು ಯೋಜಿಸಿದೆ.

2025-26ನೇ ಹಣಕಾಸು ವರ್ಷದಲ್ಲಿ ಸಿದ್ದರಾಮಯ್ಯನವರ ಬಜೆಟ್ 4 ಲಕ್ಷ ಕೋಟಿ ರೂಪಾಯಿಗಳನ್ನು ಮೀರುವ ಸಾಧ್ಯತೆಯಿದೆ ಎಂದು ಸಿಎಂ ಕಚೇರಿಯ ಮೂಲಗಳು ತಿಳಿಸಿವೆ. ಕಳೆದ ಬಾರಿ 3.71 ಲಕ್ಷ ಬಜೆಟ್ ಮಂಡಿಸಲಾಗಿತ್ತು.

ಆಂತರಿಕ ಭಿನ್ನಾಭಿಪ್ರಾಯದ ನಡುವೆಯೂ ಬಿಜೆಪಿ ತನ್ನ ಮೈತ್ರಿಕೂಟದ ಪಾಲುದಾರ ಜೆಡಿ(ಎಸ್) ಜೊತೆಗೂಡಿ ಬೆಂಗಳೂರು ಕೇಂದ್ರಿತ ಸಮಸ್ಯೆಗಳಾದ ಸುರಂಗ ರಸ್ತೆ ಯೋಜನೆ ಸೇರಿದಂತೆ ಹಲವು ವಿಷಯಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಒಗ್ಗಟ್ಟು ಪ್ರದರ್ಶಿಸಲು ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT