ರಾಜಣ್ಣ - ರಾಜೇಂದ್ರ 
ರಾಜಕೀಯ

ಹನಿಟ್ರ್ಯಾಪ್ ಯತ್ನ​​ ನಂಗೂ ಮಾಡವ್ರೆ, ನಮ್ಮಪ್ಪಗೂ ಮಾಡವ್ರೆ: ಸಚಿವ ರಾಜಣ್ಣ ಪುತ್ರ, MLC ರಾಜೇಂದ್ರ

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆಎನ್ ರಾಜಣ್ಣ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ ಸಿ ರಾಜೇಂದ್ರ ಅವರು ತಮ್ಮನ್ನು ಹನಿಟ್ರ್ಯಾಪ್​ ಬಲೆಗೆ ಬೀಳಿಸುವ ಯತ್ನ ನಡೆದಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪ್ ವಿಚಾರ ಗುರುವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ್ದು, ಸ್ವತಃ ಸಹಕಾರಿ ಸಚಿವ ಕೆ.ಎನ್‌ ರಾಜಣ್ಣ ಅವರೇ ನನ್ನ ಮೇಲೆ ಹನಿಟ್ರ್ಯಾಪ್‌ ಯತ್ನ ನಡೆದಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆಎನ್ ರಾಜಣ್ಣ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ ಸಿ ರಾಜೇಂದ್ರ ಅವರು ತಮ್ಮನ್ನು ಹನಿಟ್ರ್ಯಾಪ್​ ಬಲೆಗೆ ಬೀಳಿಸುವ ಯತ್ನ ನಡೆದಿದೆ ಎಂದು ಹೇಳಿದ್ದಾರೆ.

ಹನಿಟ್ರ್ಯಾಪ್ ಗೆ ಯತ್ನಿಸುತ್ತಿರುವ ಬಗ್ಗೆ ತಂದೆಯೇ ಒಪ್ಪಿಕೊಂಡಿದ್ದಾರೆ. ಎರಡು ತಿಂಗಳಿಂದ ನಮ್ಮ ತಂದೆಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ. ಅಲ್ಲದೇ 6 ತಿಂಗಳಿನಿಂದ ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆಯುತ್ತಿದೆ. ತನಿಖೆ ಮಾಡುವುದಾಗಿ ಗೃಹ ಸಚಿವರು ಹೇಳಿದ್ದಾರೆ ಎಂದರು.

ನಮ್ಮಪ್ಪ ಮತ್ತು ನನಗೆ ಇಬ್ಬರಿಗೂ ಹನಿಟ್ರ್ಯಾಪ್​ ಬಲೆಗೆ ಬೀಳಿಸಲು ಯತ್ನಿಸಲಾಗಿದೆ. ಇದು ರಾಜಕೀಯನಾ ಅಥವಾ ವೈಯಕ್ತಿಕನಾ ಎಂಬುದರ ಬಗ್ಗೆ ತನಿಖೆ ಆಗಲಿ. ಪೆನ್‌ ಡ್ರೈವ್​, ಸಿಡಿ ಬಗ್ಗೆ ಅನೇಕ ಚರ್ಚೆಗಳು ನಡೆಯುತ್ತಿವೆ. ಅನೇಕ ರಾಜಕಾರಣಿಗಳು ಪೆನ್​ಡ್ರೈವ್ ಬಗ್ಗೆ ಮಾತನಾಡಿದ್ದಾರೆ. ಇದರ ಹಿಂದೆ ಯಾರೋ ಇದ್ದಾರೆ, ಆದ್ರೆ ಯಾರೆಂದು ಗೊತ್ತಿಲ್ಲ. ದೂರು ಕೊಡುತ್ತೇವೆ, ತನಿಖೆ ಆಗಬೇಕಿದೆ ಎಂದರು.

ರಾಜಣ್ಣ ಅವರ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತು. ರಾಜಣ್ಣ ನೇರ‌ನುಡಿಯ ವ್ಯಕ್ತಿ. ಅವರನ್ನು ಕುಗ್ಗಿಸೋಕೆ, ಅಪ್ಪ, ಮಕ್ಕಳಿಗೆ ಕೆಟ್ಟ ಹೆಸರು ತರಬೇಕೆಂದು ಯಾರೋ ಮಾಡಿರಬಹುದು. ಹನಿಟ್ರ್ಯಾಪ್ ಅಂದ್ರೆ ನಮ್ಮ ಜೊತೆಯೇ ಇದ್ದಾರೆ ಅಂತಾ ಅಲ್ಲ. ವಿಡಿಯೋ ಕಾಲ್​ ಮಾಡಿರೋದು ಆಗಿರುತ್ತೆ. ಯಾರೇ ಮಾಡಿರಲಿ ಪಕ್ಷಾತೀತಿವಾಗಿ ತನಿಖೆ ಆಗಬೇಕು. ಹಿಂದೆ ಹಣಕ್ಕಾಗಿ ರಾಜಕಾರಣಿಗಳು, ಉದ್ಯಮಿಗಳ ಮೇಲೆ ಆಗಿದೆ. 48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದು ಸಚಿವರು ಹೇಳಿದ್ದಾರೆ. ಯಾರ ಮೇಲೆ ಆದರೂ ತಪ್ಪೇ, ಇದು ಅಂತ್ಯವಾಗಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT