ಸಂಗ್ರಹ ಚಿತ್ರ 
ರಾಜಕೀಯ

ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಜನರ ರಕ್ತ ಹೀರುತ್ತಿದೆ..!

ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಕರ್ನಾಟಕದ ಜನರ ರಕ್ತ ಹೀರುತ್ತಿದೆ. ಇಷ್ಟು ದಿನ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದ ಕಾಂಗ್ರೆಸ್ ನಾಯಕರು, ಜಿಎಸ್'ಟಿ ಸರಳೀಕರಣದ ಬಳಿಕ ರಾಜ್ಯದಲ್ಲಿ ಬೆಲೆಗಳ ಇಳಿಕೆ ಮಾಡಬೇಕಿತ್ತು.

ಬೆಂಗಳೂರು: ಇಷ್ಟು ದಿನ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದ ಕಾಂಗ್ರೆಸ್ ನಾಯಕರು, ಇದೀಗ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು ರಾಜ್ಯದ ಜನರ ರಕ್ತ ಹೀರುತ್ತಿದ್ದಾರೆಂದು ಜೆಡಿಎಸ್ ಕಿಡಿಕಾರಿದೆ.

ನಂದಿನಿ ತುಪ್ಪದ ಬೆಲೆ ಏರಿಕೆಯಾಗಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ ಮಾಡಿರುವ ಜೆಡಿಎಸ್, ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದೆ.

ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಕರ್ನಾಟಕದ ಜನರ ರಕ್ತ ಹೀರುತ್ತಿದೆ. ಇಷ್ಟು ದಿನ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದ ಕಾಂಗ್ರೆಸ್ ನಾಯಕರು, ಜಿಎಸ್'ಟಿ ಸರಳೀಕರಣದ ಬಳಿಕ ರಾಜ್ಯದಲ್ಲಿ ಬೆಲೆಗಳ ಇಳಿಕೆ ಮಾಡಬೇಕಿತ್ತು. ಆದರೆ ಏಕಾಏಕಿ ನಂದಿನಿ ತುಪ್ಪದ ಬೆಲೆಯನ್ನು ಪ್ರತಿ ಕೆಜಿಗೆ 90 ರೂ. ಹಾಗೂ ಬೆಣ್ಣೆ ಪ್ರತಿ ಕೆಜಿಗೆ 38 ರೂ. ಏರಿಸುವ ಮೂಲಕ ಗ್ರಾಹಕರ ಹಗಲು ದರೋಡೆಗೆ ಇಳಿದಿದೆ. ಜನ ವಿರೋಧಿ ಕಾಂಗ್ರೆಸ್ ಸರ್ಕಾರದಿಂದ ನಾಡಿನ ಬಡವರು, ಜನಸಾಮಾನ್ಯರ ಉದ್ಧಾರ ಅಸಾಧ್ಯ ಎಂದು ಹೇಳಿದೆ.

ಕಾಂಗ್ರೆಸ್ ಸರ್ಕಾರದ ನಿರಂತರ ಬೆಲೆ ಏರಿಕೆಗೆ ಕನ್ನಡಿಗರು ಪ್ರತಿ ದಿನ ಬೆಂದು ಹೋಗುತ್ತಿದ್ದಾರೆ. ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರ ಹಿಡಿದ ಕಾಂಗ್ರೆಸ್, ಕಳೆದ ೨.೫ ವರ್ಷದಲ್ಲಿ ಮಾಡಿದ ಬೆಲೆ ಏರಿಕೆಗಳಿಗೆ ಲೆಕ್ಕವೇ ಇಲ್ಲ. ಅವೈಜ್ಞಾನಿಕ ಗ್ಯಾರಂಟಿಗಾಗಿ ಜನರ ಸುಲಿಗೆಯನ್ನೇ ವೃತ್ತಿಮಾಡಿಕೊಂಡು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಬಸ್, ಮೆಟ್ರೋ ಪ್ರಯಾಣ ದರ, ಹಾಲು, ಮೊಸರು, ನೀರು, ವಿದ್ಯುತ್ ಬೆಲೆ ಹೆಚ್ವಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಕಿಡಿಕಾರಿದೆ.

ಸಾಲ ಮಾಡಿಯಾದರೂ ತುಪ್ಪ ತಿನ್ನು" ಗಾದೆ ಮಾತಿದೆ. ಆದರೆ, ಕಾಂಗ್ರೆಸ್ ಸರ್ಕಾರ ಗ್ರಾಹಕರ ಹೊಟ್ಟೆ ಮೇಲೆ ಹೊಡೆದು ತುಪ್ಪ ತಿನ್ನುತ್ತಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆ ಮಾಡಿದ್ದರೂ, ಕಾಂಗ್ರೆಸ್‌ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ.

ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಿರಂತರವಾಗಿ ರಾಜ್ಯದ ಜನರಿಗೆ ದರ ಏರಿಕೆಯ ಬರೆ ಹಾಕುತ್ತ ಸುಲಿಗೆಗೆ ಇಳಿದಿದೆ ಎಂದು ವಾಗ್ದಾಳಿ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ. 27ರಷ್ಟು ಮತದಾನ, ನ. 14 ರಂದು ಹೊಸ ಸರ್ಕಾರ ರಚನೆ ಎಂದ ತೇಜಸ್ವಿ ಯಾದವ್

ಇಂದು 8ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ: ಸರ್ಕಾರಕ್ಕೆ ಡೆಡ್ ಲೈನ್, ಸಚಿವ ಪಾಟೀಲ್ ಸಂಧಾನ ಸಭೆ ವಿಫಲ-Video

ಒತ್ತಡ, ಹಣದುಬ್ಬರಕ್ಕೆ ಕುಸಿಯುತ್ತಿದೆ ಜನನ ಪ್ರಮಾಣ! (ಹಣಕ್ಲಾಸು)

ಮೊದಲ ಹಂತದ ಮತದಾನಕ್ಕೂ ಮುನ್ನವೇ ಪ್ರಶಾಂತ್ ಕಿಶೋರ್ ಗೆ ಭಾರೀ ಹಿನ್ನಡೆ: BJP ಸೇರಿದ ಜನ್ ಸುರಾಜ್ ಪಕ್ಷದ ಅಭ್ಯರ್ಥಿ

ಜ್ಯೋತಿಷ್ಯದಲ್ಲಿ ಆರೋಗ್ಯ ಕಂಡುಕೊಳ್ಳುವುದು ಹೇಗೆ: ದೇಹದ ಅನಾರೋಗ್ಯ ನಿರ್ಧರಿಸುವ ಗ್ರಹಗಳು ಯಾವುವು? 'ತ್ರಿದೋಷ' ಎಂದರೇನು?

SCROLL FOR NEXT