ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ  
ರಾಜಕೀಯ

ಲಿಂಗಾಯತ ಸಮಾವೇಶ ಚಿಂತನೆ ಕೈಬಿಡಿ: ರೇಣುಕಾಚಾರ್ಯಗೆ BSY ಸಲಹೆ

ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕರೆಸಿಕೊಂಡ ಯಡಿಯೂರಪ್ಪ ಅವರು, ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸೂಚನೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ಬೆಂಗಳೂರು: ಲಿಂಗಾಯತ ಸಮಾವೇಶಗಳ ಚಿಂತನೆಗಳ ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಲಹೆ ನೀಡಿದ್ದಾರೆ.

ರೇಣುಕಾಚಾರ್ಯ ಅವರನ್ನು ತಮ್ಮ ಮನೆಗೆ ಬುಧವಾರ ರಾತ್ರಿ ಕರೆಸಿಕೊಂಡಿದ್ದ ಯಡಿಯೂರಪ್ಪ ಅವರು, ‘ಯಾವುದೇ ಸಭೆ– ಸಮಾವೇಶ ನಡೆಸಿ ಗೊಂದಲ ಸೃಷ್ಟಿಸುವುದು ಬೇಡ. ಇಂತಹ ಸಭೆಗಳು ಅನಗತ್ಯ ಒಡಕುಗಳನ್ನು ಮೂಡಿಸಲಿದೆ. ಏನೇ ಇದ್ದರೂ ಪಕ್ಷದ ಚೌಕಟ್ಟಿನಲ್ಲಿ ಮಾತುಕತೆ ಮಾಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕರೆಸಿಕೊಂಡ ಯಡಿಯೂರಪ್ಪ ಅವರು, ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸೂಚನೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ಯಡಿಯೂರಪ್ಪ ಸೂಚನೆ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾರ್ಯ ಅವರು, ಇದು ರಾಜಕೀಯ ಸಭೆಯಲ್ಲ. ಸಮುದಾಯವನ್ನು ಸಂಘಟಿಸಲು ನಡೆಸುತ್ತಿರುವ ಸಮಾವೇಶವಾಗಿದೆ. ಹೀಗಾಗಿ, ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯದ ನಿವೃತ್ತ ಅಧಿಕಾರಿಗಳು ಮತ್ತು ಅನೇಕ ಸಂಘಟನೆಗಳ ಸದಸ್ಯರು ಎಲ್ಲರೂ ಒಟ್ಟಾಗಿ ಸಮಾವೇಶಗಳನ್ನು ಆಯೋಜಿಸಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಸಮುದಾಯಕ್ಕಾಗಿ ಒಟ್ಟಾಗಿ ಕೆಲಸ ಮಾಡುವಂತೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಸಮುದಾಯದ ಎಲ್ಲಾ ನಾಯಕರು ರೇಣುಕಾಚಾರ್ಯ ಅವರು ಆಹ್ವಾನ ನೀಡಿದರು.

ಮೇ 15 ರೊಳಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಮಾವೇಶಗಳನ್ನು ಮತ್ತು ದಾವಣಗೆರೆಯಲ್ಲಿ ಮೆಗಾ ರ್ಯಾಲಿಯನ್ನು ನಡೆಸುವ ಚಿಂತನೆಗಳಿವೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಹಾ ಅಚ್ಚರಿ: ಶರದ್ ಪವಾರ್ ಪುತ್ರಿ ಸುಪ್ರಿಯ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್!

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

SCROLL FOR NEXT