ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ತಾಕತ್ತಿದ್ದರೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಿ: ಶಿವಾನಂದ್ ಪಾಟೀಲ್'ಗೆ ಯತ್ನಾಳ್ ಸವಾಲು

ಶಿವಾನಂದ ಪಾಟೀಲ್ ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು, ಸಂಪುಟದ ಹಿರಿಯ ಸಚಿವರೊಬ್ಬರು ಈ ರೀತಿಯಾದ ರಾಜಕೀಯ ನಾಟಕವಾಡುತ್ತಿರುವುದು ಹಾಸ್ಯಾಸ್ಪದ.

ಬೆಂಗಳೂರು: ನಿಜಕ್ಕೂ ತಾಕತ್ತಿದ್ದರೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಲಿ ಎಂದು ಸಚಿವ ಶಿವಾನಂದ ಪಾಟೀಲ್ ಅವರಿಗೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಸವಾಲು ಹಾಕಿದ್ದಾರೆ.

ಶಿವಾನಂದ ಪಾಟೀಲ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಶಿವಾನಂದ ಪಾಟೀಲ್ ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು, ಸಂಪುಟದ ಹಿರಿಯ ಸಚಿವರೊಬ್ಬರು ಈ ರೀತಿಯಾದ ರಾಜಕೀಯ ನಾಟಕವಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

ಉತ್ತರನ ಪೌರುಷ ಒಲೆಯ ಮುಂದೆ ಎಂಬಂತಿದೆ. ರಾಜೀನಾಮೆ ಅಂಗೀಕಾರ ಆಗೋದಿಲ್ಲ ಅಂತ ಗೊತ್ತಿದ್ದರೂ ಪುಕ್ಕಟೆ ಪ್ರಚಾರಕ್ಕೆ ರಾಜೀನಾಮೆ ಕೊಟ್ಟು ರಾಜೀನಾಮೆಯನ್ನು ತಿರಸ್ಕೃತವಾಗುವಂತ ಪ್ರಭೃತಿಗಳು ಇದ್ದಾರೆ ಎಂಬುದೇ ಸೋಜಿಗದ ಸಂಗತಿ. ಶಾಸಕರು ರಾಜೀನಾಮೆ ಕೊಡುವುದಕ್ಕೆ ರೀತಿ ರಿವಾಜು ಇರುತ್ತೆ ಎಂಬುದು ಇವರಿಗೆ ಗೊತ್ತಿಲ್ಲವೇ.

ಇವರು ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು. ಸಭಾಧ್ಯಕ್ಷರಾದ ಖಾದರ್ ಅವರು ಈ ರೀತಿಯಾದ ರಾಜೀನಾಮೆ ಸ್ವೀಕೃತವಾಗುವುದಿಲ್ಲ ಎಂಬುದನ್ನು ಅವರಿಗೆ ತಿಳಿಸಬೇಕಾಗಿತ್ತು. ಸಚಿವ ಸಂಪುಟದ ಹಿರಿಯ ಸಚಿವರೊಬ್ಬರು ಈ ರೀತಿಯಾದ ರಾಜಕೀಯ ನಾಟಕವಾಡುತ್ತಿರುವುದು ಹಾಸ್ಯಾಸ್ಪದವಾಗಿದೆ.

ರಾಜೀನಾಮೆ ಸರಿಯಾದ ವಿಧಾನದಲ್ಲಿಲ್ಲ ಎಂದು ಸ್ವೀಕರಿಸುವ ವೇಳೆಯಲ್ಲೇ ಖಾದರ್ ಅವರು ಹೇಳಬೇಕಾಗಿತ್ತು. ನೀವು ಮಾಡುತ್ತಿರುವ ನಾಟಕವನ್ನು ಪ್ರಜ್ಞಾವಂತ ಮತದಾರರು, ಕ್ಷೇತ್ರದ ಜನತೆ ಗಮನಿಸಿ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎಂಬುದನ್ನು ಮರೆಯದಿರಿ. ಇವರಿಗೆ ನಿಜಕ್ಕೂ ತಾಕತ್ತಿದ್ದರೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಲಿ ಎಂದು ಸವಾಲು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT