ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ online desk
ರಾಜಕೀಯ

ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ: JDS ನಿಲುವು ಕುರಿತು ಇಂದು HDK ಸ್ಪಷ್ಟನೆ

"ಮೀಸಲಾತಿ ಮಸೂದೆಯಲ್ಲಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ" ಎಂದು ಜೆಡಿಎಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜನತಾದಳ ಜಾತ್ಯತೀತ ಜನತಾದಳ ಪಕ್ಷವು ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ನೀಡಿರುವ ಸರ್ಕಾರದ ನಿಲುವುದನ್ನು ಬೆಂಬಲಿಸಬೇಕೆ ಅಥವಾ ವಿರೋಧಿಸಿ ಮೈತ್ರಿ ಪಾಲುದಾರ ಬಿಜೆಪಿಯೊಂದಿಗೆ ಕೈಜೋಡಿಸಬೇಕೆ ಎಂಬುದರ ಕುರಿತು ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿದೆ.

ಬಿಜೆಪಿಯ ತೀವ್ರ ವಿರೋಧದ ನಡುವೆಯೂ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶುಕ್ರವಾರ ಮಸೂದೆಯನ್ನು ಅಂಗೀಕರಿಸಿತು.

ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

"ಮೀಸಲಾತಿ ಮಸೂದೆಯಲ್ಲಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ" ಎಂದು ಜೆಡಿಎಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿಬಿ ಸುರೇಶ್ ಬಾಬು ಅವರು ಮಾತನಾಡಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ 2 ಬಿ ಅಡಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಸಿಗುವಂತೆ ಮಾಡಿದ್ದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ. ಆದರೆ, ಚುನಾವಣೆ ವೇಳೆ ಆ ಸಮುದಾಯ ಪಕ್ಷಕ್ಕೆ ಬೆಂಬಲ ನೀಡಿಲ್ಲ. ಸೋಮವಾರ ದೇವೇಗೌಡ ಹಾಗೂ ಕುಮಾರಸ್ವಾಮಿ ಈ ಬಗ್ಗೆ ಚರ್ಚೆ ನಡೆಸಲಿದ್ದು, ನಂತರ ಪಕ್ಷದ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆಂದು ಹೇಳಿದರು.

4% ಕೋಟಾವನ್ನು ಒದಗಿಸುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, 2025 ಅನ್ನು ಶುಕ್ರವಾರ ಕರ್ನಾಟಕ ಶಾಸಕಾಂಗವು ಅಂಗೀಕರಿಸಿದೆ. ಇದು ಅಲ್ಪಸಂಖ್ಯಾತರನ್ನು ಓಲೈಸುವ ಕ್ರಮವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮಸೂದೆಯು ಅಸಂವಿಧಾನಿಕ ಎಂದು ದೂರಿತು. ನಿಯೋಗದಲ್ಲಿ ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು ಕೂಡ ಭಾಗವಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್