ಡಿಕೆಶಿ, ಎಂಬಿ ಪಾಟೀಲ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಡಿಕೆಶಿ ಔತಣಕೂಟದಲ್ಲಿ ಎಲ್ಲರೂ ಭಾಗಿಯಾಗಿದ್ದರು; ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ: ಎಂ.ಬಿ ಪಾಟೀಲ್

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಐದು ವರ್ಷ ಪೂರೈಸಿದ ಕಾರಣ ಕಾಂಗ್ರೆಸ್‌ ಪಕ್ಷದ ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು.

ಬೆಳಗಾವಿ: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರೆದಿದ್ದ ಔತಣಕೂಟದಲ್ಲಿ ಪಕ್ಷದ ಎಲ್ಲಾ ಶಾಸಕರು ಭಾಗವಹಿಸಿದ್ದರು ಎಂದು ಸಚಿವ ಎಂಬಿ ಪಾಟೀಲ್ ಅವರು ಶನಿವಾರ ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಐದು ವರ್ಷ ಪೂರೈಸಿದ ಕಾರಣ ಕಾಂಗ್ರೆಸ್‌ ಪಕ್ಷದ ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ಇದಕ್ಕೆ ಪರಮೇಶ್ವರ್‌ ಭಾಗವಹಿಸಿರಲಿಲ್ಲ. ಏಕೆಂದರೆ, ಅವರ ಆಪ್ತರೊಬ್ಬರು ನಿಧನರಾಗಿದ್ದ ಕಾರಣ ಅವರ ಬರಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ವಿಪಕ್ಷದವರು ಸುಮ್ಮನೇ ವಿವಾದಗಳನನ್ನೆಬ್ಬಿಸುತ್ತಾರೆ. ಈ ಭೋಜನಾಕೂಟದಲ್ಲಿ ಮುಖ್ಯಮಂತ್ರಿ ಸೇರಿದಂತೆ, ಸಚಿವ ಸತೀಶ್‌ ಜಾರಕಿಹೊಳಿ, ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಭಾಗವಹಿಸುವ ಮೂಲಕ ಈ ವಿವಾದಗಳಿಗೆ ತೆರೆ ಎಳೆದಿದ್ದಾರೆ ಎಂದು ತಿಳಿಸಿದರು.

ಅಧಿವೇಶನ ನಡೆದಾಗ ಸಾಮಾನ್ಯವಾಗಿ ಸಚಿವರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸುತ್ತಾರೆ. ಇದರಲ್ಲಿ ವಿಶೇಷವೇನೂ ಇಲ್ಲ ಎಂದರು.

ಕೆಪಿಸಿಸಿಯ ಮುಖ್ಯಸ್ಥರು ಯಾರು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಜ್ಯ ಮಟ್ಟದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT