ವಿಜಯೇಂದ್ ಮತ್ತು ಸಂತೋಷ್ ಲಾಡ್  
ರಾಜಕೀಯ

ಆಪರೇಶನ್ ಸಿಂಧೂರ ಹೆಸರಲ್ಲಿ ರೀಲ್ಸ್ ಶೋಕಿ ಮಾಡುವ ನಾಚಿಕೆಗೇಡಿತನಕ್ಕೆ ನಿಮ್ಮ ಪಕ್ಷವೇ ಸಾಟಿ ಬಿಡಿ: ಸಂತೋಷ್ ಲಾಡ್

ಪಾಕ್ ಆಕ್ರಮಿತ ಕಾಶ್ಮೀರವನ್ನು ಪುನಃ ಪಡೆದುಕೊಳ್ಳುವ ಅವಕಾಶವಿದ್ದಾಗಲೂ ಕೈಚೆಲ್ಲಿದ ಮಹಾನುಭಾವ ಯಾರು ಎಂಬುದು ಇಡೀ ದೇಶ ಹಾಗೂ ಜಗತ್ತಿಗೇ ಬಟಾಬಯಲಾದ ಸತ್ಯ.

ಬೆಂಗಳೂರು: ಭಾರತದ ಸಿರಿ ಕಿರೀಟ ಕಾಶ್ಮೀರದ ಪೆಹೆಲ್ಗಾಮ್ ನ ಬೈಸನ್ ವ್ಯಾಲಿಯಲ್ಲಿ ಸರಿಯಾದ ಭದ್ರತಾ‌ ಸಿಬ್ಬಂದಿಯನ್ನು ನಿಯೋಜಿಸಿದೆ ಬೇಜವಾಬ್ದಾರಿ ಮೆರೆದವರು ಯಾರು? ಕಾಶ್ಮೀರಿ ಪಂಡಿತರ ಮೇಲಾದ ದೌರ್ಜನ್ಯಗಳನ್ನು ಕೇವಲ ಚುನಾವಣಾ ಪ್ರಚಾರದ ಸರಕಾಗಿಸಿಕೊಂಡು ಅವರ ಭಾವನೆಗಳೊಂದಿಗೆ ಆಟವಾಡುತ್ತಿರುವವರು ಯಾರು? ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ಪುನಃ ಪಡೆದುಕೊಳ್ಳುವ ಅವಕಾಶವಿದ್ದಾಗಲೂ ಕೈಚೆಲ್ಲಿದ ಮಹಾನುಭಾವ ಯಾರು ಎಂಬುದು ಇಡೀ ದೇಶ ಹಾಗೂ ಜಗತ್ತಿಗೇ ಬಟಾಬಯಲಾದ ಸತ್ಯ.

ಪ್ರಜಾಪ್ರಭುತ್ವದಲ್ಲಿ ಕುಟುಂಬ ರಾಜಕಾರಣದ ವಿರೋಧಿ ಎಂದು ಬಿಂಬಿಸುವ ರೀತಿಯಲ್ಲಿ ಮೆರೆದ ತಾವು ಇಂದಿಗೂ ನಿಮ್ಮ ತಂದೆಯ ಹೆಸರಿಲ್ಲದೇ ಚಲಾವಣೆಯಾಗದ ನಾಣ್ಯ ಎಂಬ ಸತ್ಯ ನಮಗಿಂತ ನಿಮ್ಮದೇ ಅಧ್ಯಕ್ಷಗಿರಿ ಸಹಿಸುತ್ತಿರುವ ಬಿಜೆಪಿ ಕರ್ನಾಟಕದಲ್ಲಿರುವ ನಿರಾಶ್ರಿತರಿಗೆ ಚೆನ್ನಾಗಿ ಗೊತ್ತಿದೆ. ಭಾರತದ ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಾವು ಹಾಗೂ ನಮ್ಮ ಕಾಂಗ್ರೆಸ್

ಪಕ್ಷ ಕೇಂದ್ರ ಸರ್ಕಾರದ ಜೊತೆ ಗಟ್ಟಿಯಾಗಿ‌ ನಿಲ್ಲುತ್ತಲೇ ಬಂದಿದ್ದೇವೆ. ಈ ವಿಷಯದಲ್ಲಿ ನಮ್ಮ ದೇಶದ ವೀರ ಯೋಧೆ ಸೋಫಿಯಾ ಖುರೇಷಿಯವರನ್ನು ಪಾಪಿ ಪಾಕಿಸ್ತಾನಿಗಳೊಂದಿಗೆ ಹೋಲಿಸಿ, ವಿಕೃತವಾಗಿ ಉಡಾಫೆ ಮಾತಾಡುವ ನಿಮ್ಮ ಬಿಜೆಪಿ ಪಕ್ಷದವರಿಂದ ಕಲಿಯುವಂತಹ ಯಾವ ಹರಕತ್ತು ನಮ್ಮ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವ ಎಲ್ಲ ಶಕ್ತಿ ನಮ್ಮ ರಕ್ಷಣಾ ಪಡೆಗಳಿಗಿದ್ದರೂ ಸಹ ಯಾರದೋ ಅಪ್ಪಣೆಗೆ ತಲೆಬಾಗಿ ಶರಣಾದದ್ದು ಯಾವ ಪುರುಷಾರ್ಥಕ್ಕಾಗಿ ಎಂದು ಶತಕೋಟಿ ಭಾರತೀಯರೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳುತ್ತಿದ್ದಾರೆ.

ದೇಶದ ಜನರ ಭಾವನೆಗಳಿಗೆ ವಿರುದ್ಧವಾಗಿ, ನಮ್ಮ ಅಮಾಯಕ ಸಹೋದರಿಯರ ಸಿಂಧೂರ ಅಳಿಸಿದ ಪಾಪಿಗಳನ್ನು ನಿರ್ಮೂಲನೆ ಮಾಡುವುದನ್ನು ಬಿಟ್ಟು ಕದನವಿರಾಮ ಘೋಷಿಸಿದ್ದನ್ನು ಸಹ ನಿಮ್ಮಂತಹ ಅಪ್ಪನ ಹೆಸರನ್ನು ಟ್ರಂಪ್ ಕಾರ್ಡ್ ಮಾಡಿಕೊಂಡು ಬದುಕುತ್ತಿರುವವರೆಲ್ಲ ಬಹುಪರಾಕ್ ಹೇಳಿಕೊಂಡು ತಿರುಗುತ್ತಿರುವುದನ್ನು ನೋಡಿದರೆ ಭಾರತೀಯರು ನಿಮಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂಬುದನ್ನು ಮೇಲಿನವರನ್ನು ಮೆಚ್ಚಿಸಲು ಒಟಗುಟ್ಟುವುದನ್ನು ಬಿಟ್ಟು ಅರ್ಥ ಮಾಡಿಕೊಳ್ಳುವುದು ಒಳಿತು.

ಕೊನೆಗೊಂದು ಮಾತು, ಆಪರೇಶನ್ ಸಿಂಧೂರದ ಹೆಸರಲ್ಲಿ ರೀಲ್ಸ್ ಶೋಕಿ ಮಾಡುತ್ತ, ಇಂತಹ ಸೂಕ್ಷ್ಮ ವಿಚಾರವನ್ನು ಸಹ ಚುನಾವಣೆ ಸರಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದ ನಾಚಿಕೆಗೇಡಿತನಕ್ಕೆ ನಿಮ್ಮ ಪಕ್ಷವೇ ಸಾಟಿ ಬಿಡಿ ಎಂದು ತಪರಾಕಿ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT