ಸಂತೋಷ್ ಲಾಡ್, ಪ್ರತಾಪ್ ಸಿಂಹ 
ರಾಜಕೀಯ

ಮರಾಠಿಯ ಸಂತೋಷ್ ಲಾಡ್ ಬಾಯಲ್ಲಿ ಅಬ್ದುಲ್ ಖಾನ್ ರೀತಿ ಮಾತು; ಅವರೊಬ್ಬ ತಿಳಿಗೇಡಿ: ಪ್ರತಾಪ್ ಸಿಂಹ ವಾಗ್ದಾಳಿ!

ಪ್ರಧಾನಿ ಮೋದಿ ಬಗ್ಗೆ ಮಾತನಾಡದೇ ಇದ್ದರೆ ಲಾಡ್‌ಗೆ ತಿಂದಿದ್ದು ಜೀರ್ಣ ಆಗಲ್ಲ. ಮರಾಠ ಸಮುದಾಯದ ಸಂತೋಷ್ ಲಾಡ್ ಬಾಯಲ್ಲಿ ಶಿವಾಜಿ ರೀತಿಯ ಮಾತು ಬರುತ್ತಿಲ್ಲ. ಅಬ್ದುಲ್‌ ಖಾನ್ ರೀತಿಯ ಮಾತು ಬರುತ್ತಿದೆ.

ಮೈಸೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಪ್ರಧಾನಿ ಮೋದಿ ಬಗ್ಗೆ ಮಾತನಾಡದೇ ಇದ್ದರೆ ಲಾಡ್‌ಗೆ ತಿಂದಿದ್ದು ಜೀರ್ಣ ಆಗಲ್ಲ. ಮರಾಠ ಸಮುದಾಯದ ಸಂತೋಷ್ ಲಾಡ್ ಬಾಯಲ್ಲಿ ಶಿವಾಜಿ ರೀತಿಯ ಮಾತು ಬರುತ್ತಿಲ್ಲ. ಅಬ್ದುಲ್‌ ಖಾನ್ ರೀತಿಯ ಮಾತು ಬರುತ್ತಿದೆ. ಸಂತೋಷ್ ಲಾಡ್ ಒಬ್ಬ ತಿಳಿಗೇಡಿ ಎಂದರು.

ನೇಹಾ ಹತ್ಯೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದರೆ ಮೋದಿಯನ್ನು ಕೇಳ್ರಿ ಅಂತಾರೆ?, ಹತ್ಯೆ ಮಾಡಿದವನ ಎನ್ ಕೌಂಟರ್ ಗೆ ಮೋದಿ ಅನುಮತಿ ಏಕೆ ಬೇಕು ಲಾಡ್? ಒಂದು ವರ್ಷವಾಯ್ತು, ನೇಹಾಗೆ ನ್ಯಾಯ ಕೊಡಿಸಿದ್ರಾ? ಎಂದು ಟೀಕಾ ಪ್ರಹಾರ ನಡೆಸಿದರು.

1971ರಲ್ಲಿ ಇಂದಿರಾ ಗಾಂಧಿ ಏನ್ ಕಡಿದು ಕಟ್ಟೆ ಹಾಕಿದ್ರು? ಅವತ್ತಿನ ಯುದ್ಧದ ಗೆಲುವನ್ನು ಹಾಳು ಮಾಡಿದ್ದೇ ಇಂದಿರಾ ಗಾಂಧಿ ಎಂಬುದು ನೆನಪಿರಲಿ. ಕಾಶ್ಮೀರದಿಂದ ಕನ್ನಡಿಗರನ್ನು ಕರೆತರಲು ಅವಕಾಶ ಕಲ್ಪಿಸಿದ್ದು, ಮೋದಿ .ಅದರಲ್ಲಿ ನಿಮ್ಮ ಸಾಧನೆ ಏನಿದೆ? ನಿಮ್ಮ ಅನಿಷ್ಟಕ್ಕೆಲ್ಲ ಮೋದಿ ಕಾರಣ ಎಂಬಂತೆ ಯಾಕೆ ಮಾತನಾಡುತ್ತೀರಿ ಎಂದು ಪ್ರಶ್ನಿಸಿದರು.

ಮೈ ತುಂಬಾ ಗಣಿಗಾರಿಕೆ ದುಡ್ಡಿನ ಮದ: ಸಂತೋಷ್ ಲಾಡ್ ಗೆ ಮೈ ತುಂಬಾ ಗಣಿಗಾರಿಕೆ ದುಡ್ಡಿನ ಮದ ತುಂಬಿದೆ. ಹೊರಗಡೆ ಮಾತ್ರ ತಾನು ಬಹಳ ಸಾಚಾ ಅಂತ ಬಿಲ್ಡಪ್ ಕೊಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಅಕ್ರಮದ ಆರೋಪ ಕೇಳಿ ಬಂದಿದ್ದರಿಂದ ಕಾರ್ಮಿಕ ಕಿಟ್ ಹಗರಣದಿಂದ ಬಚಾವ್ ಆಗಿದ್ದರೆ, ಇಲ್ಲದಿದ್ದರೆ ರಾಜೀನಾಮೆ ಕೊಡಬೇಕಾಗಿತ್ತು ಎಂದು ಕಿಡಿಕಾರಿದರು.

ಪಾಕಿಸ್ತಾನವೇ ತನ್ನ ಮೇಲೆ ದಾಳಿ ಆಗಿರುವುದಕ್ಕೆ ಸಾಕ್ಷಿ ಕೊಟ್ಟಿದೆ. ಆದರೂ ಭಾರತದಲ್ಲಿ ಕೆಲವರ ತಕರಾರು ನಿಲ್ಲುತ್ತಿಲ್ಲ. ಕಾಂಗ್ರೆಸ್ ನವರಿಗೆ ಪಾಕಿಸ್ತಾನ ಕಂಡ್ರೆ ಪ್ರೀತಿ ಜಾಸ್ತಿ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT