ಸಚಿವ ಸತೀಶ್ ಜಾರಕಿಹೊಳಿ 
ರಾಜಕೀಯ

ಜಾತಿಗಣತಿ ವಿವಾದ: ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವ ಎಲ್ಲಾ ಹಕ್ಕು ನನಗಿದೆ- ಸಚಿವ ಸತೀಶ್ ಜಾರಕಿಹೊಳಿ

ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ.

ಹುಬ್ಬಳ್ಳಿ: ನಾನು ಸರ್ಕಾರದ ಸರ್ಕಾರದ ಭಾಗವಾಗಿದ್ದರೂ, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ನಿರ್ಧಾರಗಳನ್ನು ವಿರೋಧಿಸುವ ಎಲ್ಲಾ ಹಕ್ಕು ನನಗಿದೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಹೇಳಿದರು.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ಜಾತಿ ಜನಗಣತಿ ವರದಿ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ. ಅಂತಹ ಯಾವುದೇ ನಿರ್ಧಾರವನ್ನು ತಿರಸ್ಕರಿಸುವ ಅಧಿಕಾರವೂ ನನಗಿದೆ ಎಂದು ಹೇಳಿದರು.

ಇದೇ ವೇಳೆ ಜಾತಿ ಜನಗಣತಿ ವರದಿಯ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸಚಿವರು ಒಪ್ಪಿಕೊಂಡರು.

ಭಿನ್ನಾಭಿಪ್ರಾಯ ಹೊಂದಿರುವವರು ತಮ್ಮ ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಸರ್ಕಾರ ನಮ್ಮ ಅಭಿಪ್ರಾಯಗಳನ್ನು ಪರಿಗಣಿಸುತ್ತದೆ ಎಂದು ವಿಶ್ವಾಸವಿದೆ ಎಂದು ಹೇಳಿದರು.

ಮೇ 9 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗುವ ನಿರೀಕ್ಷೆಯಿರುವುದರಿಂದ, ಏನಾಗುತ್ತದೆ ಎಂದು ನೋಡೋಣ ಎಂದರು.

ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಜಾತಿ ಗಣತಿ ವಿಚಾರದಲ್ಲಿ ಬಿಜೆಪಿ ಯೂಟರ್ನ್ ಹೊಡೆದಿದೆ. ಜಾತಿ ಗಣತಿ ಬಗ್ಗೆ ಅವರಿಗೆ ಏಕಾಏಕಿ ಪ್ರೀತಿ ಬಂದಿದೆ ಎಂದು ವ್ಯಂಗ್ಯವಾಡಿದರು.

ನಾವು ಜಾತಿ ಗಣತಿ ಮಾಡಿದಾಗ ಬಿಜೆಪಿಯವರು ವಿರೋಧ ಮಾಡಿದರು. ಈಗ ಕೇಂದ್ರ ಸರಕಾರ ಜಾತಿ ಗಣತಿ ಮಾಡುವ ತೀರ್ಮಾನ ಕೈಗೊಂಡಿರುವುದಕ್ಕೆ, ಪ್ರಧಾನಿಗೆ ದೂರದೃಷ್ಟಿಯಿದೆ ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

'ನಾನೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೊತ್ತು, ಖಂಡಿತಾ ನಮ್ಮಿಬ್ಬರದ್ದು ಹಾಲು-ಜೇನಿನ ಸಂಬಂಧ': D K ಶಿವಕುಮಾರ್

ವಾಯುಮಾರ್ಗ ಬಂದ್ ಎಫೆಕ್ಟ್: ದುಬೈಗೆ ಹೊರಟ Emirates ವಿಮಾನ KIAಗೆ ವಾಪಸ್

SCROLL FOR NEXT