ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಕೊಟ್ಟ ಜಾಗ ನುಂಗಿದ್ದು ಯಾರು? ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ನಾಯಕ: ಎಚ್.ಡಿ ಕುಮಾರಸ್ವಾಮಿ

ಇವರು ಶಾಶ್ವತವಾಗಿ ಇರುತ್ತಾರಾ? ಮುಂದೆ ಬದಲಾಗಲಿದೆ, ಅದು ನನಗೆ ಗೊತ್ತಿದೆ. ಈಗ ಜಮೀನುಗಳಿಗೆ ಬೆಲೆ ಇಲ್ವಾ? ಅವರ ಜಮೀನುಗಳಿಗೆ ಬೆಲೆ ಏರಬಹುದು.

ನವದೆಹಲಿ: ತಮ್ಮ ತಮ್ಮ ಜಮೀನುಗಳಿಗೆ ಬೆಲೆ ಏರಿಕೆಯಾಗಿರಬಹುದು ಹೀಗಾಗಿ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಮುಂದಾಗಿರಬಹುದು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಗಿತ್ತು. ಇದೀಗ ಅವರ (ಡಿಕೆಶಿ) ಜಮೀನುಗಳಿಗೆ ಬೆಲೆ ಏರಿಸಿಕೊಳ್ಳಲು ಹಾಗೆ ಮಾಡಿರಬಹುದು. ಈ ರಾಜಕರಣಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳಲ್ಲ. ಕೇಂದ್ರ ಗೃಹ ಸಚಿವರಿಗೆ ಕಳುಹಿಸಿದ್ದು, ಅವರ ಬಳಿ ಪ್ರಸ್ತಾಪ ತಿರಸ್ಕೃತವಾಗಿದ್ದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇವರು ಶಾಶ್ವತವಾಗಿ ಇರುತ್ತಾರಾ? ಮುಂದೆ ಬದಲಾಗಲಿದೆ, ಅದು ನನಗೆ ಗೊತ್ತಿದೆ. ಈಗ ಜಮೀನುಗಳಿಗೆ ಬೆಲೆ ಇಲ್ವಾ? ಅವರ ಜಮೀನುಗಳಿಗೆ ಬೆಲೆ ಏರಬಹುದು. 40 ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಎಸ್​​ಐಟಿ ಏನೋ ಮಾಡಿದ್ದರಲ್ಲಾ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ನನ್ನ ಮೇಲೆ ಗದಾಪ್ರಹಾರ ಮಾಡ್ತಿದ್ದರಲ್ಲಾ, ಇವರು ಮಾಡಿಕೊಂಡದ್ದರಲ್ಲಿ ಶೇ 50 ಸರ್ಕಾರಿ ಜಮೀನುಗಳಿವೆ. ಇವರು ಮಾಡಿರುವುದು ನಮಗೆ ಗೊತ್ತಿದೆ. ಶಾಂತಿನಗರದ ದಲಿತರ ಜಾಗ ನುಂಗಿದ್ದು ಯಾರು? ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಕೊಟ್ಟ ಜಾಗ ನುಂಗಿದ್ದು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಹಿಂದುಳಿದ ವರ್ಗಗದವರನ್ನು ಗುರಿಯಾಗಿಸಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಸಚಿವ ಪರಮೇಶ್ವರ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್​​ನ ಪ್ರಭಾವಿ ನಾಯಕನೇ ಕಾರಣ‌ ಎಂದರು.

ಸಿಎಂ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿದೆ. ಹೆಣ್ಣು ಮಗಳು ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ. ಪರಮೇಶ್ವರ್ ದಲಿತರ ಸಮಾವೇಶ ಮಾಡಲು ಹೊರಟರು. ತಾವೇ ಮುಂದಿನ ಸಿಎಂ ಆಗುತ್ತೇನೆ ಎಂದು ಸಮಾವೇಶಕ್ಕೆ ಮುಂದಾದರು. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರಭಾವಿ ನಾಯಕನೇ ಅವರನ್ನು ಸಿಲುಕಿಸಿದ್ದಾರೆ.

ಇದೆಲ್ಲಾ ಸಿಎಂ ಸಿದ್ದರಾಮಯ್ಯಗೆ ಗೊತ್ತಿಲ್ಲವೇ? ಮುಂದೆ ಸಿಎಂ ಆಗಲು ಟವಲ್ ಹಾಸಿಕೊಂಡು ಇರುವವರೇ ಸಂದೇಶ ನೀಡಿದ್ದಾರೆ. ಈ ಪ್ರಕರಣ ಹೊರಬರಲು ಸಂದೇಶ ನೀಡಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ. ಸಿಎಂ ಹತ್ತಿರ ಗುಪ್ತಚರ ಇಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT