ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೆ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ: ಯತ್ನಾಳ್

ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ವಿರುದ್ಧ ನಮ್ಮೆಲ್ಲರ ಹೋರಾಟ ಆರಂಭವಾಗಲಿದೆ.

ವಿಜಯಪುರ: ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಟೀಕಾ ಪ್ರಹಾರವನ್ನು ಮುಂದುವರಿಸಿದ್ದು, ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೆ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ ಎಂದು ಮಾರ್ಮಿಕ ನುಡಿದಿದ್ದಾರೆ.

ಯುಗಾದಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಕಲ್ಪ ಪತ್ರ. ಬಂಧುಗಳೇ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಶ್ರೀ ವಿಶ್ವಾವಸು ಸಂವತ್ಸರವು ನಿಮಗೆಲ್ಲರಿಗೂ ಸುಖ, ಶಾಂತಿ, ನೆಮ್ಮದಿಯನ್ನು ನೀಡಲಿ. ರೈತರಿಗೆ, ಶ್ರಮಿಕರಿಗೆ ಈ ಸಂವತ್ಸರವು ಫಲಪ್ರದಾಯಕವಾಗಲಿ ಎಂದು ಆಶಿಸುತ್ತೇನೆ. ಜನ ಸೇವೆ ಮಾಡದೆ, ಪ್ರಜೆಗಳ ಕಷ್ಟ ಕಾರ್ಪಣ್ಯಕ್ಕೆ ಧ್ವನಿಯಾಗದೆ, ತಮ್ಮ ರಾಜಕೀಯ ಅಭ್ಯುದಯಕ್ಕೆ ಹೊಂದಾಣಿಕೆ ರಾಜಕಾರಣ ಮಾಡುವವರ ವಿರುದ್ಧ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.

ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೆ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ವಿರುದ್ಧ ನಮ್ಮೆಲ್ಲರ ಹೋರಾಟ ಆರಂಭವಾಗಲಿದೆ. ಅಲ್ಲದೆ, ರಾಮ ರಾಜ್ಯ ಸ್ಥಾಪನೆ, ಉತ್ತರ ಕರ್ನಾಟಕದ ಅಭಿವೃದ್ಧಿ, ನೀರಾವರಿ, ಗೋ ರಕ್ಷಣೆ, ಕನ್ನಡ ಮಾಧ್ಯಮ ಪರೀಕ್ಷಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ, ಬಾಣಂತಿಯರ ಸಾವು, ಲವ್ ಜಿಹಾದ್, ವಕ್ಫ್ ವಿರುದ್ಧ ನನ್ನ ಹೋರಾಟವನ್ನು ತೀಕ್ಷ್ಣಗೊಳಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತೇನೆ.

ಜಾಲತಾಣದ ಮೂಲಕ ತಮ್ಮ ಶುಭ ಹಾರೈಕೆಗಳನ್ನು, ಬೆಂಬಲ, ಪ್ರೋತ್ಸಾಹವನ್ನು ತೋರಿಸುತ್ತಿರುವ ಎಲ್ಲಾ ಸಹೃದಯೀ ಸ್ನೇಹಿತರಿಗೂ, ಅಭಿಮಾನಿಗಳಿಗೂ, ಹಿತೈಷಿಗಳಿಗೂ ಹಾಗೂ ಕರೆ ಮಾಡಿ ಬೆಂಬಲ, ಮನೋಸ್ಥೈರ್ಯ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಭಾರತ ಮಾತೆಗೆ ಜಯವಾಗಲಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ