ಸತೀಶ್ ಜಾರಕಿಹೊಳಿ 
ರಾಜಕೀಯ

ಬಿ.ಕೆ ಹರಿಪ್ರಸಾದ್ ಮನೆಗೆ CM ಭೇಟಿ: ರಾಜಕೀಯ ನಿಂತ ನೀರಲ್ಲ, ಬದಲಾಗುತ್ತಲೇ ಇರುತ್ತೆ- ಸತೀಶ್ ಜಾರಕಿಹೊಳಿ

ಡಾ. ಪರಮೇಶ್ವರ ನಮ್ಮ ಮನೆಗೆ ಬಂದರೆ ನಾನು ಅವರ ಮನೆಗೆ ಹೋಗುತ್ತೇನೆ. ಇವೆಲ್ಲವೂ ಸಾಮಾನ್ಯ. ರಾಜಕೀಯದಲ್ಲಿ ಶಾಶ್ವತ ಶತ್ರು ಅಥವಾ ಮಿತ್ರರಿಲ್ಲ. ರಾಜಕೀಯ ಯಾವಾಗಲೂ ಒಂದೇ ರೀತಿ ಇರುವುದಿಲ್ಲ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರನ್ನು ಭೇಟಿ ಮಾಡುವುದರಲ್ಲಿ ವಿಶೇಷ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಗುರುವಾರ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಪರಮೇಶ್ವರ ನಮ್ಮ ಮನೆಗೆ ಬಂದರೆ ನಾನು ಅವರ ಮನೆಗೆ ಹೋಗುತ್ತೇನೆ. ಇವೆಲ್ಲವೂ ಸಾಮಾನ್ಯ. ರಾಜಕೀಯದಲ್ಲಿ ಶಾಶ್ವತ ಶತ್ರು ಅಥವಾ ಮಿತ್ರರಿಲ್ಲ. ರಾಜಕೀಯ ಯಾವಾಗಲೂ ಒಂದೇ ರೀತಿ ಇರುವುದಿಲ್ಲ, ಅದು ಬದಲಾಗುತ್ತಲೇ ಇರುತ್ತದೆ ಎಂದರು.

ಮುಖ್ಯಮಂತ್ರಿಗಳ ಭೇಟಿಯ ಬಗ್ಗೆ ತಿಳಿದುಕೊಳ್ಳಬೇಕಾದರೆ, ನೀವು ಬೆಂಗಳೂರಿನಲ್ಲಿ ಕೇಳಬೇಕು. ಅಲ್ಲಿ ನಿಮಗೆ ಉತ್ತರ ಸಿಗುತ್ತದೆ. ನಾನು ಕೇವಲ ಒಬ್ಬ ಸಚಿವ. ನೀವು ನನಗೆ ಅಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಅವರು ಹೇಳಿದರು.

ಪೌರಕಾರ್ಮಿಕರ ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, "ಅವರ ಬೇಡಿಕೆಗಳಿಗೆ ಒಂದು ಅರ್ಥವಿದೆ. ನಾವು ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ" ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್