ಜಿಟಿ ದೇವೇಗೌಡ 
ರಾಜಕೀಯ

CM ಆಗಲು HDK ಬೆಂಬಲ ಕೇಳಿರಬಹುದು ಸತೀಶ್ ಜಾರಕಿಹೊಳಿ: ಜಿ.ಟಿ ದೇವೇಗೌಡ ಹೊಸ ಬಾಂಬ್

ಸಿದ್ದರಾಮಯ್ಯ ಏನು ಬಜೆಟ್ ಮಂಡನೆ ಮಾಡಿದರು ಎಂಬುದು ಜನತೆಗೆ ಗೊತ್ತಾಗಲೇ ಇಲ್ಲ. ಅಭಿವೃದ್ಧಿ ವಿಚಾರ ಚರ್ಚೆ ಆಗಿದ್ದರು ಜನ ಖುಷಿಯಾಗುತ್ತಿದ್ದರು ಎಂದರು.

ಮೈಸೂರು: ಮುಂದೆ ರಾಜ್ಯದ ಮುಖ್ಯಮಂತ್ರಿಯಾಗುವ ಸಂದರ್ಭ ಬಂದರೆ ತಮಗೆ ಬೆಂಬಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿರಬಹುದು ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಗುರುವಾರ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗುವ ಅವಕಾಶ ಸಿಕ್ಕದರೆ ಜೆಡಿಎಸ್​​ನ 18 ಶಾಸಕರ ಬೆಂಬಲ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಕೇಳಿರಬಹುದು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜಾರಕಿಹೊಳಿಯವರು ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದರೆ ಅದಕ್ಕೆ ಇದೇ ಕಾರಣ. ಒಂದು ವೇಳೆ ಜೆಡಿಎಸ್ ಅವರಿಗೆ ಬೆಂಬಲ ನೀಡಿದರೂ ನಾನು ಈ ವಿಚಾರದಲ್ಲಿ ತಟಸ್ಥನಾಗಿರುತ್ತೇನೆಂದು ಮಾರ್ಮಿಕವಾಗಿ ನುಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಬಿಜೆಪಿಯ ಆಂತರಿಕ ವಿಷಯ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಮುಂದೆ ಇನ್ನೂ ಏನೇನು ಬೆಳವಣಿಗೆ ಆಗುತ್ತೆ ಕಾದು ನೋಡೋಣ ಎಂದು ತಿಳಿಸಿದರು.

ಹನಿಟ್ರ್ಯಾಪ್ ಪ್ರಕರಣದ ವಿಚಾರವಾಗಿ ಪ್ರತಿಯಿಸಿ, ಸದನದಲ್ಲಿ ಸುನಿಲ್ ಕುಮಾರ್ ಹಾಗೂ ರಾಜಣ್ಣ ಈ ವಿಚಾರ ಮಾತನಾಡಿದ್ದಾರೆ. ಕರ್ನಾಟಕ ರಾಜಕಾರಣಕ್ಕೆ ಇತಿಹಾಸ ಇದೆ. ಇತ್ತೀಚಿನ ದಿನಗಳ ಘಟನೆ ನೋಡಿದ್ರೆ ಪ್ರಜಾಪ್ರಭುತ್ವ ವೇಗವಾಗಿ ಬೆಳೆಯುತ್ತಿದೆ ಎನಿಸುತ್ತಿದೆ ಎಂದು ವ್ಯಂಗ್ಯವಾಡಿದರು.

ಸದನದಲ್ಲಿ ರಾಜ್ಯದ ಅಭಿವೃದ್ಧಿ ವಿಚಾರ ಚರ್ಚೆ ಆಗಬೇಕಿತ್ತು. ಕೇವಲ ಗಲಾಟೆ ಗದ್ದಲದಲ್ಲೇ ಸದನ ಮುಗಿಯಿತು. ಸಿದ್ದರಾಮಯ್ಯ ಏನು ಬಜೆಟ್ ಮಂಡನೆ ಮಾಡಿದರು ಎಂಬುದು ಜನತೆಗೆ ಗೊತ್ತಾಗಲೇ ಇಲ್ಲ. ಅಭಿವೃದ್ಧಿ ವಿಚಾರ ಚರ್ಚೆ ಆಗಿದ್ದರು ಜನ ಖುಷಿಯಾಗುತ್ತಿದ್ದರು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT