ಸ್ಪೀಕರ್ ಯುಟಿ ಖಾದರ್ 
ರಾಜಕೀಯ

ಯುಟಿ ಖಾದರ್ 'ಧಾರ್ಮಿಕ ಮತಾಂಧ': ಸ್ಪೀಕರ್ ವಿರುದ್ಧ ಬಿಜೆಪಿ ಕೆರಳಿ ಕೆಂಡವಾಗಿದ್ದೇಕೆ?

ಯುಟಿ ಖಾದರ್ ಅವರ ಹೇಳಿಕೆಯಿಂದ ಅವರ ಜಿಹಾದಿ ಮನಸ್ಥಿತಿ ಬಹಿರಂಗಗೊಂಡಿದೆ ಎಂದು ಕುಂಪಾಲ ಅವರು ವಾಗ್ದಾಳಿ ನಡೆಸಿದರು.

ಮಂಗಳೂರು: ಹಿಂದುತ್ವ ಕಾರ್ಯಕರ್ತ ಮತ್ತು ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ 2022 ರಲ್ಲಿ ಹತ್ಯೆಗೀಡಾದ ಮೊಹಮ್ಮದ್ ಫಾಜಿಲ್ ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧ ಶನಿವಾರ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖಾದರ್ ಅವರು, ಫಾಜಿಲ್ ಅವರ ತಂದೆ ಮತ್ತು ಸಹೋದರರೊಂದಿಗೆ ಮಾತನಾಡಿದ್ದು, ಅವರು ಸುಹಾಸ್ ಶೆಟ್ಟಿ ಹತ್ಯೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈ ಕೊಲೆ 'ವೈಯಕ್ತಿಕ ದ್ವೇಷ'ದಿಂದ ನಡೆದಿರಬಹುದು ಎಂದು ಖಾದರ್ ತಿಳಿಸಿದ್ದರು.

ಆದರೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಫಾಜಿಲ್ ಸಹೋದರ ಆದಿಲ್, ಸುಹಾಸ್ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಹಿರಂಗಪಡಿಸಿದ ಬಳಿಕ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಜಿಲ್ಲೆಯ ಶಾಸಕರು ಸೇರಿದಂತೆ ಬಿಜೆಪಿ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಖಾದರ್ ಅವರನ್ನು 'ಧಾರ್ಮಿಕ ಮತಾಂಧ' ಎಂದು ಟೀಕಿಸಿದರು.

ಫಾಜಿಲ್ ಸಹೋದರ ಕೊಲೆಯಲ್ಲಿ ಭಾಗಿಯಾಗಿರುವ ಬಗ್ಗೆ ಖಾದರ್ ಈಗ ಏನು ಹೇಳುತ್ತಾರೆ? ಬಂಧನವಾಗುವ ಮೊದಲೇ ಸ್ಪೀಕರ್ ಅಂತಹ ಹೇಳಿಕೆ ನೀಡಿದರೆ ಪೊಲೀಸರು ನ್ಯಾಯಯುತ ತನಿಖೆ ನಡೆಸುವುದು ಹೇಗೆ? ಸ್ಪೀಕರ್ ಆಗಿ ಅವರು ಅಂತಹ ಹೇಳಿಕೆಯನ್ನು ಹೇಗೆ ನೀಡಬಹುದೇ? ಎಂದು ಕುಂಪಲ ಪ್ರಶ್ನಿಸಿದರು.

ಯುಟಿ ಖಾದರ್ ಅವರ ಹೇಳಿಕೆಯಿಂದ ಅವರ ಜಿಹಾದಿ ಮನಸ್ಥಿತಿ ಬಹಿರಂಗಗೊಂಡಿದೆ ಎಂದು ಕುಂಪಾಲ ಅವರು ವಾಗ್ದಾಳಿ ನಡೆಸಿದರು.

ಆರೋಪಿಗಳು ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸುವ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ಸ್ಟೇಟಸ್ ಮೂಲಕ ಸುಹಾಸ್ ಹತ್ಯೆಯನ್ನು ಘೋಷಿಸಿದ್ದರು ಎಂದು ಆರೋಪಿಸಿ ಕುಂಪಾಲ, ಪೊಲೀಸರು ಏಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

"ಸರ್ಕಾರ, ಪೊಲೀಸರು ಮತ್ತು ಎಲ್ಲರೂ ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ. ಅವರು ತ್ವರಿತವಾಗಿ ಕಾರ್ಯನಿರ್ವಹಿಸಿದ್ದರೆ, ಸುಹಾಸ್ ಇಂದು ಜೀವಂತವಾಗಿರುತ್ತಿದ್ದರು. ಬಜ್ಪೆ ಪೊಲೀಸರ ಮೇಲೆ ಬಲವಾದ ಅನುಮಾನವಿದೆ ಮತ್ತು ಅವರ ಪಾತ್ರದ ಬಗ್ಗೆ ತನಿಖೆ ಮಾಡಬೇಕು" ಎಂದು ಅವರು ಒತ್ತಾಯಿಸಿದರು.

ಗೃಹ ಸಚಿವ ಜಿ ಪರಮೇಶ್ವರ ಅವರು ಕೋಮು ವಿರೋಧಿ ಪಡೆ ರಚಿಸುವ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ ಅವರು, ಸುಹಾಸ್ ಹತ್ಯೆಯಲ್ಲಿ ನ್ಯಾಯ ಸಿಗುವ ಬಗ್ಗೆ ಸ್ವಲ್ಪವೂ ಭರವಸೆ ಇಲ್ಲ. ಈ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT