ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

'ಹೊಂದಾಣಿಕೆ ರಾಜಕೀಯ'ಕ್ಕೆ ಯತ್ನಾಳ್ ತಲೆದಂಡ: ಸಿದ್ದು ಕ್ಯಾಂಪ್ ಗೆ ಸಹಾಯ ಮಾಡಲು ಹೋಗಿ ಕೆಟ್ಟ 'ಹಿಂದೂ ಹುಲಿ'?

ತಂದೆ-ಮಗ ಇಬ್ಬರೂ ಭ್ರಷ್ಟಾಚಾರ ಮತ್ತು ವಂಶಪಾರಂಪರ್ಯ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದರು.

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಈ ಹಿಂದೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದರು.

ಆದರೆ ಆಡಳಿತ ಪಕ್ಷದ ಒಂದು ಗುಂಪಿಗೆ, ವಿಶೇಷವಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಸಹಾಯ ಮಾಡಲು ಹನಿಟ್ರ್ಯಾಪ್ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಸ್ವತಃ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ.

ಮಾಜಿ ಕೇಂದ್ರ ಸಚಿವ ಯತ್ನಾಳ್, ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಹೊಂದಾಣಿಕೆ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಯಾವಾಗಲೂ ಆರೋಪಿಸುತ್ತಲೇ ಬಂದಿದ್ದಾರೆ. ತಂದೆ-ಮಗ ಇಬ್ಬರೂ ಭ್ರಷ್ಟಾಚಾರ ಮತ್ತು ವಂಶಪಾರಂಪರ್ಯ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದರು.

ಮಾರ್ಚ್ 21 ರಂದು ವಿಧಾನಸಭೆ ಅಧಿವೇಶನದಲ್ಲಿ ಯತ್ನಾಳ್ ತಮ್ಮ ಹಳ್ಳ ತಾವೇ ತೋಡಿಕೊಂಡರು. ಸದನದಲ್ಲಿ ಹನಿಟ್ರ್ಯಾಪ್ ವಿಷಯ ಪ್ರಸ್ತಾಪಿಸಿದ್ದು ಯತ್ನಾಳ್ ಇಮೇಜ್‌ಗೆ ಹಾನಿ ಮಾಡಿದ ಅಂಶಗಳಲ್ಲಿ ಒಂದಾಗಿದೆ ಎಂದು ಬಿಜೆಪಿಯ ತುಮಕೂರು ಗ್ರಾಮೀಣ ಶಾಸಕ ಬಿ. ಸುರೇಶ್ ಗೌಡ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮಾರ್ಚ್ 21 ರಂದು ವಿಧಾನಸಭೆಯಲ್ಲಿ ನಡೆದ ಘಟನೆಗಳನ್ನು ನೆನಪಿಸಿಕೊಂಡ ಸುರೇಶ್ ಗೌಡ, ಸದನದಲ್ಲಿ ಆಡಳಿತ ಪಕ್ಷದ ಕೆಲವರಿಂದ ಚೀಟಿ ಪಡೆದ ನಂತರ ಯತ್ನಾಳ್ ಹನಿಟ್ರ್ಯಾಪ್ ವಿಷಯ ಪ್ರಸ್ತಾಪಿಸಿದರು. ಈ ವೇಳೆ ರಾಜಣ್ಣ ಅವರ ಹೆಸರನ್ನು ಎಳೆದು ತಂದರು ಎಂದು ಹೇಳಿದರು. ಯತ್ನಾಳ್ ಚೀಟಿಯಲ್ಲಿದ್ದ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು. ಚುನಾಯಿತ ಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್‌ಮೇಲ್ ಪ್ರಯತ್ನಗಳ ಬಗ್ಗೆ ಸಿಬಿಐ ತನಿಖೆ ಮಾಡಬೇಕೇಂದು ಒತ್ತಾಯಿಸಿದರು. ನಂತರ ರಾಜಣ್ಣ ಈ ವಿಷಯವನ್ನು ಪ್ರಸ್ತಾಪಿಸಿದರು ಎಂದು ಸುರೇಶ್ ಗೌಡ ಹೇಳಿದರು.

ಸಿದ್ದರಾಮಯ್ಯ ಕ್ಯಾಂಪ್ ಗೆ ಸಹಾಯ ಮಾಡಲು ಯತ್ನಾಳ್ ಮಾಡಿದ ಪ್ರಯತ್ನ ಇದಾಗಿದೆ ಎಂದು ಬಿಜೆಪಿ ಹೈಕಮಾಂಡ್ ಭಾವಿಸಿರಬಹುದು ಎಂದು ಗೌಡ ಹೇಳಿದರು, ಯತ್ನಾಳ್‌ಗೆ ಚೀಟಿ ಯಾರು ಕಳುಹಿಸಿದ್ದಾರೆಂದು ತಿಳಿಯಲು ತನಿಖೆ ಅಗತ್ಯವಿದೆ ಎಂದು ಹೇಳಿದರು.

ಯತ್ನಾಳ್ ಅವರು ಅಧ್ಯಕ್ಷರಾಗಿರುವ ಸಿದ್ಧಶ್ರೀ ಸೌಹಾರ್ದ ಸಹಕಾರಿ ನಿಯಮಿತ್ (ಎಸ್‌ಎಸ್‌ಎಸ್‌ಎನ್) ನಡೆಸುತ್ತಿರುವ ಸಕ್ಕರೆ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (ಕೆಎಸ್‌ಪಿಸಿಬಿ) ದೀರ್ಘಕಾಲದಿಂದ ಬಾಕಿ ಉಳಿದಿರುವ ಕಾರ್ಯಾಚರಣೆಗೆ ಒಪ್ಪಿಗೆ (ಸಿಎಫ್‌ಒ) ಸಹ ಪಡೆದರು. ಕಾರ್ಖಾನೆ ಇನ್ನೂ ಪರಿಸರ ಅನುಮತಿ ಪಡೆಯದ ಕಾರಣ ಕೆಎಸ್‌ಪಿಸಿಬಿ ಸಿಎಫ್‌ಒ ಅವರನ್ನು ಬಾಕಿ ಉಳಿಸಿಕೊಂಡಿತ್ತು. "ಆದರೆ ಈ ವಿಷಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಯತ್ನಾಳ್ ಅವರನ್ನು ಬೆಂಬಲಿಸಿದೆ ಎಂದು ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಯತ್ನಾಳ್ ವಿರೋಧಿಗಳು ಅದರಲ್ಲೂ ವಿಶೇಷವಾಗಿ ವಿಜಯೇಂದ್ರ ಪಾಳಯದವರು, ಮಾಜಿ ಕೇಂದ್ರ ಸಚಿವ ಯತ್ನಾಳ್ ಕೂಡ ಸಿದ್ದರಾಮಯ್ಯ ಸರ್ಕಾರದ ಸದಸ್ಯರೊಂದಿಗೆ ಗುಪ್ತ ಮೈತ್ರಿ ಹೊಂದಿದ್ದಾರೆ ಎಂಬುದನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಡಿವೈಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಯತ್ನಾಳ್, ಸಿದ್ದರಾಮಯ್ಯ ಕ್ಯಾಂಪ್ ಗೆ ಸಹಾಯ ಮಾಡಲು ಹೋಗಿದ್ದಾರೆ. ಆದರೆ ಅವರು ತಟಸ್ಥರಾಗಿರಬೇಕಾಗಿತ್ತು ಎಂದು ಬಿಜೆಪಿ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT