ಯು.ಟಿ ಖಾದರ್ 
ರಾಜಕೀಯ

ಯತ್ನಾಳ್ ಇನ್ನೂ ರಾಜೀನಾಮೆ ಕೊಟ್ಟಿಲ್ಲ, ಹೀಗಾಗಿ ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ: ಸ್ಪೀಕರ್

ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಾಕಿದ ಸವಾಲನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಸಚಿವ ಶಿವಾನಂದ ಪಾಟೀಲ್ ಅವರು ನೀಡಿದ ರಾಜೀನಾಮೆ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್ ಅವರು, ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಅವರಿಗೆ ಇನ್ನೊಬ್ಬರು ಶಾಸಕರು ವೈಯಕ್ತಿಕ ಸವಾಲು ಹಾಕಿದ್ದಾರೆ. ಸವಾಲು ಸ್ವೀಕಾರ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದರು.

ಪಾಟೀಲ್ ಅವರು ಷರತ್ತುಬದ್ಧ ರಾಜೀನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ಹೀಗಾಗಿ ಪಾಟೀಲ್ ಅವರ ರಾಜೀನಾಮೆ ಅಂಗೀಕರಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

ವೈಯಕ್ತಿಕ ವಿಚಾರಗಳನ್ನು ರಾಜಕಾರಣದಲ್ಲಿ ಬಳಸಬೇಕೋ ಇಲ್ಲವೊ ಅನ್ನೋದು ಅವರವರ ವಿವೇಚನೆ ಬಿಟ್ಟಿರುವ ವಿಚಾರ. ಎಲ್ಲವೂ ಬದಲಾಗುತ್ತಿರುವ ಹಾಗೆ ರಾಜಕಾರಣವೂ ಬದಲಾಗುತ್ತಿದೆ, ಪಾಟೀಲ್ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಪರಿಶೀಲನೆ ಮಾಡುತ್ತೇನೆ ಎಂದು ಖಾದರ್ ಹೇಳಿದರು.

ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ್ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ ಪಾಟೀಲ್’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲು ಸ್ವೀಕರಿಸಿದ ಶಿವಾನಂದ ಪಾಟೀಲ್ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಬಸನಗೌಡ ಪಾಟೀಲ್ ಯಾತ್ನಾಳ್ ರಾಜೀನಾಮೆ ನೀಡಿದ ನಂತರ ತಮ್ಮ ರಾಜೀನಾಮೆ ಅಂಗೀಕರಿಸಬೇಕು ಎಂದು ಶಿವಾನಂದ ಪಾಟೀಲ್ ಷರತ್ತು ಹಾಕಿದ್ದಾರೆ.

ರಾಜೀನಾಮೆ ಪತ್ರ ನೀಡಿದ ಬಳಿಕ ಸುದ್ದಿಗಾರರ ಜತೆ‌ ಮಾತನಾಡಿ ಶಿವಾನಂದ ಪಾಟೀಲ್ ಅವರು, ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಇದು ವೈಯಕ್ತಿಕ ತೀರ್ಮಾನ. ಯತ್ನಾಳ್ ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT