ಛಲವಾದಿ ನಾರಾಯಣಸ್ವಾಮಿ 
ರಾಜಕೀಯ

ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ: ಜನಾಂದೋಲನಕ್ಕೆ BJP ನಿರ್ಧಾರ

ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ ಎಂಬುದನ್ನು ಸ್ಪಷ್ಟವಾಗಿ ತೋರಿಸಿದ್ದಾರೆ . ಸಿದ್ದರಾಮಯ್ಯ ದಲಿತರನ್ನು ಎತ್ತಿ ಕಟ್ಟಿ ದಲಿತರನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ದಲಿತರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದು, ಇದರ ವಿರುದ್ಧ ಜನಾಂದೋಲನ ನಡೆಸಲು ತೀರ್ಮಾನಿಸಳಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಶನಿವಾರ ದಲಿತ ಸಂಘಟನೆಗಳ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ ಎಂಬುದನ್ನು ಸ್ಪಷ್ಟವಾಗಿ ತೋರಿಸಿದ್ದಾರೆ . ಸಿದ್ದರಾಮಯ್ಯ ದಲಿತರನ್ನು ಎತ್ತಿ ಕಟ್ಟಿ ದಲಿತರನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ದಲಿತರ ಹಣವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿಕೊಂಡಿರುವ ವಿರುದ್ದ ಹೋರಾಟ ಮಾಡಲಾಗುತ್ತದೆ. ದಲಿತ ಸಂಘಟನೆಗಳು ಇದಕ್ಕಾಗಿ 10 ತಂಡಗಳನ್ನು ರಚಿಸಲಿವೆ. ಇನ್ನೊಂದು ವಾರದ ಒಳಗೆ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಪ್ರಕಟಿಸಿದರು.

ರಾಜ್ಯದೆಲ್ಲೆಡೆ ಪ್ರವಾಸದ ಬಳಿಕ ಬೆಂಗಳೂರಿನಲ್ಲಿ ಸಮುದಾಯದ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಈ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ತೀರ್ಮಾನ ಮಾಡಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT