ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

ಏಪ್ರಿಲ್ 2ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: MLC ಹುದ್ದೆಗಳ ಭರ್ತಿ, Honeytrap ಕೇಸ್ ಕುರಿತು ಹೈಕಮಾಂಡ್ ಜೊತೆ ಚರ್ಚೆ?

ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಎರಡು ತಿಂಗಳ ನಂತರ ದೆಹಲಿಗೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ.

ಬೆಂಗಳೂರು: ರಾಜ್ಯದ ಸಚಿವರ ಮೇಲಿನ ಹನಿಟ್ರ್ಯಾಪ್‌ ಆರೋಪ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಪ್ರಕರಣ ಇದೀಗ ದೆಹಲಿ ಅಂಗಳ ತಲುಪಿದೆ. ಇದರ ನಡುವಲ್ಲೇ ಸಚಿವ ಜಾರಕಿಹೊಳಿಯವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಎರಡು ತಿಂಗಳ ನಂತರ ದೆಹಲಿಗೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಖಾಲಿ ಇರುವ ನಾಲ್ಕು ಎಂಎಲ್‌ಸಿ ಹುದ್ದೆಗಳಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡಲು ಒಪ್ಪಿಗೆ ಪಡೆಯಲು ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆಂದು ಹೇಳಲಾಗುತ್ತಿದ್ದು, ಇದೇ ವೇಳೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂಬ ಆರೋಪ ಸೇರಿದಂತೆ ಕರ್ನಾಟಕದ ಇತರ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಿಎಂ ಚರ್ಚಿಸುವ ನಿರೀಕ್ಷೆಯಿದೆ.ಎಂದು ಬಲ್ಲ ಮೂಲಗಳು ತಿಳಿಸಿವೆ.

ಇನ್ನು ಎಂಎಲ್‌ಸಿ ಹುದ್ದೆಗಳಿಗೆ ಸಿಎಂ ಕೋಟಾದಡಿಯಲ್ಲಿ, ಮಾಜಿ ಲೋಕಸಭಾ ಸದಸ್ಯ ವಿ.ಎಸ್. ಉಗ್ರಪ್ಪ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಕೋಟಾದಡಿಯಲ್ಲಿ ಬಿ.ಎಲ್. ಶಂಕರ್ ಆಯ್ಕೆಯಾಗುವ ನಿರೀಕ್ಷೆಯಿದೆ.

ಉಳಿದ ಎರಡು ಸ್ಥಾನಗಳಲ್ಲಿ ಒಂದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸುತ್ತಾರೆ ಮತ್ತು ಮತ್ತೊಂದು ಸ್ಥಾನವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.

ಈಗಾಗಲೇ ಸತೀಶ್ ಜಾರಕಿಹೊಳಿ ಮತ್ತು ರಾಜಣ್ಣ ಸೇರಿದಂತೆ ಅವರ ಬೆಂಬಲಿಗರು ಪಕ್ಷದ ಕೇಂದ್ರ ನಾಯಕರಿಗೆ ಹನಿಟ್ರ್ಯಾಪ್ ವಿಷಯದ ಬಗ್ಗೆ ಮಾಹಿತಿ ನೀಡಿದ್ದು, ಸಿಎಂ ಭೇಟಿ ವೇಳೆ ಈ ವಿಚಾರದ ಬಗ್ಗೆ ಚರ್ಚೆ ನಡೆಯುವುದು ಅನುಮಾನವೆಂದು ಹೇಳಲಾಗುತ್ತಿದೆ.

ಮೇ 20 ರಂದು ಮುಖ್ಯಮಂತ್ರಿಯಾಗಿ ಎರಡು ವರ್ಷಗಳನ್ನು ಪೂರೈಸುತ್ತಿರುವುದರಿಂದ ಸಿದ್ದರಾಮಯ್ಯ ಅವರು ತಮ್ಮ ಆಡಳಿತದ ಬಗ್ಗೆ ಕೇಂದ್ರ ನಾಯಕರೊಂದಿಗೆ ಚರ್ಚಿಸಲಿದ್ದಾರ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಈಗಾಗಲೇ ಖರ್ಗೆ ಅವರೊಂದಿಗೆ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಚರ್ಚಿಸಿದ್ದು, ರಾಜಣ್ಣ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಆದರೆ ರಾಜಣ್ಣ ಪಕ್ಷದ ನಾಲ್ಕು ಗೋಡೆಗಳ ಒಳಗೆ ಚರ್ಚಿಸುವ ಬದಲು ಸದನದಲ್ಲಿ ಈ ವಿಷಯವನ್ನು ಎತ್ತಿದ್ದರಿಂದ ಹೈಕಮಾಂಡ್ ನಿರಾಶೆಗೊಂಡಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ದೆಹಲಿ ಭೇಟಿ ವೇಳೆ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಪುನರ್ರಚನೆಗೆ ಹೈಕಮಾಂಡ್‌ನ ಒಪ್ಪಿಗೆ ಪಡೆಯಲು ಪ್ರಯತ್ನಿಸಬಹುದು ಎನ್ನಲಾಗಿದ್ದು, ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಎಸ್‌ಟಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ನಡುವೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಗುರುವಾರ ನವದೆಹಲಿಗೆ ತೆರಳಲಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿಗಳ 3 ದಿನಗಳ ಎಐಸಿಸಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ. ಇದೇ ವೇಳೆ ಡಿಕೆ.ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT