ಛಲವಾದಿ ನಾರಾಯಣಸ್ವಾಮಿ 
ರಾಜಕೀಯ

ಚುನಾವಣೆಯಲ್ಲಿ ಅಂಬೇಡ್ಕರ್ ಸೋಲು: ಕಾಂಗ್ರೆಸ್ ನಾಯಕರು ತಮ್ಮ ಹೇಳಿಕೆ ಸಾಬೀತುಪಡಿಸಿದರೆ ಒಂದು ಲಕ್ಷದ ಒಂದು ರೂಪಾಯಿ ಬಹುಮಾನ!

ಕಾಂಗ್ರೆಸ್ ನಾಯಕರು ಬಾಬಾಸಾಹೇಬ್ ಅಂಬೇಡ್ಕರ್ ರವರ ಸೋಲಿನ ಸಂಬಂಧ ತಮ್ಮ ಮಾತನ್ನು ಸಾಬೀತುಪಡಿಸಿದರೆ ನನ್ನ ಸ್ವಂತ ವೇತನದಲ್ಲಿ ಒಂದು ಲಕ್ಷದ ಒಂದು ರೂಪಾಯಿಯನ್ನು ಬಹುಮಾನವಾಗಿ ನೀಡುತ್ತೇನೆ.

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಅಂಬೇಡ್ಕರ್ ಸೋಲಿಸಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದು, ಅವರು ತಮ್ಮ ಮಾತನ್ನು ಸಾಬೀತುಪಡಿಸಿದರೆ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುವುದಲ್ಲದೆ, ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದ್ದಾರೆ.

ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೈರಾಂ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ ಅವರು, ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿಲ್ಲ. ಬಾಬಾಸಾಹೇಬರನ್ನು ಸೋಲಿಸಿದ್ದು ಕಮ್ಯುನಿಸ್ಟ್ ಪಕ್ಷದ ಡಾಂಗೆ ಮತ್ತು ಆರ್‍ಎಸ್‍ಎಸ್‍ನ ಸಾವರ್ಕರ್ ಎಂದು ಹೇಳಿದ್ದಾರೆ. ಈ ನಾಲ್ವರು ನಾಯಕರು ತಮ್ಮ ಮಾತನ್ನು ಸಾಬೀತುಪಡಿಸಿದರೆ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ನಿವೃತ್ತಿ ಘೋಷಿಸಲು ಸಿದ್ಧ ಎಂದು ಪ್ರಕಟಿಸಿದರು.

ಒಂದು ಲಕ್ಷದ ಒಂದು ರೂ. ಬಹುಮಾನ: ಕಾಂಗ್ರೆಸ್ ನಾಯಕರು ಬಾಬಾಸಾಹೇಬ್ ಅಂಬೇಡ್ಕರ್ ರವರ ಸೋಲಿನ ಸಂಬಂಧ ತಮ್ಮ ಮಾತನ್ನು ಸಾಬೀತುಪಡಿಸಿದರೆ ನನ್ನ ಸ್ವಂತ ವೇತನದಲ್ಲಿ ಒಂದು ಲಕ್ಷದ ಒಂದು ರೂಪಾಯಿಯನ್ನು ಬಹುಮಾನವಾಗಿ ನೀಡುತ್ತೇನೆ. ಒಂದು ವೇಳೆ ಸಾಬೀತುಪಡಿಸುವಲ್ಲಿ ವಿಫಲರಾದರೆ ನಾಲ್ವರು ನಾಯಕರು ರಾಜೀನಾಮೆ ನೀಡಲು ಮತ್ತು ರಾಜಕೀಯದಿಂದ ನಿವೃತ್ತಿ ನೀಡಲು ಸಿದ್ದರಿದ್ದಾರೆಯೇ? ಎಂದು ಸವಾಲು ಹಾಕಿದರು.

ಡಬಲ್ ಇಂಜಿನ್ ಸುಳ್ಳುಗಾರರು: ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಮಗ ಡಬಲ್ ಇಂಜಿನ್ ಸುಳ್ಳುಗಾರರು. ಇಂತಹ ಖರ್ಗೆಗಳಿಂದ ಬಾಬಾಸಾಹೇಬ್ ಮತ್ತು ದಲಿತರಿಗೆ ಅನ್ಯಾಯವಾಗಿದೆ. ಅಂಬೇಡ್ಕರ್ ರವರಿಗೆ ಈ ದೇಶದಲ್ಲಿ ನ್ಯಾಯ ಸಿಗಲಿಲ್ಲವೆಂದು ಹೇಳಿದ್ದು, ಕಾಂಗ್ರೆಸ್ ಪಕ್ಷವು 65 ವರ್ಷ ಆಳ್ವಿಕೆ ಮಾಡಿ ಏಕೆ ನ್ಯಾಯ ಕೊಡಲಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರು ಸಂವಿಧಾನ ಕಾಪಾಡುವುದು ನಮ್ಮ ಹಕ್ಕು ಎಂದು ಹೇಳುತ್ತಾರೆ. ಸಂವಿಧಾನ ಕಾಪಾಡುವುದು ಮಾತ್ರ ಕಾಂಗ್ರೆಸ್ ನವರ ಹಕ್ಕು ಮಾತ್ರವೇ? ಎಂದು ಕೇಳಿದರು. ಸಂವಿಧಾನವನ್ನು ಕಾಪಾಡುವುದು ಈ ರಾಜ್ಯದ ಮತ್ತು ದೇಶದ ಜನರ ಹಕ್ಕಾಗಿದೆ. ಬಾಬಾಸಾಹೇಬರ ಸಂವಿಧಾನದಿಂದ ಈ ದೇಶದ ಚಹಾ ಮಾರುವ ವ್ಯಕ್ತಿ ಪ್ರಧಾನಿಯಾಗಿದ್ದಾರೆ ಎಂದು ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರು ಹೇಳಿದ್ದು, ಕಾಂಗ್ರೆಸ್ ನಾಯಕರ ಬಾಯಿಯಲ್ಲಿ ಇಂತಹ ಮಾತುಗಳು ಬಂದಿರುವುದಿಲ್ಲ. ಸಂವಿಧಾನಕ್ಕೆ ನಿಜವಾದ ಅಪಮಾನ ಮಾಡಿರುವುದು ಅದು ಕಾಂಗ್ರೆಸ್ ನವರ ಕಾಲದಲ್ಲಿ ಎಂದು ಟೀಕಿಸಿದರು.

ರಾಹುಲ್ ಗಾಂಧಿಗೆ ಬುದ್ಧಿ ತಲೆಯಲ್ಲಿ ಇದೆಯೋ ಅಥವಾ ಪಾದಗಳಲ್ಲಿ ಇದೆಯೋ: ಃಋಈ ದೇಶದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಈ ದೇಶದ ಸಂವಿಧಾನ ಸಾವಿರ ವರ್ಷಗಳ ಹಿಂದೆ ಬಂದಿದೆ ಎಂದು ಹೇಳಿಕೆ ನೀಡುತ್ತಾರೆ. ಅವರಿಗೆ ಬುದ್ಧಿ ತಲೆಯಲ್ಲಿ ಇದೆಯೋ ಅಥವಾ ಪಾದಗಳಲ್ಲಿ ಇದೆಯೋ ಎಂದು ನನಗೆ ಅರ್ಥವಾಗುತ್ತಿಲ್ಲ. ಈ ರೀತಿ ಹೇಳಿಕೆ ನೀಡಿದ ರಾಹುಲ್ ಗಾಂಧಿ ಯವರು ವಿರುದ್ಧ ಕಾಂಗ್ರೆಸ್ ನಾಯಕರು ಯಾವುದೇ ಮಾತನಾಡದಿರುವುದು ಸಂವಿಧಾನ ಮತ್ತು ಬಾಬಾಸಾಹೇಬರಿಗೆ ಅಪಚಾರ; ನೀವು ಹೇಗೆ ಸಂವಿಧಾನವನ್ನು ಕಾಪಾಡುತ್ತೀರಿ ಎಂದು ತಿಳಿಸಿದರು.

ಬಾಬಾಸಾಹೇಬರಿಗೆ ಗೌರವ ಸಿಕ್ಕಿರುವುದು ಬಿಜೆಪಿ ಕಾಲದಲ್ಲಿ. ಬಾಬಾಸಾಹೇಬರು ಸತ್ತಾಗ ಆರಕ್ಕೆ ಮೂರು ಜಾಗ ನೀಡಲು ನೀವು ಯೋಗ್ಯರಿರಲಿಲ್ಲ. ಕಾಂಗ್ರೆಸ್ಸಿನ ಗುಲಾಮಗಿರಿಯಲ್ಲಿ ನೀವು ಅವರಿಗೆ ನೂರಾರು ಎಕರೆ ಭೂಮಿಗಳನ್ನು ನೀಡಿದ್ದು, ಬಾಬಾಸಾಹೇಬರಿಗೆ ಯಾಕೆ ನೀಡಲಿಲ್ಲ ಹಾಗೂ ಅವರ ಪಂಚ ಕ್ಷೇತ್ರಗಳನ್ನು ಏಕೆ ರಾಷ್ಟ್ರೀಯ ಸ್ಮಾರಕಗಳನ್ನಾಗಿ ಮಾಡಲಿಲ್ಲ. ಬಿಜೆಪಿ ಯವರು ನಿಮ್ಮನ್ನು ಕೇಳಬೇಕಿತ್ತೇ ಬಾಬಾಸಾಹೇಬರಿಗೆ ಗೌರವ ನೀಡಲು. ಈ ವಿಷಯವನ್ನು ಏಕೆ ಖರ್ಗೆ ರವರು ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.

KPSC ಸಭೆಗೂ ಅತೀಕ್ ಗೂ ಏನು ಸಂಬಂಧ: ಕಾಂಗ್ರೆಸ್ ಸರ್ಕಾರದ ಆಡಳಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಶೂನ್ಯವಾಗಿದೆ. ಕೆಪಿಎಸ್‍ಸಿ ಯ ಸಭೆಗೂ ಮತ್ತು ಅತೀಕ್ ಎಂಬ ನಿವೃತ್ತ ಅಧಿಕಾರಿಗೂ ಏನು ಸಂಬಂಧ. ಅತೀಕ್ ರವರು ಖಾಸಗಿ ಹೋಟೆಲ್‍ನಲ್ಲಿ ಸಭೆ ನಡೆಸಿ ಅಭ್ಯರ್ಥಿಗಳಿಗೆ 8 ಗಂಟೆ ರಾತ್ರಿಯಲ್ಲಿ 12 ಗಂಟೆ ಒಳಗಡೆ ಪರೀಕ್ಷೆಯ ಪ್ರವೇಶ ಪತ್ರ ತೆಗೆದುಕೊಳ್ಳಲು ಅವರು ಸೂಚಿಸುತ್ತಾರೆ. ಎಲ್ಲಾ ನಿರ್ಧಾರಗಳನ್ನು ಅತೀಕ್ ರವರೇ ತೆಗೆದುಕೊಳ್ಳುತ್ತಾರೆ ಎಂದು ಕೆಪಿಎಸ್‍ಸಿ ಸದಸ್ಯರು ಹೇಳಿಕೆ ನೀಡುತ್ತಾರೆ. ಮುಖ್ಯಮಂತ್ರಿಗಳೇ ನಿಮಗೆ ಅವರ ಮೇಲೆ ಬಹಳ ಅಭಿಮಾನವಿದ್ದರೆ ಮತ್ತು ಅವರನ್ನು ಆತ್ಮೀಯರಾಗಿ ಬಳಕೆ ಮಾಡಬೇಕೆಂದರೆ ನಿಮ್ಮ ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ನೀಡಿ ಎಂದು ಆಗ್ರಹಿಸಿದರು.

ಸುಹಾಸ್ ಶೆಟ್ಟಿಯದು ಸರ್ಕಾರಿ ಪ್ರಯೋಜಿತ ಕೊಲೆ: ಸುಹಾಸ್ ಹತ್ಯೆಗೆ ಸರ್ಕಾರದಿಂದಲೇ ಫಾಝಿಲ್ ತಮ್ಮನಿಗೆ ಸುಫಾರಿಗೆಂದು 5 ಲಕ್ಷ ರೂ ನೀಡಿದ್ದಾರೆ ಪೊಲೀಸ್ ಆಯುಕ್ತರ ವರದಿಯಲ್ಲಿ ತಿಳಿಸಿದ್ದು, ಆದರೆ ಈ ವರದಿಯನ್ನು ಸಮರ್ಥಿಸಿಕೊಳ್ಳಲು ವಿಧಾನಸಭಾ ಅಧ್ಯಕ್ಷರಾದ ಮಾನ್ಯ ಯು.ಟಿ ಖಾದರ್ ರವರು ಹೋಗಿ ಅವರೇ ಬೆತ್ತಲಾಗಿದ್ದಾರೆ. ನನ್ನ ಅನಿಸಿಕೆಯ ಪ್ರಕಾರ ಯು.ಟಿ ಖಾದರ್ ರವರು ಈ ವಿಷಯದಲ್ಲಿ ಮೂಗು ತೂರಿಸಬಾರದಿತ್ತು. ಈ ರೀತಿ ಸಮರ್ಥಿಸಿಕೊಂಡಿರುವ ಯು.ಟಿ ಖಾದರ್ ರವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಒಳಮೀಸಲಾತಿ ಜಾರಿ ನಂಬಿಕೆ ಇಲ್ಲ: ಕಾಂಗ್ರೆಸ್ ಸರ್ಕಾರವು ಒಳಮೀಸಲಾತಿ ನೀಡುತ್ತದೆ ಎಂದು ನನಗೆ ನಂಬಿಕೆ ಇಲ್ಲ. ಆದರೆ ಕೇಂದ್ರ ಸರ್ಕಾರವು ಜನಗಣತಿ ಸಮೀಕ್ಷೆಗೆ ಆದೇಶ ಮಾಡುತ್ತಿದೆ. ಜನಗಣತಿ ಮಾಡುವುದಕ್ಕೆ ಯಾವುದೇ ರಾಜ್ಯ ಸರ್ಕಾರಗಳಿಗೆ ಅಧಿಕಾರವಿಲ್ಲ. ಇಂತಹ ಸಮಯದಲ್ಲಿ ಅಧಿಕಾರವಿರುವ ಕೇಂದ್ರ ಸರ್ಕಾರ ಸಮೀಕ್ಷೆ ಮಾಡಿದ ನಂತರ ರಾಜ್ಯದ ಅಂಕಿಅಂಶಗಳ ಸಮೀಕ್ಷೆಗೂ ಮತ್ತು ಕೇಂದ್ರ ಅಂಕಿಅಂಶಗಳ ಸಮೀಕ್ಷೆಗೂ ವ್ಯತ್ಯಾಸವಾದರೆ ಯಾರು ಉತ್ತರ ಕೊಡುತ್ತಾರೆ ಎಂದು ಪ್ರಶ್ನಿಸಿದರು. ಜನರಿಗೆ ಕಷ್ಟ ಬಂದಾಗ ಮತ್ತು ಸರ್ಕಾರವನ್ನು ಪ್ರಶ್ನಿಸಲು ವಿರೋಧ ಪಕ್ಷದವರಾಗಿ ನಾವು ಸ್ಥಳಕ್ಕೆ ಹೋಗಬೇಕು. ಆದರೆ ಕಾಂಗ್ರೆಸ್ ಸರ್ಕಾರವು ಅದನ್ನು ರಾಜಕೀಯವೆಂದು ವಿಶ್ಲೇಷಿಸುತ್ತದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT