ಬಿಎಸ್ ಯಡಿಯೂರಪ್ಪ 
ರಾಜಕೀಯ

ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಯಡಿಯೂರಪ್ಪ

ಬಿಜೆಪಿಗೆ ಅನುಕೂಲಕರ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ನಾವು ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವಿದೆ.

ಬೆಳಗಾವಿ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಅದಕ್ಕೆ ಪೂರಕ ವಾತಾವರಣವಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ರಾಜ್ಯ ಘಟಕದಲ್ಲಿ ಹೆಚ್ಚುತ್ತಿರುವ ಬಣ ಕಿತ್ತಾಟದ ನಡುವೆ ಪಕ್ಷದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಬಿಜೆಪಿಗೆ ಅನುಕೂಲಕರ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ನಾವು ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಲಹೆ ನೀಡುವ ಪ್ರಶ್ನೆಯೇ ಇಲ್ಲ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು, ಅಷ್ಟೇ ಎಂದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನೇತೃತ್ವದ ಬಣ ಪಟ್ಟು ಹಿಡಿದಿರುವುದರಿಂದ ಬಿಜೆಪಿಯಲ್ಲಿನ ಬಣ ಭಿನ್ನಾಭಿಪ್ರಾಯ ಬಹಿರಂಗವಾಗಿದೆ. ಆದರೆ, ಯತ್ನಾಳ್ ಕುರಿತ ಪ್ರಶ್ನೆಗೆ ಮಾಜಿ ಸಿಎಂ ಪ್ರತಿಕ್ರಿಯಿಸಲಿಲ್ಲ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿಯಲ್ಲಿ ಕುಂಠಿತ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಈ ಭರವಸೆಗಳಿಗೆ ಯಾವುದೇ ಅರ್ಥವಿಲ್ಲ. ಜನರನ್ನು ತೃಪ್ತಿಪಡಿಸಲು ಅವುಗಳನ್ನು ಘೋಷಿಸಲಾಗಿದೆ, ಆದರೆ ಅವುಗಳನ್ನು ಸರಿಯಾಗಿ ಜಾರಿಗೊಳಿಸಿಲ್ಲ. ಸರ್ಕಾರ ಒಂದು ರೀತಿಯಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಎಷ್ಟು ದಿನ ಹೀಗೆ ಆಡಳಿತ ನಡೆಸುತ್ತಾರೋ ನೋಡೋಣ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT