ಸಿಎಂ ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ: ಬಿ.ಎಸ್ ಯಡಿಯೂರಪ್ಪ

ಮತದಾರರನ್ನು ಆಕರ್ಷಿಸಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಯಾವುದೇ ಪ್ರಯೋಜನಗಳಾಗಿಲ್ಲ.

ಬೆಂಗಳೂರು: ಗ್ಯಾರಂಟಿ ಯೋಜನೆಗಳು ನಿಷ್ಪರಿಣಾಮಕಾರಿ ಮತ್ತು ಅರ್ಥಹೀನ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುಘಲಕ್ ದರ್ಬಾರ್‌ ನಡೆದಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ. ಜನರನ್ನು ತೃಪ್ತಿಪಡಿಸಲು ಜಾರಿಗೆ ತಂದ ಯಾವ ಯೋಜನೆಗಳೂ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮತದಾರರನ್ನು ಆಕರ್ಷಿಸಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಯಾವುದೇ ಪ್ರಯೋಜನಗಳಾಗಿಲ್ಲ ಎಂದು ಹೇಳಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಅಲ್ಪಸಂಖ್ಯಾತರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವು ಅನ್ಯಾಯುತವಾದದ್ದು ಎಂದು ಆರೋಪಿಸಿದರು.

ರಾಜ್ಯದಲ್ಲಿ ಬಿಜೆಪಿ ಪರ ಅಲೆ ಹೆಚ್ಚುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಗುರಿ ಸಾಧಿಸಲು ಪಕ್ಷವು ಪ್ರಾಮಾಣಿಕ ಮತ್ತು ಒಗ್ಗಟ್ಟಿನ ಪ್ರಯತ್ನಗಳನ್ನು ಮಾಡುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ