ಆರ್. ಅಶೋಕ್  
ರಾಜಕೀಯ

ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ಕರ್ನಾಟಕ ಜಾತಿಗಣತಿ ವರದಿಯೇ ಮಾದರಿ: ಆರ್. ಅಶೋಕ್ ತಿರುಗೇಟು

ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ನಿಮ್ಮ ಗಣತಿಯೇ ಮಾದರಿ. ಜಾತಿ ಗಣತಿಗೆ ಕರ್ನಾಟಕದ ಮಾದರಿ ಅಳವಡಿಸಿ ಎಂದು ತಾವು ನೀಡಿರುವ ಹೇಳಿಗೆ ನಿಜಕ್ಕೂ ಹಾಸ್ಯಾಸ್ಪದ.

ಬೆಂಗಳೂರು: ಕೇಂದ್ರ ಸರ್ಕಾರದ ಜಾತಿ ಗಣತಿಗೆ ಕರ್ನಾಟಕ ಮಾದರಿಯನ್ನು ಅಳವಡಿಸಿ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ತಿರುಗೇಟು ನೀಡಿದ್ದಾರೆ.

ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ನಿಮ್ಮ ಗಣತಿಯೇ ಮಾದರಿ ಎಂದು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜಾತಿ ಗಣತಿಗೆ ಕರ್ನಾಟಕದ ಮಾದರಿ ಅಳವಡಿಸಿ ಎಂದು ತಾವು ನೀಡಿರುವ ಹೇಳಿಗೆ ನಿಜಕ್ಕೂ ಹಾಸ್ಯಾಸ್ಪದ. ಮೂಲ ಪ್ರತಿ ಕಳೆದು ಹೋಗಿರುವ, ಕಾರ್ಯದರ್ಶಿಗಳ ಸಹಿಯೇ ಇಲ್ಲದ, ಪುಟಕ್ಕೆ 5-10 ರೂಪಾಯಿ ನೀಡಿ ಶಾಲಾ ಮಕ್ಕಳ ಕೈಯಲ್ಲಿ ಅರ್ಜಿ ಭರ್ತಿ ಮಾಡಿಸಿರುವ, ನಾಯಿಗಳು ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಹೋಗದ, ಹತ್ತು ವರ್ಷಗಳಾದರೂ ಸ್ವೀಕರಿಸಿದ ನಿಮ್ಮ ಜಾತಿ ಗಣತಿ ವರದಿ, ಜಾತಿ ಜನಗಣತಿಯನ್ನು ಹೇಗೆ ಮಾಡಬಾರದು ಎನ್ನುವುದಕ್ಕೆ ಮಾದರಿ ಎಂದಿದ್ದಾರೆ.

ಜಾತಿ ಜನಗಣತಿಯನ್ನ ಬಿಜೆಪಿ ವಿರೋಧಿಸುತ್ತಲೇ ಬಂದಿದೆ ಎಂದು ತಾವು ಹೇಳಿರುವುದು ಹಸಿ ಸುಳ್ಳು. 2010ರಲ್ಲಿ ಅಂದಿನ ಲೋಕಸಭೆಯ ವಿಪಕ್ಷ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರು 2011ರ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಬಿಜೆಪಿ ಬೆಂಬಲಿಸುತ್ತದೆ ಎಂದು ಲಿಖಿತ ರೂಪದಲ್ಲಿ ಯುಪಿಎ ಸರ್ಕಾರಕ್ಕೆ ತಿಳಿಸಿದ್ದರು. ಸಂಸತ್ತಿನಲ್ಲಿ ಅಂಗೀಕರಿಸಲಾದ ಸರ್ವಾನುಮತದ ನಿರ್ಣಯವನ್ನೂ ಬಿಜೆಪಿ ಬೆಂಬಲಿಸಿತ್ತು.

ಆದರೆ, ಅಂದಿನ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯ ಬದಲು ಕಾಟಾಚಾರಕ್ಕೆ ಸಾಮಾಜಿಕ-ಆರ್ಥಿಕ ಜಾತಿ ಜನಗಣತಿ – 2011 (SECC-2011) ಸಮೀಕ್ಷೆಯ ನಡೆಸಿತು. ಕರ್ನಾಟಕದ ಜಾತಿ ಗಣತಿಯಂತೆ ಕಳಪೆ ಯೋಜನೆ ಮತ್ತು ಅಸಮರ್ಥ ಅನುಷ್ಠಾನದಿಂದಾಗಿ ಅದು ಸಂಪೂರ್ಣವಾಗಿ ವಿಫಲವಾಯಿತು. ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ ನಂತರವೂ ಅದರ ಫಲಿತಾಂಶಗಳನ್ನು ಬಿಡುಗಡೆ ಮಾಡಲೇ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಗಣತಿ ಬಗ್ಗೆ ಇರುವ ನಿಜವಾದ ಬದ್ಧತೆ ಎಂದು ಅಶೋಕ್ ಕಿಡಿಕಾರಿದ್ದಾರೆ.

ಬಿಜೆಪಿಗೆ ಜಾತಿ ಗಣತಿಯನ್ನ ಎಂದಿಗೂ ಚುನಾವಣಾ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳಲಿಲ್ಲ. ಅಧಿಕಾರವಿದ್ದಾಗ ಜಾತಿ ಜನಗಣತಿ ಮಾಡುವ ನಿರ್ಧಾರ ಕೈಗೊಂಡು ಬದ್ಧತೆ ಪ್ರದರ್ಶನ ಮಾಡಿದ್ದೇವೆಯೇ ಹೊರತು ವಿಪಕ್ಷದಲ್ಲಿದಾಗ ಮೊಸಳೆ ಕಣ್ಣೀರು ಸುರಿಸಿ, ಅಧಿಕಾರ ಇದ್ದಾಗ ನಿರ್ಲಕ್ಷ್ಯ ಮಾಡುವ ಕೀಳು ರಾಜಕೀಯ ಮಾಡಿಲ್ಲ. ಇದು ಸಾಮಾಜಿಕ ನ್ಯಾಯದ ಬಗ್ಗೆ ನಮಗಿರುವ ನೈಜವಾದ ಬದ್ಧತೆ. ಜಾತಿ ಜನಗಣತಿ ಬಗ್ಗೆ ಬಿಜೆಪಿಯದ್ದು ಇದ್ದ ತಕರಾರು ಒಂದೇ. ಅದು ರಾಜಕೀಯ ದಾಳವಾಗಿ ದುರ್ಬಳಕೆ ಆಗಬಾರದು ಎಂಬುದು.

ಕೇಂದ್ರ ಸರ್ಕಾರ ಈಗ ನಡೆಸಲಿರುವ ಜಾತಿ ಗಣತಿ ಅತ್ಯಂತ ಪಾರದರ್ಶಕವಾಗಿ, ವೈಜ್ಞಾನಿಕವಾಗಿ, ಸದುದ್ದೇಶದಿಂದ ನಡೆಯಲಿದೆಯೇ ಹೊರತು ನಿಮ್ಮ ಕಾಂಗ್ರೆಸ್ ಸರ್ಕಾರ ಮಾಡಿದಂತೆ ರಾಜಕೀಯ ಅನುಕೂಲಕ್ಕಾಗಿ ಮೂಗಿನ ನೇರಕ್ಕೆ ದತ್ತಾಂಶವನ್ನು ತಿರುಚುವ ದುರುದ್ದೇಶದಿಂದ ಮಾಡುವುದಿಲ್ಲ. ಕರ್ನಾಟಕದ ಜಾತಿ ಗಣತಿ ಪ್ರಕ್ರಿಯೆ ಜಾತಿಗಣತಿಯನ್ನ ಹೇಗೆ ನಡೆಸಬಾರದು ಎಂಬುದಕ್ಕೆ ಮಾದರಿಯೇ ಹೊರತು ಅದರಲ್ಲಿ ಅನುಸರಿವಂತಹ ಯಾವುದೇ ಒಳ್ಳೆಯ ಅಂಶಗಳೂ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

SCROLL FOR NEXT