ಹರೀಶ್ ಗೌಡ 
ರಾಜಕೀಯ

ನಿಯತ್ತಾಗಿರುವ ರಾಜಕಾರಣಿಗಳನ್ನು ಹೇಗೆ ಹನಿ-ಟ್ರ್ಯಾಪ್ ಮಾಡಬಹುದು? ಶಾಸಕ ಹರೀಶ್ ಗೌಡ ಪ್ರಶ್ನೆ

ನಾನು ಸರಿಯಾಗಿ ಇದ್ರೆ ಯಾರು ಏನೂ ಮಾಡುವುದಕ್ಕೆ ಆಗಲ್ಲ. ನಾವು ಮಾತನಾಡುವ, ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿಯಿರಬೇಕು.

ಮೈಸೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಸದ್ದು ಮಾಡುವ ಬೆನ್ನಲ್ಲೇ, ಮೈಸೂರಿನಲ್ಲಿ ಹುಣಸೂರು ಜೆಡಿಎಸ್ ಶಾಸಕ‌ ಹರೀಶ್ ಗೌಡ ಗಂಭೀರ ಆರೋಪ ಪ್ರತಿಕ್ರಿಯಿಸಿದ್ದಾರೆ.

ಪ್ರಾಮಾಣಿಕತೆಯಿಂದ ಇರುವ ರಾಜಕಾರಣಿಗಳನ್ನು ಹೇಗೆ 'ಹನಿ-ಟ್ರ್ಯಾಪ್' ಮಾಡಬಹುದು ಎಂದು ಪ್ರಶ್ನಿಸಿದರು. ನಾನು ಸರಿಯಾಗಿ ಇದ್ರೆ ಯಾರು ಏನೂ ಮಾಡುವುದಕ್ಕೆ ಆಗಲ್ಲ. ನಾವು ಮಾತನಾಡುವ, ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿಯಿರಬೇಕು. ನಾವು ಸರಿ ಇದ್ದಾಗ ಯಾರು ಏನು ಮಾಡಲಿಕ್ಕೆ ಆಗುವುದಿಲ್ಲ. ಸದನದಲ್ಲಿ ಬರೀ ಇದೇ ಆಗಿದೆ. ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಸದನದಲ್ಲಿ ರೈತರ ಪರ ಸರ್ಕಾರ ಧ್ವನಿ ಎತ್ತಿಲ್ಲ. ಹನಿ ಟ್ರ್ಯಾಪ್ ಆಗಲಿ, ಯಾವುದೇ ಟ್ರ್ಯಾಪ್ ಆಗಲಿ ನಾವು ಸರಿ ಇದ್ರೆ ಏನು ಆಗಲ್ಲ' ಎಂದು ಪರೋಕ್ಷವಾಗಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಬುಧವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನಾಯಕ ಮತ್ತು ಶಾಸಕ ಮತ್ತು ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರ ಪುತ್ರ ಗೌಡ, ಮಹಿಳೆಯರ ಬಗ್ಗೆ ನಮ್ಮ ಮನೋಭಾವ ಮತ್ತು ಅಭಿಪ್ರಾಯ ಸರಿಯಾಗಿದ್ದರೆ, ಯಾವುದೇ ಅಪರಾಧ ನಡೆಯುವುದಿಲ್ಲ ಎಂದು ಹೇಳಿದರು.

"ಹನಿ-ಟ್ರ್ಯಾಪ್ ವಿಷಯ ವಿಧಾನಸಭೆಯಲ್ಲಿ ಚರ್ಚೆಗೆ ಬರಬಾರದಿತ್ತು. ಸಮಸ್ಯೆ ಇದ್ದವರು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬೇಕಿತ್ತು, ಅವರು ಅದನ್ನು ಪರಿಹರಿಸುತ್ತಿದ್ದರು. ಇದು ಯುವ ಶಾಸಕರಿಗೆ ಯಾವ ಸಂದೇಶವನ್ನು ನೀಡುತ್ತದೆ?" ಎಂದು ಪ್ರಶ್ನಿಸಿದ್ದಾರೆ.

ಮೈಸೂರು ಡಿಸಿಸಿ ಬ್ಯಾಂಕ್ ದಿವಾಳಿಯಾಗಿದೆ ಮತ್ತು ಕೇವಲ ಅನುಕೂಲಕರ ರೈತರು ಮಾತ್ರ ಸಾಲ ಪಡೆಯುತ್ತಿದ್ದಾರೆ ಎಂದು ಹರೀಶ್ ಗೌಡ ಹೇಳಿದರು. "ರೈತರು ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ರೈತರು ಎಂದು ವಿಭಜನೆಯಾಗಿದ್ದಾರೆ. ಅಧಿಕಾರಿಗಳು ಶಾಸಕರ ಮಾತನ್ನು ಕೇಳುತ್ತಿಲ್ಲ ಎಂದು ಅವರು ಹೇಳಿದರು.

ಹೆಸರೇಳದೆ ಮಾಜಿ ಶಾಸಕ ಹೆಚ್.ಪಿ ಮಂಜುನಾಥ್ ವಿರುದ್ದ ಕಿಡಿಕಾರಿದ್ದಾರೆ. ನಾನು ಹಾಲಿ ಶಾಸಕನಾಗಿ ರೈತರ ಪರ ಬಂದು ಪ್ರತಿಭಟನೆ ಮಾಡ್ತಿದ್ದೇನೆ. ನಾನು ಬ್ಯಾಂಕ್ ಕಡೆ ಬರಬಾರದು ಅಂತಾನೆ ಇನ್ನು ಚುನಾವಣೆ ನಡೆಸಿಲ್ಲ. ನಾನು ಕೈ ಮುಗಿದು ಕೇಳ್ತೇನೆ ರೈತರ ಪರವಾಗಿ ಕೆಲ್ಸ ಮಾಡಿ ನಾನು ಬರುವುದೇ ಇಲ್ಲ. ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಹುಣಸೂರಿನ ರೈತರಿಗೆ ಎಂಸಿಡಿಸಿಸಿ ಬ್ಯಾಂಕ್ ನಲ್ಲಿ ಸಾಲ ಕೊಡುತ್ತಿಲ್ಲ. ಕಳೆದ 5 ತಿಂಗಳಿಂದಲೂ ಕೂಡ ರೈತರನ್ನು ಆಟ ಆಡಿಸುತ್ತಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಜಿ ಟಿ ದೇವೆಗೌಡ ಕುಟುಂಬದ ಹಿಡಿತ ತಪ್ಪಿಸಲು ರೈತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಹನಗೂಡು, ಧರ್ಮಪುರ ಸಹಕಾರಿ ಬ್ಯಾಂಕ್ ನಲ್ಲಿ ಸಾಲ‌ಮರುಪವತಿ ಮಾಡಿದ್ರು ಸಾಲ ನೀಡುತ್ತಿಲ್ಲ. ಬ್ಯಾಂಕ್ ಆಡಳಿತಾಧಿಕಾರಿ ರೈತರ ಹಿತ ಮರೆತು ಆ ನಾಯಕನ ಮಾತಿಗೆ ಕುಣಿಯುತ್ತಿದ್ದಾರೆ. ಹುಣಸೂರಿನಲ್ಲಿ 15 ವರ್ಷದಿಂದಲೂ ಅಧಿಕಾರಿದಲ್ಲಿದ್ದ ಒಬ್ಬ ನಾಯಕರು ಇದರ ಹಿಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!