ಪ್ರಿಯಾಂಕ್ ಖರ್ಗೆ - ಸಂತೋಷ್ ಲಾಡ್ 
ರಾಜಕೀಯ

ಡಿಕೆ ಶಿವಕುಮಾರ್ ಪರ ವೀರಪ್ಪ ಮೊಯ್ಲಿ ಬ್ಯಾಟಿಂಗ್; ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿದ್ದೇನು?

ಭಾನುವಾರ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ಡಿಕೆ ಶಿವಕುಮಾರ್ ಅವರ ನಾಯಕತ್ವವನ್ನು ಶ್ಲಾಘಿಸಿ, ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ಪ್ರತಿಪಾದಿಸಿದ್ದರು.

ಬೆಂಗಳೂರು: ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದು, ಅವರ ಹೇಳಿಕೆಗೆ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, 'ಡಿಕೆ ಶಿವಕುಮಾರ್ ಇವತ್ತು ಅಥವಾ ನಾಳೆ ಸಿಎಂ ಆಗುತ್ತಾರೆ ಎಂದು ಮೊಯ್ಲಿ ಆಗಲಿ, ಬೇರೆಯವರಾಗಲಿ ಹೇಳಿಲ್ಲ. ಮುಂದೊಂದು ದಿನ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ. ನಾನು ಕೂಡ ಮಾಧ್ಯಮಗಳ ಮುಂದೆ ಹೇಳಿದರೆ ಆಗುತ್ತಾ? ನಮ್ಮ ಜವಾಬ್ದಾರಿ ಏನೆಂಬುದು ಸ್ಪಷ್ಟವಾಗಿದೆ' ಎಂದರು.

'ಸಿದ್ದರಾಮಯ್ಯ ಸಿಎಂ ಆಗಿದ್ದು, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದಾರೆ. ಮುಂದೊಂದು ದಿನ ಯಾರಾದರೂ ಸಿಎಂ ಆಗಬೇಕೆಂದು ನಾನು ಬಯಸಬಹುದು; ಅವರು ಕಷ್ಟಪಟ್ಟರೆ, ಅವರಿಗೂ ನಾಳೆ ಪ್ರತಿಫಲ ಸಿಗುತ್ತದೆ. ಅವರು ಏನೇ ಹೇಳಿದರೂ ಅದು ಅವರ ಅಭಿಪ್ರಾಯ' ಎಂದಿದ್ದಾರೆ.

ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ಕೂಡ ಪ್ರತಿಕ್ರಿಯಿಸಿದ್ದು, ಪಕ್ಷವು ಹೈಕಮಾಂಡ್ ನಿರ್ಧಾರಗಳಿಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

'ಮೊಯ್ಲಿ ಅವರು ಈ ರೀತಿ ಹೇಳಿಕೆ ನೀಡಿದ್ದರೆ, ಅವರನ್ನೇ ಕೇಳಬೇಕು. ಏಕೆಂದರೆ, ನಾವು ಯಾವಾಗಲೂ ಹೈಕಮಾಂಡ್ ಆದೇಶವನ್ನು ಅನುಸರಿಸುತ್ತೇವೆ. ಹೈಕಮಾಂಡ್ ಏನೇ ಹೇಳಿದರೂ ಅದು ನಮಗೆ ಅಂತಿಮ... ಅದು ಅವರ ಅಭಿಪ್ರಾಯವೇ ಹೊರತು ಹೈಕಮಾಂಡ್ ಅಭಿಪ್ರಾಯವಲ್ಲ' ಎಂದರು.

ಭಾನುವಾರ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ಡಿಕೆ ಶಿವಕುಮಾರ್ ಅವರ ನಾಯಕತ್ವವನ್ನು ಶ್ಲಾಘಿಸಿ, ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ಪ್ರತಿಪಾದಿಸಿದ್ದರು. ನೀವು (ಡಿಕೆ ಶಿವಕುಮಾರ್) ಉತ್ತಮ ನಾಯಕತ್ವ ನೀಡಿದ್ದೀರಿ, ಪಕ್ಷವನ್ನು ಕಟ್ಟಿದ್ದೀರಿ, ಜನರು ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಆದರೆ, ಅದಕ್ಕೆ ಆತಂಕಗೊಳ್ಳುವ ಅಗತ್ಯವಿಲ್ಲ. ನೀವು ಸಿಎಂ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿ ಹುದ್ದೆ ಸಿಗುವುದು ಉಡುಗೊರೆಯಾಗಿ ಅಲ್ಲ. ಅದು ಅವರು ಕಷ್ಟಪಟ್ಟು ಗಳಿಸಿದ್ದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ಇಂದು ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT