ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 7 ರಂದು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬುಧವಾರ ತಿಳಿಸಿದ್ದಾರೆ.
ಅಮಿತ್ ಶಾ ಅವರು ತಮಿಳುನಾಡಿನಿಂದ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 7 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಅವರು ನೆಲಮಂಗಲದಲ್ಲಿ ವಿಶ್ವತೀರ್ಥ ಮಹಾಸ್ವಾಮಿಗಳು ಸ್ಥಾಪಿಸಿದ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ಅಮಿತ್ ಶಾ ಅವರು ಯಾವುದೇ ರಾಜಕೀಯ ಕಾರ್ಯಕ್ರಮಕ್ಕಾಗಿ ಇಲ್ಲಿಗೆ ಬರುತ್ತಿಲ್ಲ ಎಂದು ವಿಜಯೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ.