ಪ್ರಿಯಾಂಕ್ ಖರ್ಗೆ 
ರಾಜಕೀಯ

ಬಾಯಿಗೆ ಬಂದ ಹಾಗೆ ಮಾತನಾಡಲು ಇದು RSS ಕಚೇರಿ ಅಲ್ಲ: ಸದನದಲ್ಲಿ ಕೆರಳಿದ ಪ್ರಿಯಾಂಕ್‌ ಖರ್ಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಸ್ಇಪಿ, ಟಿಎಸ್ ಪಿ ಕಾನೂನು ಜಾರಿಗೆ ತಂದ ವಿಚಾರವನ್ನು ಪ್ರಸ್ತಾಪಿಸಿದಾಗ ಬಿಜೆಪಿ ಸದಸ್ಯರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎಂದು ಪ್ರಶ್ನಿಸಿದರು.

ಬೆಂಗಳೂರು: ಡಾ. ಬಿಆರ್ ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ಸಾ ಅಥವಾ ಸಾವರ್ಕರಾ? ಎಂಬ ವಿಚಾರ ಸೋಮವಾರ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಕೋಲಾಹಲ, ಮಾತಿನ ಸಮರಕ್ಕೆ ಕಾರಣವಾಯಿತು.

ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಸ್ಇಪಿ, ಟಿಎಸ್ ಪಿ ಕಾನೂನು ಜಾರಿಗೆ ತಂದ ವಿಚಾರವನ್ನು ಪ್ರಸ್ತಾಪಿಸಿದಾಗ ಬಿಜೆಪಿ ಸದಸ್ಯರು ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎಂದು ಪ್ರಶ್ನಿಸಿದರು.

ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ, 'ಮಂತ್ರಿ ಮಂಡಲದಿಂದ ಹೊರ ಹಾಕಿದ್ದು ಯಾರು? ಸೋಲಿಸಿದ್ದು ಯಾರು? ಸಮಾಧಿಗೆ ಜಾಗ ಕೊಡದಿದ್ದು ಯಾರು?' ಎಂದು ಪ್ರಶ್ನಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಪ್ರಿಯಾಂಕ್ ಖರ್ಗೆ,'1952 ರಲ್ಲಿ ಅಂಬೇಡ್ಕರ್ ಬರೆದ ಪತ್ರದಲ್ಲಿ ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ದಾಮೋದರ್ ಸಾವರ್ಕರ್ ಎಂದು ಬರೆದಿದ್ದಾರೆ ಎಂದರು. ಅಲ್ಲದೆ ಪತ್ರ ಪ್ರದರ್ಶನ ಮಾಡಿದರೆ ರಾಜೀನಾಮೆ ಕೊಡುತ್ತೀರಾ?' ಎಂದು ಸವಾಲು ಹಾಕಿದರು.

ಪತ್ರದಲ್ಲಿ ಅಂಬೇಡ್ಕರ್ ಕಾಂಗ್ರೆಸ್ ಹೆಸರು ಉಲ್ಲೇಖ ಮಾಡಿಲ್ಲ, ಬದಲಾಗಿ ಸಾವರ್ಕರ್ ಹೆಸರು ಬರೆದಿದ್ದಾರೆ. ಇದನ್ನು ಸಾಬೀತು ಮಾಡುತ್ತೇವೆ ಎಂದರು. ಇದು ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ಮಾತಿನ ಜಟಾಪಟಿಗೆ ಕಾರಣವಾಯ್ತು.

ಸವಾಲು, ಆರೋಪ, ಪ್ರತ್ಯಾರೋಪ ಹಾಗೂ ಏರು ಧ್ವನಿಯ ಮಾತಿನ ನಡುವೆ ಕಾಂಗ್ರೆಸ್ ಬಿಜೆಪಿ ಸದಸ್ಯರು ಪರಸ್ಪರ ಘೋಷಣೆ ಕೂಗಿದರು. ಈ‌ ನಡುವೆ ಪ್ರಿಯಾಂಕ್ ಖರ್ಗೆ ಅಂಬೇಡ್ಕರ್ ಬರೆದಿರುವ ಪತ್ರವನ್ನು ಸದನದಲ್ಲಿ ಓದಿದರು.

ಅಲ್ಲದೆ ಬಿಜೆಪಿ ಸದಸ್ಯರ ಆರೋಪದಿಂದ ಕೆರಳಿದ ಪ್ರಿಯಾಂಕ್ ಖರ್ಗೆ, 'ಏನಂದುಕೊಂಡಿದ್ದೀರಾ, ಇದು ಸದನ. ಬಾಯಿಗೆ ಬಂದ ಹಾಗೆ ಮಾತನಾಡಲು ಇದು ಆರ್ ಎಸ್ ಎಸ್ ಕಚೇರಿ ಅಲ್ಲ. ಯಾರಿಗೆ ಹೆದರಿಸುತ್ತಿದ್ದೀರಾ? ನೋಡಿದ್ದೀನಿ ನಿಮ್ಮಂತ ಆರ್ ಎಸ್ ಎಸ್ ಜನರನ್ನು‌. ಸದನದಲ್ಲಿ ನಿಮಗೆಷ್ಟು ಅಧಿಕಾರ ಇದ್ಯಾ ನನಗೂ ಅಷ್ಟೇ ಇದೆ' ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT