ಸಹಕಾರ ಸಚಿವ ಕೆ.ಎನ್. ರಾಜಣ್ಣ 
ರಾಜಕೀಯ

ಹನಿಟ್ರ್ಯಾಪ್ ವಿವಾದ: ದೂರು ದಾಖಲಿಸಲು ರಾಜಣ್ಣ ವಿಳಂಬ; ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಚಿವರು, ಶಾಸಕರು ಮುಂದು

ಈಮಧ್ಯೆ, ಸೂಕ್ತ ಸಮಯದಲ್ಲಿ ಗೃಹ ಸಚಿವರಿಗೆ ದೂರು ನೀಡುವುದಾಗಿ ಸಚಿವ ರಾಜಣ್ಣ ಸೋಮವಾರ ಹೇಳಿದ್ದಾರೆ. ಇದೀಗ ದೂರು ದಾಖಲಿಸಲು ವಿಳಂಬ ಮಾಡುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ಯತ್ನ ಪ್ರಕರಣವು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯ ಕಾಂಗ್ರೆಸ್‌ನಲ್ಲಿನ ಪ್ರಭಾವಿ ನಾಯಕನ ಪಾತ್ರದ ಬಗ್ಗೆ ಸಚಿವರು ಮತ್ತು ಶಾಸಕರ ಗುಂಪು ಹೈಕಮಾಂಡ್ ಅನ್ನು ಭೇಟಿ ಮಾಡಲು ಯೋಜಿಸುತ್ತಿದೆ ಎನ್ನಲಾಗಿದೆ.

ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಭಾವಿ ನಾಯಕರೊಬ್ಬರು ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈಮಧ್ಯೆ, ಸೂಕ್ತ ಸಮಯದಲ್ಲಿ ಗೃಹ ಸಚಿವರಿಗೆ ದೂರು ನೀಡುವುದಾಗಿ ಸಚಿವ ರಾಜಣ್ಣ ಸೋಮವಾರ ಹೇಳಿದ್ದಾರೆ. ಇದೀಗ ದೂರು ದಾಖಲಿಸಲು ವಿಳಂಬ ಮಾಡುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ಪಕ್ಷಾತೀತವಾಗಿ ಕನಿಷ್ಠ 48 ಶಾಸಕರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಮತ್ತು ಈ ಜಾಲ ದೇಶಾದ್ಯಂತ ಹರಡಿದೆ. ಅನೇಕ ಕೇಂದ್ರ ಸಚಿವರು ಸಹ ಇದರಲ್ಲಿ ಸಿಲುಕಿದ್ದಾರೆ. ಪ್ರತಿಸ್ಪರ್ಧಿಗಳು ತಮ್ಮನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಗೃಹ ಸಚಿವ ಜಿ ಪರಮೇಶ್ವರ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗುವುದು ಎಂದು ಘೋಷಿಸಿದರು. ಆದಾಗ್ಯೂ, ಸಚಿವ ರಾಜಣ್ಣ ಇನ್ನೂ ದೂರು ದಾಖಲಿಸಿಲ್ಲ.

ಈ ಆರೋಪಗಳ ಬಗ್ಗೆ ನ್ಯಾಯಾಂಗ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿದವು. ಇದು ವಿಧಾನಸಭೆಯಲ್ಲಿ ಪ್ರತಿಭಟನೆಗಳಿಗೆ ಕಾರಣವಾಯಿತು ಮತ್ತು ಅಂತಿಮವಾಗಿ 18 ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಅವಧಿಗೆ ಅಮಾನತು ಮಾಡಲಾಗಿದೆ.

ಹನಿಟ್ರ್ಯಾಪ್ ಯತ್ನದ ಹಿಂದೆ ಉಪ ಮುಖ್ಯಮಂತ್ರಿ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ಆರೋಪಿಸಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಡಿಕೆ ಶಿವಕುಮಾರ್, ಜನರು ಯಾವುದೇ ಕಾರಣವಿಲ್ಲದೆ ನಾಯಕರನ್ನು ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸುವುದಿಲ್ಲ ಎಂದಿದ್ದಾರೆ.

ಸಮಸ್ಯೆಯ ಗಂಭೀರತೆಯನ್ನು ಅರಿತ ಹೈಕಮಾಂಡ್, ದೂರು ದಾಖಲಿಸುವುದಕ್ಕೆ ತಡೆ ನೀಡಿದ್ದು, ಮುಂದಿನ ನಿರ್ದೇಶನಗಳಿಗಾಗಿ ಕಾಯುವಂತೆ ಸಚಿವ ರಾಜಣ್ಣ ಅವರಿಗೆ ಸೂಚಿಸಿದೆ ಎಂದು ಮೂಲಗಳು ಸೂಚಿಸುತ್ತವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಆಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹನಿಟ್ರ್ಯಾಪ್ ವಿವಾದದ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಾಹಿತಿ ಹಂಚಿಕೊಳ್ಳಲು ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ.

ಜಾರಕಿಹೊಳಿ ಅವರು ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಡೆಸಲು ಮೂರು ದಿನಗಳ ಕಾಲ ದೆಹಲಿಯಲ್ಲಿಯೇ ಇರುತ್ತಾರೆ ಎಂದು ವರದಿಯಾಗಿದೆ. ಹೆಚ್ಚುವರಿಯಾಗಿ, ಸಚಿವರು ಮತ್ತು ಶಾಸಕರ ಗುಂಪೊಂದು ಅವರೊಂದಿಗೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ತಮ್ಮ ದೂರು ವಿಳಂಬವಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿ, 'ನಾನು ಸೂಕ್ತ ಸಮಯದಲ್ಲಿ ದೂರು ಸಲ್ಲಿಸುತ್ತೇನೆ. ಅದಕ್ಕೆ ನಾನು ಇನ್ನೂ ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿಲ್ಲ' ಎಂದು ಹೇಳಿದರು.

ಹನಿ ಟ್ರ್ಯಾಪ್ ಪ್ರಯತ್ನದ ಹಿಂದೆ ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಕೈವಾಡವಿದೆ ಎಂಬ ಬಿಜೆಪಿ ಶಾಸಕ ಮುನಿರತ್ನ ಅವರ ಆರೋಪಕ್ಕೆ ಸಂಬಂಧಿಸಿದಂತೆ, ಸಚಿವ ರಾಜಣ್ಣ, 'ಅದರ ಬಗ್ಗೆ ನನಗೆ ತಿಳಿದಿಲ್ಲ' ಎಂದು ಪ್ರತಿಕ್ರಿಯಿಸಿದರು.

ರಾಜಣ್ಣ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂಬ ಮುನಿರತ್ನ ಅವರ ಬೇಡಿಕೆ ಬಗ್ಗೆ ಕೇಳಿದಾಗ, 'ಮೊದಲು, ಬಿಜೆಪಿ ಶಾಸಕ ಮುನಿರತ್ನ ಅವರು ಉಪಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಆಪ್ತರಾಗಿದ್ದರು. ಆದ್ದರಿಂದ ಅವರು ಪರೀಕ್ಷೆಗೆ ಒಳಗಾಗಬೇಕು' ಎಂದು ಹೇಳಿದರು.

ರಾಜ್ಯದಲ್ಲಿ ನ್ಯಾಯಾಧೀಶರು ಮತ್ತು ಕೇಂದ್ರ ನಾಯಕರು ಸೇರಿದಂತೆ ಸುಮಾರು 48 ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ರಾಜಣ್ಣ ಈ ಹಿಂದೆ ಸದನದಲ್ಲಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT