ಡಿಕೆ ಶಿವಕುಮಾರ್ 
ರಾಜಕೀಯ

ರಾಜ್ಯದ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳು ಮಹಿಳೆಯರಿಗೆ ಮೀಸಲು: ಡಿಸಿಎಂ ಡಿ.ಕೆ ಶಿವಕುಮಾರ್

ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇತೃತ್ವದ ರಾಜ್ಯ ಮಹಿಳಾ ಕಾಂಗ್ರೆಸ್ ವಿಭಾಗದ ಕಾರ್ಯಕ್ಷಮತೆಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದರು.

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ನೀಡಲಾಗಿದ್ದು, ಮುಂಬರುವ ಚುನಾವಣೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಕರೆ ನೀಡಿದ್ದಾರೆ. ಆದರೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮಹಿಳೆಯರು ಉತ್ತಮ ಕೆಲಸ ಮಾಡದಿರುವ ಬಗ್ಗೆ ಅವರು ನಿರಾಶೆ ವ್ಯಕ್ತಪಡಿಸಿದರು.

ಇಂದು ನಡೆದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇತೃತ್ವದ ರಾಜ್ಯ ಮಹಿಳಾ ಕಾಂಗ್ರೆಸ್ ವಿಭಾಗದ ಕಾರ್ಯಕ್ಷಮತೆಯ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿದರು.

"ಮಹಿಳಾ ವಿಭಾಗದ ಬಗ್ಗೆ ನನಗೆ ಸಂತೋಷವಿಲ್ಲ; ಅದು ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ. ನೀವು ಏನನ್ನಾದರೂ ಸಾಧಿಸಲು ದೃಢನಿಶ್ಚಯ ಮಾಡಿದರೆ ಮುಂದೆ ಹಲವಾರು ಅವಕಾಶಗಳಿವೆ" ಎಂದು ಹೇಳಿದರು.

ಮಹಿಳಾ ಸಬಲೀಕರಣಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಡಿಸಿಎಂ, "ಮಹಿಳಾ ಮೀಸಲಾತಿ ಮಸೂದೆ ಜಾರಿಯಾದರೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 74 ಕ್ಷೇತ್ರಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು. ನೀವು ಗೃಹಲಕ್ಷ್ಮಿ ಯೋಜನೆಯ ಕನಿಷ್ಠ 50 ಫಲಾನುಭವಿಗಳನ್ನು ಪಕ್ಷದ ಸದಸ್ಯರಾಗಿ ನೋಂದಾಯಿಸಿದರೆ ನಿಮಗೆ ತಾಲ್ಲೂಕು ಮಟ್ಟದ ನಿರ್ದೇಶಕರ ಹುದ್ದೆ ನೀಡಲಾಗುವುದು" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT