ಮಲ್ಲಿಕಾರ್ಜುನ ಖರ್ಗೆ ಮತ್ತು ವಿಜಯೇಂದ್ರ. 
ರಾಜಕೀಯ

ನಿಮ್ಮ ಹೇಳಿಕೆ 'ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು' ಎಂಬಂತಾಗಿದೆ: ಖರ್ಗೆ ಕುರಿತು BJP ವ್ಯಂಗ್ಯ

ನಮ್ಮ ಕಾರ್ಯಕರ್ತರಿಗೆ ಒಂದೇ ಒಂದು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ, ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ. ನಮ್ಮನ್ನು ಕೆಣಕಬೇಡಿ, ನಾವು ತಿರುಗಿಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ ಎಂದು ಮಲ್ಲಿಕಾರ್ಜುವನ ಖರ್ಗೆ ಗುಡುಗಿದ್ದರು.

ಬೆಂಗಳೂರು: ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದರ ಬದಲು ಬಿಜೆಪಿ, ಆರ್.ಎಸ್.ಎಸ್ ಗೆ 'ನಾವು ತಿರುಗಿ ಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ' ಎಂಬ ನಿಮ್ಮ ಹೇಳಿಕೆ 'ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು' ಎಂಬಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ಬಿಜೆಪಿ ವ್ಯಂಗ್ಯವಾಡಿದೆ.

ಹುಬ್ಬಳ್ಳಿಯಲ್ಲಿ ಗುರುವಾರ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ವಿರುದ್ಧ ಕಾಂಗ್ರೆಸ್ ರ‍್ಯಾಲಿ ನಡೆಸಿತ್ತು. ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದ ಮಲ್ಲಿಕಾರ್ಜುವನ ಖರ್ಗೆಯವರು, ನಮ್ಮ ಕಾರ್ಯಕರ್ತರಿಗೆ ಒಂದೇ ಒಂದು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ, ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ. ನಮ್ಮನ್ನು ಕೆಣಕಬೇಡಿ, ನಾವು ತಿರುಗಿಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ ಎಂದು ಗುಡುಗಿದ್ದರು.

ಈ ಹೇಳಿಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಬಿಜೆಪಿ ಹಾಗೂ ಆರ್.ಎಸ್.ಎಸ್ ಸಂಘಟನೆಗಳ ಕುರಿತು ನೀವು ವಾರ್ನಿಂಗ್ ನೀಡಿರುವ ಪರಿ ಗಮನಿಸಿದರೆ ಸರ್ವಾಧಿಕಾರಿ ಸಂಸ್ಕೃತಿಯ ಭಾಗವೆಂಬಂತೆ ಭಾಸವಾಗುತ್ತಿದೆ. ನಿಮ್ಮ ಮಾತಿನ ದಾಟಿ, ನಿಮ್ಮ ಹಿರಿತನ ಹಾಗೂ ಅನುಭವದ ಘನತೆಯನ್ನು ಕುಗ್ಗಿಸಿದೆ. ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ರೀತಿಯಲ್ಲಿ ಹೇಳಿಕೆ ನೀಡಿರುವ ರೀತಿ ಅತ್ಯಂತ ವಿಪರ್ಯಾಸವೇ ಸರಿ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಷ್ಪ್ರಭಕ್ತರ ಸಂಘಟನೆ, ಭಾರತೀಯ ಜನತಾ ಪಾರ್ಟಿಯು ರಾಷ್ಟ್ರ ಕಟ್ಟುವುದಕ್ಕಾಗಿ ಸಂಕಲ್ಪಿಸಿ ಜನ್ಮತಾಳಿದ ರಾಜಕೀಯ ಪಕ್ಷ, ಕಾಂಗ್ರೆಸ್ ನಂತೆ ವ್ಯಕ್ತಿ ಪೂಜೆ, ಕುಟುಂಬ ಪೂಜೆಗೆ ತನ್ನನ್ನು ತೊಡಗಿಸಿಕೊಂಡ ಪಕ್ಷವಲ್ಲ, ಭಟ್ಟಂಗಿತನ ನಿಮ್ಮ ಪಕ್ಷದ ಧ್ಯೇಯಘೋಷ, ಎಂದೂ ರಾಷ್ಟ್ರದ ಬಗ್ಗೆ ಚಿಂತನೆ ನಡೆಸದೇ,ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯದೇ ಬಡವರನ್ನು ಬಡವರನ್ನಾಗಿಯೇ ಇರಿಸಿದ ಪಾಪದ ಫಲ ಇಂದಿನ ನಿಮ್ಮ ಕಾಂಗ್ರೆಸ್ ನ ಹೀನಾಯ ಸ್ಥಿತಿಗೆ ಕಾರಣವಾಗಿದೆ. ಇಷ್ಟಾಗಿಯೂ ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದರ ಬದಲು ಬಿಜೆಪಿ, ಆರ್.ಎಸ್.ಎಸ್ ಗೆ 'ನಾವು ತಿರುಗಿ ಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ' ಎಂಬ ನಿಮ್ಮ ಹೇಳಿಕೆ 'ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು' ಎಂಬಂತಾಗಿದೆ.

ನಿಮ್ಮ ಪಕ್ಷದ ಒಬ್ಬರು, ಬಿಜೆಪಿ-ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ ಎಂದು ಆರ್ಭಟಿಸಿದರೆ, ಮತ್ತೊಬ್ಬರು ರಾಜ್ಯದ ಯಾವುದೇ ಭಾಗದಲ್ಲಿ ಬಿಜೆಪಿ ತನ್ನ ಚಟುವಟಿಕೆ ನಡೆಸಲು ಎಲ್ಲಿಯೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡುತ್ತಾರೆ. ಕರ್ನಾಟಕದಲ್ಲಿ ಪಾಳೆಗಾರಿಕೆ ರಾಜಕಾರಣಕ್ಕೆ, ಸರ್ವಾಧಿಕಾರಿ ಆಡಳಿತಕ್ಕೆ ಅವಕಾಶ ಇಲ್ಲ ಎಂಬುದರ ಇತಿಹಾಸ ನಿಮಗೆ ಹಾಗೂ ನಿಮ್ಮ ಪಕ್ಷದವರಿಗೆ ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆ

ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!

ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪ

SCROLL FOR NEXT