ವಿಧಾನಸಭೆ ಸಾಂದರ್ಭಿಕ ಚಿತ್ರ 
ರಾಜಕೀಯ

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಮೊದಲ ದಿನವೇ ಪ್ರತಿಭಟನೆಗೆ ಬಿಜೆಪಿ ಮುಂದು!

ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗುವ ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ.

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ. ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಶಾಸಕರ ಭವನದಿಂದ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗುವ ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ತಮ್ಮ 16 ನೇ ಬಜೆಟ್ ಮಂಡಿಸಲಿದ್ದಾರೆ. ಅದೇ ದಿನ, ಕೇಸರಿ ಪಕ್ಷವು ರಾಜ್ಯ ಸರ್ಕಾರದ "ಅಧಿಕ ಸಾಲಗಳ" ವಿರುದ್ಧ ಮತ್ತೊಂದು ಪ್ರತಿಭಟನಾ ಮೆರಣಿಗೆ ನಡೆಸಲು ಯೋಜಿಸಿದೆ.

2025-26ನೇ ಹಣಕಾಸು ವರ್ಷದಲ್ಲಿ ಸಿದ್ದರಾಮಯ್ಯನವರ ಬಜೆಟ್ 4 ಲಕ್ಷ ಕೋಟಿ ರೂಪಾಯಿಗಳನ್ನು ಮೀರುವ ಸಾಧ್ಯತೆಯಿದೆ ಎಂದು ಸಿಎಂ ಕಚೇರಿಯ ಮೂಲಗಳು ತಿಳಿಸಿವೆ. ಕಳೆದ ಬಾರಿ 3.71 ಲಕ್ಷ ಬಜೆಟ್ ಮಂಡಿಸಲಾಗಿತ್ತು.

ಆಂತರಿಕ ಭಿನ್ನಾಭಿಪ್ರಾಯದ ನಡುವೆಯೂ ಬಿಜೆಪಿ ತನ್ನ ಮೈತ್ರಿಕೂಟದ ಪಾಲುದಾರ ಜೆಡಿ(ಎಸ್) ಜೊತೆಗೂಡಿ ಬೆಂಗಳೂರು ಕೇಂದ್ರಿತ ಸಮಸ್ಯೆಗಳಾದ ಸುರಂಗ ರಸ್ತೆ ಯೋಜನೆ ಸೇರಿದಂತೆ ಹಲವು ವಿಷಯಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಒಗ್ಗಟ್ಟು ಪ್ರದರ್ಶಿಸಲು ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT