ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್- ಪ್ರದೀಪ್ ಈಶ್ವರ್- ಪ್ರತಾಪ್ ಸಿಂಹ  online desk
ರಾಜಕೀಯ

ಪ್ರದೀಪ್ ಈಶ್ವರ್- ಪ್ರತಾಪ್ ಸಿಂಹ ವಾಕ್ಸಮರ ವಿಷಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಎಂಟ್ರಿ; ಯುವ ನಾಯಕರಿಗೆ ಸಚಿವೆ ಹೇಳಿದ್ದೇನು?

ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರ ನಡುವಿನ ವೈಯಕ್ತಿಕ ವಾಗ್ದಾಳಿಯ ವಿಷಯವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಇಬ್ಬರೂ ವೈಯಕ್ತಿಕ ವಾಗ್ದಾಳಿಗಳನ್ನು ನಿಲ್ಲಿಸಬೇಕೆಂದು ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ಇಬ್ಬರೂ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ಅಕ್ಕನಾಗಿ ಕಿವಿಮಾತು ಹೇಳುತ್ತಿದ್ದೇನೆ ಎಂದು ಸಚಿವೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪರಸ್ಪರ ಈ ಕೆಟ್ಟ ವಾಗ್ದಾಳಿಯನ್ನು ನಿಲ್ಲಿಸಿ ಯುವ ಸಮೂಹಕ್ಕೆ ಮಾದರಿಯಾಗಬೇಕು ಎಂದು ನಾಯಕರಿಗೆ ಕರೆ ನೀಡಿದ್ದಾರೆ. ಈ ನಾಯಕರು ಬಹಳ ಕೀಳು ಮಟ್ಟದ ಹೇಳಿಕೆಗಳನ್ನು ನೀಡಿದ್ದಾರೆ. ನಾನೂ ಸಹ ಅನೇಕ ಅವಮಾನಗಳನ್ನು ಎದುರಿಸಿದ್ದೇನೆ. ಜನರು ರಾಜಕಾರಣಿಗಳನ್ನು ನೋಡುತ್ತಿದ್ದಾರೆ, ನಾವು ಜನರಿಗೆ ಮಾದರಿಯಾಗಬೇಕು ಮತ್ತು ಅವಮಾನಕಾರಿಯಾಗಿ ವರ್ತಿಸಬಾರದು. ಜನರು ನಮ್ಮ ನಡವಳಿಕೆ ಮತ್ತು ಭಾಷೆಯನ್ನು ಗಮನಿಸುತ್ತಾರೆ. ನಿಮ್ಮ ಜಗಳದ ನಡುವೆ ಪೋಷಕರನ್ನು ಕರೆದು ತರುವುದು ಸರಿಯಲ್ಲ. ಈ ಕಿತ್ತಾಟವನ್ನು ಇಲ್ಲಿಗೆ ನಿಲ್ಲಿಸಿ. ನೀವಿಬ್ಬರೂ ಸಾಕಷ್ಟು ಬುದ್ಧಿವಂತರಿದ್ದೀರಿ, ಇದು ಒಬ್ಬ ಅಕ್ಕನಾಗಿ, ನಾನು ಅವರಿಬ್ಬರಿಗೂ ನೀಡುತ್ತಿರುವ ಸಲಹೆಯಾಗಿದೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇದೇ ವೇಳೆ ಸರ್ಕಾರದ ನಾಯಕತ್ವ ಬದಲಾವಣೆ, ನವೆಂಬರ್ ಕ್ರಾಂತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್, ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆ, ಕ್ರಾಂತಿ ಹೈಕಮಾಂಡ್‌ಗೆ ಸಂಬಂಧಿಸಿದ ವಿಷಯವಾಗಿದೆ. ನಾವೆಲ್ಲರೂ ಪಕ್ಷ ಏನು ಹೇಳುತ್ತದೆ ಎಂಬುದನ್ನು ಕೇಳುತ್ತೇವೆ. ಪಕ್ಷ ನಮ್ಮನ್ನು ಗುರುತಿಸಿ ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಪಕ್ಷದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ ಎಂದು ಸೂಚಿಸಿದರೆ, ನಾನು ಸಂತೋಷದಿಂದ ಅದನ್ನು ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಹಣೆಗೆ ಗನ್ ಇಟ್ಟು ತೇಜಸ್ವಿ ತನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದಾರೆ: ಪ್ರಧಾನಿ ಮೋದಿ

3ನೇ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ದಾಖಲೆಯ ಜಯ, ತವರಿನಲ್ಲೇ ಕಾಂಗರೂಗಳಿಗೆ ಮುಖಭಂಗ

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ: ಜೆಡಿಎಸ್ ಕಿಡಿ, Video

3ನೇ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 5 ವಿಕೆಟ್ ಭರ್ಜರಿ ಜಯ

ಬಿಹಾರ: ಪ್ರಚಾರದ ವೇಳೆ 'ಮೀನು ಹಿಡಿದ' ರಾಹುಲ್ ಗಾಂಧಿ! Video

SCROLL FOR NEXT