ಡಿ.ಕೆ ಶಿವಕುಮಾರ್ 
ರಾಜಕೀಯ

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಎಂಬುದೆಲ್ಲಾ BJP ಪಿತೂರಿ: ಡಿಸಿಎಂ ಡಿ.ಕೆ ಶಿವಕುಮಾರ್

ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳಿಗೆ ಹೋಗುತ್ತೇವೆ. ಅಲ್ಲಿ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾರೋ ನನ್ನ ಪಕ್ಕ ಬಂದು ನಿಂತುಕೊಂಡ ತಕ್ಷಣ ನನಗೂ ಅವರಿಗೂ ಸಂಬಂಧ ಇದೆ ಎಂದು ಭಾವಿಸಲು ಸಾಧ್ಯವೇ?

ಬೆಂಗಳೂರು: ‘ನಟಿ ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಎಂಬುದೆಲ್ಲಾ ಕೇವಲ ಊಹಾಪೋಹ. ಇದು ಬಿಜೆಪಿಯವರ ಪಿತೂರಿಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ನೋಡಿದ್ದಾರಾ? ಕೇಳಿದ್ದಾರಾ? ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳಿಗೆ ಹೋಗುತ್ತೇವೆ. ಅಲ್ಲಿ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾರೋ ನನ್ನ ಪಕ್ಕ ಬಂದು ನಿಂತುಕೊಂಡ ತಕ್ಷಣ ನನಗೂ ಅವರಿಗೂ ಸಂಬಂಧ ಇದೆ ಎಂದು ಭಾವಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ನಮ್ಮ ಜೊತೆ ಫೋಟೋ ತೆಗೆಸಿಕೊಂಡವರು ಅಪರಾಧ ಮಾಡಿದರೆ ನಾವು ಅದಕ್ಕೆ ಬೆಂಬಲ ನೀಡಿದ್ದೇವೆ ಎಂದು ಹೇಳಲು ಸಾಧ್ಯವೇ? ಇಂತಹ ಸಚಿವರು ಈ ರೀತಿಯಾಗಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಪಷ್ಟವಾಗಿ ಇದ್ದರೆ ನೀವು ಚರ್ಚೆ ಮಾಡಿ. ಯಾವುದೇ ಸಚಿವ ಅಪರಾಧ ಮಾಡಲು ಬೆಂಬಲ ನೀಡುವುದಿಲ್ಲ ಎಂದು ಹೇಳಿದರು.

ನಟಿ ರನ್ಯಾ ರಾವ್ ಪ್ರಕರಣದಲ್ಲಿ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಸಿಎಂ ಆಂತರಿಕ ತನಿಖೆಗೆ ಆದೇಶಿಸಿದ್ದಾರೆ. ನಾನು ಇತ್ತೀಚೆಗೆ ದುಬೈಗೆ ತೆರಳಿದ್ದೆ. ಆಗ ನನ್ನ ಉಂಗುರ, ಬೆಲ್ಟ್, ವಾಚ್‍ಗಳನ್ನು ತೆಗೆಸಿದ್ದರು. ಇಂತಹ ಭದ್ರತೆ ಮಧ್ಯೆ 14 ಕೆ.ಜಿ ಚಿನ್ನ ಕಳ್ಳಸಾಗಾಣೆ ಹೇಗೆ ಸಾಧ್ಯ ಎಂದು ನನಗೂ ಅಚ್ಚರಿಯಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಹಿರಿಯ ನಾಯಕ ಟಿಬಿ ಜಯಚಂದ್ರ ಕೂಡ ಈ ವಿಚಾರವನ್ನು ವದಂತಿ ಎಂದೇ ಹೆಳಿದರು. ಪ್ರಕರಣಗಳಲ್ಲಿ ರನ್ಯಾ ರಾವ್'ಗೆ ಸಾಥ್ ನೀಡಿದ ಸಚಿವರನ್ನು ಪತ್ತೆಹಚ್ಚಿ, ಹೆಸರು ಬಹಿರಂಗ ಪಡಿಸಿ ಎಂದು ಬಿಜೆಪಿಗೆ ಸವಾಲು ಹಾಕಿದರು.

ಏತನ್ಮಧ್ಯೆ, ಡಿಜಿಪಿ ರಾಮಚಂದ್ರ ರಾವ್ ಅವರ 'ಪ್ರೋಟೋಕಾಲ್ ಸವಲತ್ತು' ದುರುಪಯೋಗಪಡಿಸಿಕೊಂಡ ಬಗ್ಗೆ ತನಿಖೆ ನಡೆಸುತ್ತಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌಪ್ಯವಾಗಿ ವರದಿ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT