ಸಿಎಂ ಸಿದ್ದರಾಮಯ್ಯ 
ರಾಜಕೀಯ

KPSC ಬದಲು ಕೆಪಿಸಿಸಿ ಹಗರಣ ಎಂದ ಸಿಎಂ: ಸಿದ್ದರಾಮಯ್ಯ ಕಾಲೆಳೆದ ವಿಪಕ್ಷಗಳು

ಸಿಎಂ ಸಿದ್ದರಾಮಯ್ಯ ಕೆಪಿಎಸ್ ಸಿ ಹಗರಣದ ಬಗ್ಗೆ ಮಾತನಾಡಲು ಆರಂಭಿಸಿದ್ದರು.

ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಕೆಪಿಎಸ್ ಸಿ ಹಗರಣದ ಬಗ್ಗೆ ಮಾತನಾಡಲು ಹೋಗಿ ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಹಗರಣ ಎಂದು ಹೇಳುವ ಮೂಲಕ ಎಡವಟ್ಟು ಮಾಡಿಕೊಂಡ ಪ್ರಸಂಗ ನಡೆಯಿತು.

ಸದನದಲ್ಲಿ ಕಲಾಪ ನಡೆಯುತ್ತಿದ್ದಾಗ ಸಿಎಂ ಸಿದ್ದರಾಮಯ್ಯ ಕೆಪಿಎಸ್ ಸಿ ಹಗರಣದ ಬಗ್ಗೆ ಮಾತನಾಡಲು ಆರಂಭಿಸಿದ್ದರು. ಈ ವೇಳೆ ಕರ್ನಾಟಕ ಲೋಕಸೇವಾ ಆಯೋಗ ಕೆಪಿಎಸ್ ಸಿ ಎನ್ನುವ ಬದಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಪಿಸಿಸಿ ಎಂದು ತಪ್ಪಾಗಿ ಹೇಳಿದರು.

ಇದನ್ನೇ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯರನ್ನು ವಿಪಕ್ಷ ಬಿಜೆಪಿ ಸದಸ್ಯರು ಕಾಲೆಳೆದರು. ಸಿದ್ದರಾಮಯ್ಯನವರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂದುಕೊಂಡಿದ್ದಾರೆ. ಅದನ್ನೇ ತಲೆಯಲ್ಲಿಟ್ಟುಕೊಂಡಿರುವ ಕಾರಣ ಕೆಪಿಸಿಸಿ ಎಂದೇ ಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಲೆಳೆದರು. ಈ ವೇಳೆ ಕೊಂಚ ಗದ್ದಲವೇರ್ಪಟ್ಟಿತು.

ಆಗ ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್ ಏನೋ ಬಾಯ್ತಪ್ಪಿ ಒಂದು ಅಕ್ಷರ ತಪ್ಪಾಯ್ತು. ಅದನ್ನೇ ಇಟ್ಟುಕೊಂಡು ಚರ್ಚೆ ಮಾಡಬೇಕಾ? ಮೊದಲೇ ಸಮಯವಿಲ್ಲ, ನೀವು ಮುಂದುವರಿಸಿ ಎಂದು ಸಿಎಂಗೆ ಮಾತು ಮುಂದುವರಿಸಲು ಸೂಚಿಸಿದರು.

ತಕ್ಷಣ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಜಯೇಂದ್ರ ಮತ್ತು ಬಿಜಾಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಗುಂಪುಗಾರಿಕೆಯನ್ನು ಉಲ್ಲೇಖಿಸಿ, ಶಿವಕುಮಾರ್ ಅವರನ್ನು ನಾವು ಕೆಪಿಸಿಸಿ ಅಧ್ಯಕ್ಷ ಎಂದು ಒಪ್ಪಿಕೊಳ್ಳುತ್ತೇವೆ, ಹಾಗೆಯೇ ನೀವು ವಿಜಯೇಂದ್ರ ಅವರನ್ನು ನಿಮ್ಮ ಅಧ್ಯಕ್ಷ ಎಂದು ಒಪ್ಪಿಕೊಳ್ಳುವಿರಾ ಎಂದು ಸಿದ್ದರಾಮಯ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!